ಹಾವೇರಿ | ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರು, ಸಿಬ್ಬಂದಿ ನೇಮಿಸುವಂತೆ ಕರವೇ ಸ್ವಾಭಿಮಾನಿ ಬಣ ಒತ್ತಾಯ

Date:

“ಹಂಸಭಾವಿಯ ಪ್ರಾಥಮಿಕ ಆರೋಗ್ಯ ಕೇಂದ್ರವು ಹೋಬಳಿ ಮಟ್ಟದಿಂದ ಕೂಡಿದ್ದು ಅಕ್ಕಪಕ್ಕದ ಸುಮಾರು ಹಳ್ಳಿಗಳಿಂದ ಬರುವ ರೋಗಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬಂದರೆ ಚಿಕಿತ್ಸೆಗೆ ಸಂಬಂಧ ಪಟ್ಟ ಕೆಲವೊಂದು ವೈದ್ಯರು ಲಭ್ಯವಿರದೇ ಇರುವುದರಿಂದ ರೋಗಿಗಳು ಬೇರೆ ತಾಲ್ಲೂಕುಗಳಾದ ಶಿಕಾರಿಪುರ ಮತ್ತು ರಾಣೆಬೆನ್ನೂರಿಗೆ ಹೆಚ್ಚಿನ ಚಿಕಿತ್ಸೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಕರವೇ ಸ್ವಾಭಿಮಾನಿ ಬಣ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಹಂಸಭಾವಿ ಹೋಬಳಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಲಿ ಇರುವ ವೈದ್ಯರು ಮತ್ತು ಇತರೆ ಸಿಬ್ಬಂದಿ ನೇಮಕಾತಿ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ವತಿಯಿಂದ ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಪ್ರಾಥಮಿಕ ಅರೋಗ್ಯ ಆಸ್ಪತ್ರೆಯಲ್ಲಿ ಡಿ. ದರ್ಜೆ ನೌಕರರು ಮತ್ತು ಮೂಲ ಸೌಕರ್ಯದ ಕೊರತೆ ಇರುವುದರಿಂದ ಇಲ್ಲಿಗೆ ಬರುವ ಗರ್ಭಿಣಿಯರಿಗೆ, ಬಾಣಂತಿಯರಿಗೆ ಮತ್ತು ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿದೆ. ಹಾಗೂ ಆಸ್ಪತ್ರೆಯು ಸರ್ಕಾರದ ನಿಯಮದ ಪ್ರಕಾರ 24 ಗಂಟೆ ಕಾರ್ಯನಿರ್ವಹಿಸಬೇಕು. ಆದರೆ ಆಸ್ಪತ್ರೆಯಲ್ಲಿರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಸಮಯ ಪಾಲನೆ ಮಾಡದೇ ತಮಗೆ ಮನ ಬಂದಂತೆ ಕರ್ತವ್ಯ ನಿರ್ವಹಿಸುತ್ತಾರೆ. ಹಾಗಾಗಿ ಕೂಡಲೇ ಈ ಮನವಿಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ ರವಾನೆ ಮಾಡಬೇಕು. ಇಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಬಗೆ ಹರಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಶಾಲೆಯ ಮೇಲ್ಛಾವಣಿ ಕುಸಿತ; ಶಿಕ್ಷಕ, ಮಕ್ಕಳಿಗೆ ಗಾಯ

“ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಅಹೋರಾತ್ರಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಬಣ ಜಿಲ್ಲಾ ಉಪಾಧ್ಯಕ್ಷರು ಯೊಸುಫ್ ಸೈಕಲಗಾರ, ಮುಖಂಡರು ಖಲಂದರ್ ಎಲೆದಹಳ್ಳಿ, ಪ್ರಕಾಶ ಡಂಬರ, ದಾದಾಪೀರ ಮಲ್ಲಾಡದ, ಸಂಜೀವ ಜಕ್ಕೂರ, ಮಹ್ಮದ್ ಇಸ್ಮಾಯಿಲ್, ಸುನೀಲ್ ಬಳ್ಳಾರಿ, ಸುನೀಲ್ ಬ್ಯಾಡಗಿ, ದೇವರಾಜ್ ಇಳಗೇರ, ಸಾಹೀಲ್ ಬ್ಯಾಡಗಿ, ಪುಟ್ಟೇಶ ಇಳಗೇರ, ಸೈಜಾದ ಜಮಖಂಡಿ, ಮಾಲತೇಶ ಇಳಗೇರ, ಸಹಬಾಜ್ ಹಿತ್ತಲಮನಿ, ವಿನಾಯಕ ತಳವಾರ, ಆಜಂ ಎಲೆದಹಳ್ಳಿ, ಹನುಮಂತ ತಳವಾರ, ನವೀನ ತಳವಾರ ಇನ್ನೂ ಅನೇಕರು ಉಪಸ್ಥಿತರಿದ್ದರು,

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...