ಹಾವೇರಿ | ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರವೇ ಗಜಸೇನೆ ಒತ್ತಾಯ

Date:

ಹಾವೇರಿ ಜಿಲ್ಲೆಯ ತಡಸ ಗ್ರಾಮಕ್ಕೆ ಸಮರ್ಪಕ ಬಸ್ ಬಿಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಗಜಸೇನೆ ಒತ್ತಾಯಿಸಿ ಪ್ರತಿಭಟನೆ ನಡೆಸಿತು. ಬಳಿಕ ಸಾರಿಗೆ ಸಂಸ್ಥೆಯ ಅಧಿಕಾರಿ, ಡಿಪೋ ಮ್ಯಾನೇಜರ್ ಬಿ ಕೆ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಯಲ್ಲಿ ಕರವೇ ಗಜಸೇನೆ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ್ ಮಾತನಾಡಿ, “ಪ್ರತಿ ದಿನ ತಡಸದಿಂದ ಹುಬ್ಬಳ್ಳಿಗೆ ಸಂಚರಿಸುವ ಗ್ರಾಮೀಣ ಸಾರಿಗೆ ಬಸ್ಸುಗಳನ್ನು ಸರಿಯಾದ ಸಮಯಕ್ಕೆ ಬಿಡಬೇಕು. ಜೊತೆಗೆ ಈಗಿರುವ ಎರಡು ಬಸ್ಸುಗಳನ್ನು ಕನಿಷ್ಠ 8 ರಿಂದ 10ಕ್ಕೆ ಹೆಚ್ಚಿಸಬೇಕು. ಗ್ರಾಮದ ಬಸ್ ನಿಲ್ದಾಣದಲ್ಲಿ ಆಸನಗಳು ಕಮ್ಮಿ ಇದ್ದು ಹೆಚ್ಚಿಸುವುದರ ಜೊತೆಗೆ ಶೌಚಾಲಯ, ಕಟ್ಟಡಕ್ಕೆ ಸುಣ್ಣ ಬಣ್ಣ ಇಲ್ಲದೆ ಬಿಕೋ ಕಳೆ ಕುದ್ದಿದ್ದು, ಸರಿಪಡಿಸಬೇಕು” ಎಂದು ಒತ್ತಾಯಿಸಿದರು.

ಕರವೇ ಗಜಸೇನೆ ಜಿಲ್ಲಾ ಉಪಾಧ್ಯಕ್ಷ ಯೂಸುಫ್ ಸೈಕಲಗಾರ ಮಾತನಾಡಿ, “ಗ್ರಾಮಕ್ಕೆ ಸಮರ್ಪಕ ಬಸ್ಸಿನ ಸೌಲಭ್ಯ ಇರುವುದಿಲ್ಲ. ಇದರಿಂದ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುತ್ತದೆ. ಕೂಡಲೇ ಬಸಗಳನ್ನು ಹೆಚ್ಚಿಸಿ ಸಮಸ್ಯೆ ಬಗೆಹರಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಹಾವೇರಿ 6

ಮನವಿಯನ್ನು ಸ್ವೀಕರಿಸಿದ ಸಾರಿಗೆ ಸಂಸ್ಥೆಯ ಅಧಿಕಾರಿ ನಾಗರಾಜ್ ಅವರು ತಮ್ಮೆಲ್ಲಾ ಬೇಡಿಕೆಗಳನ್ನು ಕೇವಲ 8-10 ದಿನಗಳಲ್ಲಿ ಪೂರ್ಣಗೊಳಿಸುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಕರವೇ ಗಜಸೇನೆಯ ಜಿಲ್ಲಾಧ್ಯಕ್ಷರಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಲ್ಲಪ್ಪ ಮರಾಠ, ರಟ್ಟಿಹಳ್ಳಿ ತಾಲೂಕು ಅಧ್ಯಕ್ಷ ರಾಮಚಂದ್ರಪ್ಪ ಹಿಂಡಸಗೇರಿ, ರಟ್ಟಿಹಳ್ಳಿ ತಾಲೂಕು ಯುವ ಘಟಕದ ಅಧ್ಯಕ್ಷ ಖಲಂದರ ಯಲದಳ್ಳಿ, ರಟ್ಟಿಹಳ್ಳಿ ತಾಲೂಕು ಉಪಾಧ್ಯಕ್ಷ ಇಮ್ರಾನ್, ರಟ್ಟಿಹಳ್ಳಿ ತಾಲೂಕು ಸಂಚಾಲಕ ಸನಾವುಲ್ಲಾ, ತಾಲೂಕಾ ಸಹ ಕಾರ್ಯದರ್ಶಿ ಪಾಝಿಲ್ ಪುರದಗೆರಿ, ಸದಸ್ಯರಾದ ರಿಝ್ವಾನ್ ಪುರದಗೇರಿ, ಶಿಗ್ಗಾಂವ್ ತಾಲೂಕು ಅಧ್ಯಕ್ಷ ಶಂಕರ ಬಡಿಗೇರ, ತಡಸ ಗ್ರಾಮ ಘಟಕದ ಅಧ್ಯಕ್ಷ ದಾವಲಸಾಬ ಸಿಕಂದರ, ಶಿಗ್ಗಾಂವ್ ತಾಲೂಕು ಪ್ರಧಾನ ಕಾರ್ಯದರ್ಶಿ ರೇವಣ ಸಿದ್ದಯ್ಯ ಹಿರೇಮಠ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...