ಹಾವೇರಿ | ಎಂ.ಇ.ಎಸ್ ಗುಂಡಾಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು: ಕರವೇ ಗಜಸೇನೆ ಒತ್ತಾಯ

Date:

“ಎಂ.ಇ.ಎಸ್ ಪದೆ ಪದೆ ಕನ್ನಡಿಗರನ್ನು ಕೆಣಕಿ ತಾಳ್ಮೆಯನ್ನು ಪರೀಕ್ಷಿಸಬೇಡಿ. ನಾವು ಕನ್ನಡಿಗರು ಮನಸ್ಸು ಮಾಡಿದರೆ ಅವರನ್ನು ಗಂಟು-ಮುಟೆ ಕಟ್ಟಿಕೊಂಡು ಮಹಾರಾಷ್ಟ್ರಕ್ಕೆ ಹೋಗುವವರೆಗೂ ಬೀಡುವುದಿಲ್ಲ. ರಾಜ್ಯ ಸರ್ಕಾರ ಗಡಿ ಭಾಗದ ಕನ್ನಡಿಗರ ಪರ ನಿಂತು ಎಂ.ಇ.ಎಸ್. ಗುಂಡಾಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಓಲೇಕಾರ್ ಕಿಡಿಕಾರಿದರು.

ಹಾವೇರಿ ಪಟ್ಟಣದ ಜಿಲ್ಲಾಧಿಕಾರಿ ಕಛೇರಿ ಎದುರಿಗೆ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಸಂಘಟನೆ ವತಿಯಿಂದ ಬೆಳಗಾವಿಯ ಬಾಳೆಕುಂದ್ರಿಯಲ್ಲಿ ಕನ್ನಡದಲ್ಲಿ ಮಾತನಾಡು ಎಂದಿದ್ದಕ್ಕೆ ಬೆಲಗಾವಿ ಭಾಗದ ಮರಾಠಿಗರು ಬಸ್ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಮಹಾರಾಷ್ಟ್ರದಲ್ಲಿಯೂ ಲಕ್ಷಾಂತರ ಜನ ಕನ್ನಡಿಗರು ತಮ್ಮ ಬದುಕನ್ನು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ. ‘ನಮ್ಮ ಸಿಟ್ಟು ಅಲ್ಲಿಯ ಕನ್ನಡಿಗರ ಬದುಕನ್ನು ಕಸಿದುಕೊಳ್ಳಬಾರದು’ ಎಂಬ ಉದ್ದೇಶ ನಮ್ಮದಾಗಿದೆ. ಅಲ್ಲಿಯ ಕನ್ನಡಿಗರು ಅಲ್ಲಿಯ ಸಂಸ್ಕೃತಿಯನ್ನು ಒಪ್ಪಿಕೊಂಡು ಅಲ್ಲಿಯ ಭಾಷಾಯಾಭಿಮಾನಕ್ಕೆ ಬದ್ದರಾಗಿದ್ದಾರೆ. ಆದರೆ ಬೆಳಗಾವಿ ಭಾಗದ ಮರಾಠಿ ಪುಂಡರು ತಮ್ಮ ಬೇಳೆ ಬೇಯಿಸಿಕೊಳ್ಳಲು ಪದೆ ಪದೆ ನಮ್ಮ ಮೇಲೆ ಆಕ್ರಮಿಸುತ್ತಿದ್ದಾರೆ. ತಮ್ಮ ರಾಜಕೀಯ ತೆವಲಿಗೋಸ್ಕರ ಈ ಹಿಂದೆ ಮರಾಠಿಗರನ್ನು ಎತ್ತಿ ಕಟ್ಟುತ್ತಿದ್ದರು. ಅದನ್ನು ನಾವು ಕನ್ನಡಿಗರು ಬಗ್ಗು ಬಡೆದಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾರಾಷ್ಟ್ರದ ರಾಜಕಾರಣಿಗಳು ಬೆಳಗಾವಿ ಭಾಗವನ್ನು ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳುವ ಉದ್ದೇಶ ಹೊಂದಿರುವುದನ್ನು  ಕೈಬೀಡಬೇಕು. ಇಲ್ಲಿರುವ ಮರಾಠಿಗರು ಮತ್ತು ಕನ್ನಡಿಗರು ಅಣ್ಣ-ತಮ್ಮಂದಿರಂತೆ ಬದುಕುವ ತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಪ್ರಯತ್ನ ಮಾಡಬೇಕು. ಎಂದು ಹೇಳುದರು.

“ನಿನ್ನೆಯ ದಿನ ಸೊಲ್ಲಾಪುರದ ಸಾಥಾ ರಸ್ತೆಯಲ್ಲಿ ಶಿವಸೇನೆ ಪುಂಡರು ಕರ್ನಾಟಕದ ಬಸ್ಸನ್ನು ತಡೆದು ಚಾಲಕನಿಗೆ ಕೇಸರಿ ಬಣ್ಣ ಹಾಗೂ ಹೂವಿನ ಮಾಲೆ ಹಾಕಿ,ಅವನ ಬಾಯಿಯಿಂದ ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಘೋಷಣೆ ಕೂಗಿಸಿ ತಮ್ಮ ಉದ್ದಟತನವನ್ನು ಮೇರೆದಿದ್ದಾರೆ. ಅಲ್ಲದೇ ಬೆಳಗಾವಿ ಜಿಲ್ಲೆಯ ಖಾನಾಪುರ ನಗರದಲ್ಲಿ ಕನ್ನಡ ಪರ ಹೋರಾಟಗಾರನ ಮೇಲೆ ಹಲ್ಲೆ ಮಾಡಿದ್ದಾರೆ. ಇಷ್ಟೇಲ್ಲ ನಡೆದರು ಕರ್ನಾಟಕ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ನಾಚಿಕೆಗೇಡಿನ ಸಂಗತಿ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮಾರ್ಚ್ 3ರಂದು ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ

“ಕೂಡಲೇ ರಾಜ್ಯ ಸರ್ಕಾರ ಗಡಿ ಭಾಗದ ಕನ್ನಡಿಗರ ಪರ ನಿಂತು ಎಂ.ಇ.ಎಸ್. ಗುಂಡಾಗಳ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಆಗ್ರಹಿಸುತ್ತವೆ” ಎಂದು ಮಂಜುನಾಥ ಓಲೇಕಾರ್ ಒತ್ತಾಯಿಸಿದರು.

ಮನವಿ ಸಂದರ್ಭದಲ್ಲಿ ಕರವೇ ಗಜಸೇನೆ ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...