ಹಾವೇರಿ | ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ

Date:

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜೆಎಂಎಫ್‌ಸಿ ನ್ಯಾಯಾಲಯವು ತಾಲೂಕಿನ ಪ್ರಾತಿನಿಧ್ಯವನ್ನು ಹೆಚ್ಚಿಸಲು, ನ್ಯಾಯಾಂಗ ಮತ್ತು ಸಮಾಜವನ್ನು ಬಲಪಡಿಸಲು ಪ್ರಮುಖ ಪಾತ್ರ ವಹಿಸುತ್ತದೆಂಬ ವಿಶ್ವಾಸವಿದೆ. ಶೀಘ್ರದಲ್ಲಿಯೇ ಸಂಚಾರಿ ನ್ಯಾಯಾಲಯ ಶಾಶ್ವತಗೊಳ್ಳಲಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾ. ಹೇಮಂತ ಚಂದನಗೌಡರ ಹೇಳಿದರು.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸಂಚಾರಿ ದಿವಾಣಿ ಮತ್ತು ಜೆಎಂಎಫ್‌ಸಿ(ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್) ನ್ಯಾಯಾಲಯ ಉದ್ಘಾಟಿಸಿ ಮಾತನಾಡಿದರು.

ನ್ಯಾ. ಕೃಷ್ಣ ದೀಕ್ಷಿತ್ ಮಾತನಾಡಿ, “ತ್ವರಿತ ನ್ಯಾಯ ಒದಗಿಸುವ ಮೂಲಕ ನ್ಯಾಯಾಂಗ ವ್ಯವಸ್ಥೆ ಮೇಲೆ ಜನರಿಗೆ ನಂಬಿಕೆ ಬರುವಂತೆ ಮಾಡಬೇಕು. ನ್ಯಾಯಾಂಗ ವ್ಯವಸ್ಥೆ ಕುಸಿಯಲು ಅವಕಾಶ ಕಲ್ಪಿಸಬಾರದು. ಕಕ್ಷಿದಾರರೊಂದಿಗೆ ಪ್ರೀತಿ, ಗೌರವ, ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು. ನೂತನ ನ್ಯಾಯಾಲಯದ ಕ್ರೀಯಾಶೀಲತೆ ಪ್ರಮಾಣ ಹೆಚ್ಚಾಗಬೇಕು. ವಕೀಲರು ಕನ್ನಡದಲ್ಲಿಯೇ ವಾದ ಮಂಡಿಸುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಹೆಚ್ಚುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಸಂವಿಧಾನ ಶಿಲ್ಪಿ ದಿನದರ್ಶಿಕೆ ಬಿಡುಗಡೆ

ಶಾಸಕ ಯು ಬಿ ಬಣಕಾರ ಮಾತನಾಡಿ, “ತಾಲೂಕಿನ ಗಡಿಭಾಗದ ಗ್ರಾಮಗಳ ನಿವಾಸಿಗಳಿಗೆ ಈ ನ್ಯಾಯಾಲಯ ಹೆಚ್ಚು ಅನುಕೂಲವಾಗಲಿದೆ. ಮನೆ ಮನೆಗೆ ನ್ಯಾಯ ಒದಗಿಸುವ ಮಹತ್ವದ ಕೆಲಸ ಇದರಿಂದ ನನಸಾಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ ಸಿ ಸದಾನಂದಸ್ವಾಮಿ, ಲೋಕೋಪಯೋಗಿ ಇಲಾಖೆ ಹಾವೇರಿ ವಿಭಾಗದ ಎನ್ ಎನ್ ಪಾಟೀಲ, ನೂತನ ತಾಲೂಕು ವಕೀಲದ ಸಂಘದ ಅಧ್ಯಕ್ಷ ಬಿ ಎಚ್ ಬನ್ನಿಕೋಡ, ಉಪಾಧ್ಯಕ್ಷ ಹಿರಿಯ ವಕೀಲ ಎಸ್ ವಿ ತೋಗರ್ಸಿ, ಪ್ರಧಾನ ಕಾರ್ಯದರ್ಶಿ ಮಾರುತಿ ಜೋಕನಾಳ, ಎಸ್ ಎಸ್ ಪಾಟೀಲ, ಕುಮಾರ ಕೋಟಿಹಾಳ, ಸದಸ್ಯ ಪಿ ಡಿ ಬಸನಗೌಡ್ರ, ವಿ ಆರ್ ದ್ರೌಪಕ್ಕಳವರ, ಸುರೇಶ ಬೆಣ‍್ಣಿ, ಅಬ್ದುಲ್ ರೆಹಮಾನ್ ಹೊನ್ನಾಳಿ, ಸುರೇಶ ದ್ಯಾವಕ್ಕಳವರ, ಫಕೀರೇಶ ತುಮ್ಮಿನಕಟ್ಟಿ ಸೇರಿದಂತೆ ವಕೀಲರು, ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...