ಹಾವೇರಿ | ಶಿಗ್ಗಾಂವ್ ಬಸ್ ನಿಲ್ದಾಣದ ಸ್ವಚ್ಛತೆಗೆ ಆಗ್ರಹಿಸಿ ಕರವೇ ಗಜಪಡೆ ಪ್ರತಿಭಟನೆ

Date:

ಶಿಗ್ಗಾಂವ ಬಸ್‌ ನಿಲ್ದಾಣದ ಶೌಚಾಲಯವನ್ನು ಸ್ವಚ್ಛತೆ ಮಾಡುವ ಕುರಿತು ಹಲವಾರು ಬಾರಿ ಸಂಬಂದಪಟ್ಟ ಡಿಪೋ ವ್ಯವಸ್ಥಾಪಕರಿಗೆ ಮೌಖಿಕವಾಗಿ ಮತ್ತು ಲಿಖಿತ ರೂಪದಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಕರವೇ ಗಜಪಡೆ ಜಿಲ್ಲಾಧ್ಯಕ್ಷ ಯಲ್ಲಪ್ಪ ಮರಾಠ ಅಸಮಧಾನ ವ್ಯಕ್ತಪಡಿಸಿದರು.

ಶಿಗ್ಗಾಂವ ಬಸ್ ನಿಲ್ದಾಣವನ್ನು ಸ್ವಚ್ಚಗೊಳಿಸಿ, ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣದ ಬಸ್‌ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಗಜಪಡೆ ಕಾರ್ಯಕತೃರು ಪ್ರತಿಭಟನೆ ನಡೆಸಿ, ಸವನೂರು ಡಿಪೋ ಮ್ಯಾನೇಜರ ಕೆ ಬಿ ಅಮ್ಮನಗಿ ಅವರಿಗೆ ಮನವಿ ಸಲ್ಲಿಸಿ, ಜಿಲ್ಲಾಧ್ಯಕ್ಷ ಮಾತನಾಡಿದರು.

“ಬಸ್‌ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ಕಸ ಪ್ಲಾಸ್ಟಿಕ್‌ ಬಿದ್ದಿದೆ. ವಿಕಲಚೇತನರ ಶೌಚಾಲಯ, ಸಾರ್ವಜನಿಕ ಶೌಚಾಲಯ ಸ್ವಚ್ಚತೆಯಿಂದ ಮರೀಚಿಕೆಯಾಗಿದೆ.  ಇಂದಿರಾ ಕ್ಯಾಂಟೀನ ಕಾಮಗಾರಿ ಅಪೂರ್ಣಗೊಂಡದೆ. ಇದರಿಂದ ದಾರಿಹೋಕರು ಬಹಿರ್ದೆಸೆಗೆ ಹೋಗುತ್ತಾರೆ. ಸಾರ್ವಜನಿಕರಿಗೆ ಆಗುವ ತೊಂದರೆಗಳನ್ನು ಆದಷ್ಟು ಬೇಗ ಸರಿಪಡಿಸಬೇಕು. ಈ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ ಬಸ್‌ ನಿಲ್ದಾಣಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ವೇಳೆ ಈ ಕ್ರಮ ಕೈಗೊಳ್ಳದಿದ್ದರೆ ಬಸ್‌ ನಿಲ್ದಾಣದ ಎದುರಿಗೆ ಅಹೋರಾತ್ರಿ ಧರಣಿ ನಡೆಸಲಾಗುತ್ತದೆ. ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಕ್ರಸ್ಟ್‌ಗೇಟ್‌ ಕಡಿಮೆ ಬೆಲೆಗೆ ಮಾರಾಟ: ರೈತ ಮುಖಂಡರ ಆರೋಪ

ಈ ಸಂದರ್ಬದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಗಂಗಾಧರಯ್ಯಾ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಯುಸೂಫ ಸೈಕಲಗಾರ, ಪ್ರಾಧಾನ ಕಾರ್ಯದರ್ಶಿ ಪ್ರಕಾಶ ಪರಪ್ಪಗೌಡ್ರ, ತಾಲೂಕ ಅಧ್ಯಕ್ಷ ಶಂಕರ ಬಡಿಗೇರ, ರಟ್ಟಿಹಳ್ಳಿ ತಾಲೂಕ ಅಧ್ಯಕ್ಷ ರಾಮಚಂದ್ರಪ್ಪ ಹಿಂಡಸಗಟ್ಟಿ, ರಟ್ಟಿಹಳ್ಳಿ ತಾಲೂಕ ಯುವ ಘಟಕದ ಅಧ್ಯಕ್ಷರು ಕಲಂದರ ಯಲದಹಳ್ಳಿ, ಜಾಫರ ಕುಡುಪಲ್ಲಿ, ತಡಸ ಗ್ರಾ ಘ ಅಧ್ಯಕ್ಷ ದಾವಲಸಾಬ ಸಿಕಂಧರ, ವಿನಾಯಕ ರೇವಣಕರ, ನಾಸೀರಖಾನ ಪಾಟೀಲ, ರಾಮಣ್ಣ ಕಮ್ಮಾರ, ಮಹಾವೀರ ಹಳ್ಳಿಯವರ, ಅದ್ದುಸಾಬ ಕೊಲ್ಲಾಪೂರ, ಮೌಲಾಲಿ ಹುಚುಸಾಬನ್ನವರ ಸೇರಿದಂತೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...