ಹಾವೇರಿ | ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದು, ಅವಮಾನಿಸಿದ ವಕೀಲನ ಬಂಧನಕ್ಕೆ ದಲಿತ ಒಕ್ಕೂಟ ಆಗ್ರಹ

Date:

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದು ಶೂ ಎಸೆದು ಹಲ್ಲೆ ಮಾಡಲು ಮುಂದಾದ ದೇಶದ್ರೋಹಿ ವಕೀಲ ಯಾವುದೇ ಜಾತಿ ಧರ್ಮದವನಾದರೂ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಈತನ ವಿರುದ್ಧ ಯುಎಪಿಎ ಕಾಯಿದೆ ಅಡಿ ಪ್ರಕರಣ ದಾಖಲಿಸಿ ಆತನ್ನು ಬಂಧಿಸಬೇಕು, ಅಲ್ಲದೆ ಆತನನ್ನು ವಿಚಾರಣೆಗೊಳಪಡಿಸಿ ಸತ್ಯವನ್ನು ಬಹಿರಂಗಗೊಳಿಸಬೇಕು ಎಂದು ದಲಿತ ಒಕ್ಕೂಟದ ಕಾರ್ಯಕರ್ತರು ಆಗ್ರಹಿಸಿದರು.

ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ದಲಿತ ಒಕ್ಕೂಟಗಳ ಸಹಯೋಗದೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿ ನ್ಯಾಯಮೂರ್ತಿ ಬಿ ಆರ್ ಗವಾಯಿಯವರ ಮೇಲೆ ಶೂ ಎಸೆದಿರುವುದನ್ನು ಖಂಡಿಸಿದ್ದು, ತಹಶೀಲ್ದಾರರ ಮೂಲಕ ರಾಷ್ಟಪತಿಯವರಿಗೆ ಮನವಿ ಸಲ್ಲಿಸಿದರು.

ದಲಿತ ಮುಖಂಡ ರಾಮಚಂದ್ರ ಕಲ್ಲೇರ ಮಾತನಾಡಿ, “ಈ ದೇಶದಲ್ಲಿ ಸಂವಿಧಾನವೇ ಅಪಾಯದಲ್ಲಿ ಸಿಲುಕಿದೆ. ಸಂವಿಧಾನ ಉಳಿಸುವ ಕೆಲಸವನ್ನು ದೇಶದ ಜನರು ಮಾಡಲೇಬೇಕಾದ ಅಗತ್ಯತೆ ಎದ್ದುಕಾಣುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂವಿಧಾನಕ್ಕೆ ಅಪಾಯ ತಂದೊಡ್ಡುವ ಮನಸ್ಸುಗಳ ವಿರುದ್ಧ ಹಗಲಿರುಳು ಹೋರಾಟ ಮಾಡುವುದು ಅನಿವಾರ್ಯವಾಗಿದ್ದು, ಬಾಬಾ ಸಾಹೇಬ ಅಂಬೇಡ್ಕರ್ ಅವರು ಹಾಕಿಕೊಟ್ಟ ಬುನಾದಿಯ ಮೇಲೆ ಚಲಿಸಿದ್ದೇ ಆದಲ್ಲಿ ದೇಶಾದ್ಯಂತ ಅಶಾಂತಿ ಮೂಡಿಸುವಂಥ ಕೈಗಳನ್ನು ಕಟ್ಟಿಹಾಕಬಹುದು” ಎಂದು ಅಭಿಪ್ರಾಯಪಟ್ಟರು.

“ಸಿಜೆಐ ಮೇಲೆ ಶೂ ಎಸೆದ ದುಷ್ಟ ವಕೀಲ ರಾಕೇಶ್ ಕಿಶೋರ್ ಉದ್ದೇಶ ದೇಶದ್ರೋಹಿ ನಡೆಯಾಗಿದ್ದು, ಕೂಡಲೇ ಸರ್ಕಾರ ಆತನನ್ನು ದೇಶದಿಂದಲೇ ಗಡಿಪಾರು ಮಾಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮಕ್ಕೂ ಮುನ್ನ ಪ್ರತಿಭಟನಾ ಮೆರವಣಿಗೆ ನಗರದ ಪ್ರವಾಸಿ ಮಂದಿರದಿಂದ ಹೊರಟು ಕನಕ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಘೋಷಣೆಗಳನ್ನು ಕೂಗುತ್ತ ತಾಲೂಕು ಪಂಚಾಯತ್ ಆವರಣದಲ್ಲಿರುವ  ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ಮೈಸೂರು | ‘ಇಂದಿರಾ ಆಹಾರ ಕಿಟ್’ ವಿತರಣೆಗೆ ರೈತ ಸಂಘದ ಸ್ವಾಗತ

ಪ್ರತಿಭಟನೆಯಲ್ಲಿ ಮುಖಂಡರಾದ ಪುಟ್ಟಪ್ಪ ನರೇಗಲ್, ಟಾಕನಗೌಡ ಪಾಟೀಲ್, ಜಯರಾಮ ಮಾಳಾಪುರ, ಕೊಟ್ರಪ್ಪ ಕುದರಿಸಿದ್ದನವರ, ಅನಿತಾ ಡಿಸೋಜ, ಚಂದ್ರಪ್ಪ ಹರಿಜನ, ಸಿದ್ಧನಗೌಡ ಪಾಟೀಲ, ವಿಜಯಕುಮಾರ್ ದೊಡ್ಡಮನಿ, ಎನ್ ಎಂ ಪೂಜಾರ, ಮಂಜುನಾಥ ಗೊರಣ್ಣನವರ್, ಅಣ್ಣಪ್ಪ ಚಿಕ್ಕಣ್ಣನವರ್, ಬರಮಣ್ಣ ಶಿವೂರ, ಉಮೇಶ್ ಮಾಳಗಿ, ಮಂಜುನಾಥ ಕರ್ಜಗಿ, ನೀಲಪ್ಪ ದೊಡ್ಡಮನಿ, ಶಿವಾನಂದ ಕನ್ನಕ್ಕನವರ್, ಹನುಮಂತಪ್ಪ ಯಳ್ಳೂರ, ಉಮೇಶ್ ದೊಡ್ಡಮನಿ, ಶಿವು ಭದ್ರಾವತಿ, ಶಿವು ತಳವಾರ, ಶಿವಪುತ್ರಪ್ಪ ಗಾಮನಗಟ್ಟಿ, ನಿಂಗಪ್ಪ ಹೊಸೂರು, ಮಾರುತಿ ಪೂರ್ಲಿ, ರಾಜಕುಮಾರ್ ಶಿರಪಂತಿ, ಸುರೇಶ್ ನಾಗಣ್ಣನವರ್, ಪೈರೋಜ್ ಶಿರಬಡಗಿ, ಮಂಜು ಯಳ್ಳೂರ, ಮಾರುತಿ ಹಂಚಗಿ, ರಾಮನಗೌಡ ಪಾಟೀಲ್, ಗನಿ ಪಾಳಾ, ರಾಜೇಶ್ ಲಮಾಣಿ, ಬಸವರಾಜ್ ದುಮ್ಮಣ್ಣನವರ, ರಮೇಶ್ ತಳವಾರ, ರವಿ ಜಾಲಗೇರಿ, ಶಂಭು ಕಳಸದ, ರೇಖಾ ಕರಿಬಿಮಣ್ಣನವರ, ಕುಮಾರ ಲಮಾಣಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...