ಹಾವೇರಿ | ಕನ್ನಡ ಭಾಷೆ ಬೆಳೆದರೆ ಮಾತ್ರ ಕನ್ನಡ ಸಾಹಿತ್ಯ ಬೆಳೆಯಲು ಸಾಧ್ಯ: ಕೊರಗಲ್ ವಿರೂಪಾಕ್ಷಪ್ಪ

Date:

“ಕನ್ನಡ ಭಾಷೆ ಬೆಳೆದರೆ ಮಾತ್ರ ಕನ್ನಡ ಸಾಹಿತ್ಯ ಬೆಳೆಯಲು ಸಾಧ್ಯ. ಕವಿಗಳಿಗೆ ನಿರಂತರವಾದ ಅಭ್ಯಾಸ ಬೇಕು. ಅಂದಾಗ ಮಾತ್ರ ಭಾವ ಜಗತ್ತಿನ ಕಾವ್ಯ ಸೃಷ್ಟಿಸಲು ಸಾಧ್ಯ” ಲೇಖಕ ಕೋರಗಲ್ ವಿರೂಪಾಕ್ಷಪ್ಪ ಹೇಳಿದರು.

ಹಾವೇರಿ ಪಟ್ಟಣದ ಹೊರವಲಯದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗಂಗಾಧರ ನಂದಿ ಸಾಹಿತ್ಯ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಹಾವೇರಿ ಹೋಬಳಿ ಘಟಕ’ದ ಉದ್ಘಾಟನಾ ಸಮಾರಂಭ ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಅನೇಕ ಯುವ ಕವಿಗಳ ಅಶ್ಲೀಲ ಕವಿತೆಗಳು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ವಿಕಾರ ಭಾವವನ್ನು ಹುಟ್ಟಿಸುವ ಇಂತಹ ಕಾವ್ಯ ಸಲ್ಲದು”ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿ, ‘ಸಾಹಿತ್ಯ ಭವನದ ನಿರ್ಮಾಣ ಕೆಲಸ ನಡೆಯುತ್ತಿದ್ದು, ಅಲ್ಲಿ ನಿರಂತರವಾಗಿ ಸಾಹಿತ್ಯಿಕ ಚಟುವಟಿಕೆಗಳು ನಡೆಯಲಿವೆ’ ಎಂದರು.
ಹೋಬಳಿ ಘಟಕದ ನೂತನ ಅಧ್ಯಕ್ಷರಾಗಿ ಗೀತಾ ಸುತ್ತಕೋಟಿ, ಕಾರ್ಯದರ್ಶಿಯಾಗಿ ನಾಗರಾಜ ಹುಡೇದ, ಕೋಶಾಧ್ಯಕ್ಷರಾಗಿ ರಾಜೇಂದ್ರ ಹೆಗಡೆ, ಸದಸ್ಯರಾಗಿ ಎಚ್.ಆರ್. ಹೊಸಮನಿ, ಚಂದ್ರಪ್ಪ ಸನದಿ, ಎಸ್.ವಿ. ಬಾರ್ಕಿ, ರಾಜಾಭಕ್ಷ ಹಾಗೂ ಅನಿತಾ ಟಿ.ಎಸ್. ಆಯ್ಕೆಯಾಗಿ ಅಧಿಕಾರ ವಹಿಸಿಕೊಂಡರು.

ಕವಿಗೋಷ್ಠಿಯಲ್ಲಿ ಸಿ.ಎಸ್. ಮರಳಿಹಳ್ಳಿ, ಕೆ.ಆರ್. ಹಿರೇಮಠ, ಜುಬೇದಾ ನಾಯಕ್, ಶಿವಯೋಗಿ ಚರಂತಿಮಠ, ಅರುಣ ಬಂಕಾಪೂರ, ಮಣಿಕಂಠ ಗೊದಮನಿ, ಅಕ್ಕಮಹಾದೇವಿ ನೀರಲಗಿ, ನೀಲಕಂಠಯ್ಯ ಓದಿಸೋಮಠ, ಗುಡ್ಡಪ್ಪ ಚಟ್ರಮ್ಮನವರ, ಶಶಿಕಲಾ ಅಕ್ಕಿ, ಸುರೇಖಾ ನೇರಳಿಕರ, ಮೇಘನಾ ಟಿ.ಎಸ್., ಅಕ್ಕಮಹಾದೇವಿ ಹಾನಗಲ್ಲ, ನೇತ್ರಾ ಅಂಗಡಿ, ಭಾರತಿ ಯಾವಗಲ್, ರೇಣುಕಾ ಗುಡಿಮನಿ, ಶಿವರಾಜ ಅರಳಿ, ಜಯಶ್ರೀ ಬುಡಪನಹಳ್ಳಿ, ಎಸ್.ವ್ಹಿ. ಬಾರ್ಕಿ ಹಾಗೂ ಜ್ಯೋತಿ ಬಿಶೆಟ್ಟಿಯವರ ಕವನ ವಾಚಿಸಿದರು.

ಸಾಹಿತಿ ಸತೀಶ ಕುಲಕರ್ಣಿ, ಹನುಮಂತಗೌಡ ಗೊಲ್ಲರ, ವೈ.ಬಿ. ಆಲದಕಟ್ಟಿ, ಎಸ್.ಎನ್. ದೊಡ್ಡಗೌಡರ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...