ಹಾವೇರಿ | ನದಿ ಜೋಡಣೆಗೆ ಎಲ್ಲ ಜನಪ್ರತಿನಿದಿನಗಳು ಒಟ್ಟುಗೂಡಿ ಒತ್ತಡ ತರೋಣ: ಸಂಸದ ಬಸವರಾಜ ಬೊಮ್ಮಾಯಿ

Date:

“ವರದಾ-ಬೇಡ್ತಿ  ನದಿ ಜೋಡಣೆಗೆ ಎಲ್ಲ ಜನಪ್ರತಿನಿದಿಗಳು ಒಟ್ಟುಗೂಡಿ ನೀರಿಗಾಗಿ ಒತ್ತಡ ತರಬೇಕು.  ಎಲ್ಲರೂ ಒಂದಾಗಬೇಕು. ಈ ವಿಚಾರದಲ್ಲಿ ಯಾರು ವಿರೋಧಗಳಿಲ್ಲ. ಎಲ್ಲರೂ ಸೇರ್ತಾರೆ ಎಂಬ ಭರವಸೆ ಇದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಕೆಲಸಕ್ಕೆ ಮುಂದಾಗೋಣ” ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ ಪಟ್ಟಣದ ಹುಕ್ಕೇರಿ ಮಠದ ಶಿವನುಭವ ಮಂಟಪದಲ್ಲಿ ವರದಾ ಬೇಡ್ತಿ ನದಿ ಜೋಡಣೆ ಕಾಮಗಾರಿ ಸಭೆಯಲ್ಲಿ ಮಾತನಾಡಿದರು.

“ನೀರು ಭಗವಂತ ಕೊಟ್ಟಿರುವ ವರ. ನೀರಿಗೆ ಸಾವಿಲ್ಲ. ನೀರು ಬೇರೆ ಬೇರೆ ರೂಪತಾಳಿ ಮತ್ತೆ ಪರಿಸದಲ್ಲಿಯೇ ಉಳಿಯುತ್ತದೆ. ನೀರು ಬದುಕಿನ ಜಿವಾಳ. ಜೊತೆ ಜೊತೆಗೆ ಆಧುನಿಕತೆ ಬೆಯುತ್ತಿದ್ದು, ನೀರು ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ. ನೀರಿನ ಉಪಯುಕ್ತ ಬಹಳ ಇದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೀರಿನ ನಿರ್ವಹನೆ ಮುಖ್ಯವಿದೆ. ನೀರಿನ ನಿರ್ವಹನೆಯಿಂದ ನದಿ ನಿರ್ವಹಣೆ ಮಾಡಬಹುದೇ. ನೀರಿನ ಮೂಲ ಬತ್ತಿ ಹೋಗುತ್ತಿದೆ. ನೀರನ್ನು ಅವಲಂಬಿಸಿದ ಪ್ರದೇಶಗಳು ರಾಣೇಬೆನ್ನೂರು, ಗದಗ ಶಿರಹಟ್ಟಿ ಹಾವೇರಿ ಇನ್ನೂ ಅನೇಕ ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆಗಳನ್ನು ಎದುರಿಸುತ್ತಿವೆ” ಎಂದರು.

“ಪಶ್ಚಿಮದಲ್ಲಿಯೇ ಹುಟ್ಟಿ, ಪಶ್ಚಿಮದಲ್ಲಿ ಸಮುದ್ರಕ್ಕೆ ಸೇರುವ ನದಿಗಳು ನೈಸರ್ಗಿಕವಾಗಿ ಹರಿಯುವ ನದಿಯನ್ನು ನಾವು ಉಪಯೋಗ ಮಾಡಿಕೊಳ್ಳಬೇಕು. ಪರಿಸರ, ನಿಸರ್ಗ, ಅರಣ್ಯ ಉಳಿಸುವದು ಬಹಳ ಮುಖ್ಯವಿದೆ” ಎಂದರು.

“ವರದಾ ಬೇಡ್ತಿ ನದಿ ಜೋಡಣೆ ಬಹಳ ವರ್ಷಗಳಿಂದ ಬೇಡಿಕೆ ಇದೆ. ಸರಕಾರದ ಮಟ್ಟದಲ್ಲಿ ಯೋಜನೆಗಳು ಚರ್ಚೆ ಆದಾಗ ಸ್ವರೂಪ ಪಡೆದುಕೊಳ್ಳುತ್ತವೆ. ಸರಕಾರದ ಮಟ್ಟದಲ್ಲಿ ಚರ್ಚೆ ಆಗುವ ಹಾಗೆ ಮಾಡೋಣ. ಈ ನಡುವೆ ಅಡೆತಡೆಗಳು ಬರುತ್ತವೆ. ಅವುಗಳನ್ನು ದಾಟಿ ಮುಂದೇ ಹೋಗೋಣ. ಎಲ್ಲ ರೈತರು ಸೇರಿ ಯಶಸ್ವಿಗೊಳಿಸೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಪದ್ಮಲತಾ, ವೇದವಲ್ಲಿ, ಸೌಜನ್ಯ ಪ್ರಕರಣಗಳನ್ನು SIT ತನಿಖೆಗೊಳಪಡಿಸಲು ಎ‌ಸ್ಎಫ್ಐ ಒತ್ತಾಯ

ಸಭೆಯಲ್ಲಿ ಸದಾಶಿವ ಸ್ವಾಮೀಜಿ, ಶಾಂತಲಿಂಗ ಸ್ವಾಮೀಜಿ, ಶಿವಬಸವ ಸ್ವಾಮೀಜಿ, ಮಾಜಿ ಸಂಸದ ಮಂಜುನಾಥ ಕುನ್ನೂರು, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ, ರೈತ ಸಂಘ ಮುಖಂಡರು ರಾಮಣ್ಣ ಕೆಂಚಳ್ಳೇರ, ಎ. ಎಸ್. ಬಳ್ಳಾರಿ, ಮಲ್ಲಿಕಾರ್ಜುನ ಬಳ್ಳಾರಿ, ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...