ತಮ್ಮ ಪ್ರೀತಿಯನ್ನು ಪೋಷಕರು ವಿರೋಧಿಸ ಕಾರಣಕ್ಕಾಗಿ ಪ್ರೇಮಿಗಳಿಬ್ಬರು ಬಸ್ನಲ್ಲಿ ವಿಷ ಸೇವಿಸಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ವಿಷ ಸೇವಿಸಿದ್ದ ಯುವತಿ ಸಾವನ್ನಪ್ಪಿದ್ದು, ಯುವಕ ಬದುಕುಳಿದಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಲಾಗಿದೆ.
20 ವರ್ಷದ ಹೇಮ ಮೃತ ದುರ್ದೈವಿ. ಆಕೆ ಬೆಂಗಳೂರಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಆಕೆಯ ಪ್ರೇಮಿ ಅಖಿಲ್ ಬಾಗಲಕೋಟೆ ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಯುವತಿಯ ಪೋಷಕರು ಅವರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.
ಪೋಷಕರ ವಿರೋಧದಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ. ಸ್ಲೀಪಿಂಗ್ ಕೋಚ್ವುಳ್ಳ ಖಾಸಗಿ ಬಸ್ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡಿದ್ದ ಇಬ್ಬರೂ, ಬಸ್ ಹತ್ತಿದ ಬಳಿಕ ವಿಷ ಸೇವಿಸಿ ಮಲಗಿದ್ದಾರೆ ಎಂದು ತಿಳಿದುಬಂದಿದೆ.
ಮಾರ್ಗ ಮಧ್ಯೆ ಬಸ್ ನಿಲ್ಲಿಸಿದಾಗ ವಿಷದ ವಾಸನೆ ಬಂದು ಸಹ ಪ್ರಯಾಣಿಕರು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಇಬ್ಬರೂ ವಿಷ ಸೇವಿಸಿರುವುದು ಗೊತ್ತಾಗಿದೆ. ಕೂಡಲೇ, ಇಬ್ಬರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಹೇಮಾ ಮೃತಪಟ್ಟಿದ್ದಾರೆ. ಯುವಕನಿಗೆ ಚಿಕಿತ್ಸೆ ನೀಡಲಾಗಿದ್ದು, ಆತ ಚೇತರಿಸಿಕೊಳ್ಳುತ್ತಿದ್ದಾನೆ.
ಬಸ್ ಹತ್ತುವ ಮುನ್ನ ತನ್ನ ಪೋಷಕರಿಗೆ ಕರೆ ಮಾಡಿದ್ದ ಯುವತಿ, “ನಮ್ಮ ವಿವಾಹಕ್ಕೆ ನೀನು ಒಪ್ಪಿಗೆ ಕೊಡಲ್ಲ. ಹಾಗಾಗಿ, ಮುಂಬೈಗೆ ಹೋಗುತ್ತಿದ್ದೇವೆ” ಎಂದು ಹೇಳಿದ್ದಾಗಿ ಎಂದು ತಿಳಿದುಬಂದಿದೆ.
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777 ಅಥವಾ 9152987821, ಆರೋಗ್ಯ ಸಹಾಯವಾಣಿ 104.




