ಹಾವೇರಿ | ಮಣಿಪುರ ಸರ್ಕಾರವನ್ನು ವಜಾಗೊಳಿಸಿ: ಸಂಘಟನೆಗಳ ಆಗ್ರಹ

Date:

ಮಣಿಪುರದಲ್ಲಿ ಕಾನೂನು‌-ಸುವ್ಯವಸ್ಥೆ ಕಾಪಾಡುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದವರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿ ಹಲವು ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ಪ್ರತಿಭಟನೆ ನಡೆಸಿದ ಹಾನಗಲ್ ತಾಲೂಕು ಆದರ್ಶ ಮಹಿಳಾ ಒಕ್ಕೂಟ ಮತ್ತು ಪ್ರಗತಿ ಮಹಿಳಾ ಒಕ್ಕೂಟ, ಮಹಿಳಾ ನ್ಯಾಯವಾದಿಗಳು, ಜನವೇದಿಕೆ, ಮಾನವ ಹಕ್ಕು ಸಮಿತಿ, ಪುಟ್ಟರಾಜ ಯೂನಿಯನ್, ರೈತ ಸಂಘಟನೆಗಳ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ, “ಹೆಣ್ಣು ಜನನದ ಮೂಲ, ಜನನಿ ಮತ್ತು ಜನ್ಮಭೂಮಿ ಸ್ವರ್ಗಕ್ಕಿಂತ ಮೇಲೆ ಎಂದು ಕೇವಲ ಭಾಷಣಗಳಲ್ಲಿ ಮಾತನಾಡುವ ನಮ್ಮ ನಾಯಕರು ನಮ್ಮ ದೇಶದ ಮಣಿಪುರದಲ್ಲಿ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರ, ಬಲತ್ಕಾರ, ಅಮಾನುಷ್ಯ ಹಿಂಸಾಚಾರಗಳು ನಡೆದರೂ ಘಟನೆಗಳಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ನಮ್ಮ ದುರಾದೃಷ್ಟದ ಸಂಗತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತದ ಸಂಸ್ಕೃತಿ ಆಚಾರ-ವಿಚಾರಗಳ ಬಗ್ಗೆ ಪಾಶ್ಚಿಮಾತ್ಯ ದೇಶಗಳು ಅಧ್ಯಯನ ಮಾಡಲು ಹೆಮ್ಮೆ ಪಡುತ್ತವೆ. ಆದರೆ ಮಣಿಪುರದಲ್ಲಿ ನಡೆದ ಮಹಿಳೆಯರ ಬೆತ್ತಲೆ ಮರವಣಿಗೆ ಅದರಲ್ಲೂ ದೇಶ ಕಾಯುವ ಯೋಧರೊಬ್ಬರ ಪತ್ನಿಮೇಲೆ ಅತ್ಯಾಚಾರ ಮಾಡಿ ದೌರ್ಜನ್ಯ ಎಸಗಿರುವುದು ಎಲ್ಲ ನಾಗರಿಕರು ತಲೆತಗ್ಗಿಸುವಂತಾಗಿದೆ” ಎಂದರು.

ನ್ಯಾಯವಾದಿ ಸಿಸ್ಟರ್ ವೇರೋನಿಕಾ ವಿ ಎಸ್ ಮಾತನಾಡಿ, “ಸುಮಾರು ಮೂರು ತಿಂಗಳುಗಳಿಂದ ಮಣಿಪುರದಲ್ಲಿ ಮಹಿಳೆಯರ ಮೇಲೆ ಹಿಂಸಾಚಾರಗಳು ನಡೆಯುತ್ತಿವೆ. ಆದರೆ ಅದಕ್ಕೆ ಸಂಬಂಧಿಸಿದಂತೆ ವಿಡಿಯೋಗಳು ಪ್ರಸಾರವಾಗದಂತೆ ಅಂತರ್ಜಾಲ ವ್ಯವಸ್ಥೆಯನ್ನು ಕಡಿತಗೊಳಿಸಿ ಘಟನೆಯನ್ನು ಹತ್ತಿಕ್ಕಿ ಕುಕಿ ಸಮುದಾಯದ ಜನರಿಗೆ ಮತ್ತು ಮಾಧ್ಯಮಗಳಿಗೆ ಈ ವಿಚಾರಗಳು ತಿಳಿಯದಂತೆ ಮಾಡಲು ಮುಂದಾದವರು ಯಾರು ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿದೆ. ಘಟನೆಗೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿ ಗಲ್ಲು ಶಿಕ್ಷೆ ನೀಡುವುದು ಸೂಕ್ತವಾಗಿದೆ. ಇದರಿಂದ ಸಮಾಜದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ನೀಡಿದಂತಾಗುತ್ತದೆ” ಎಂದರು.

ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ ಮಾತನಾಡಿ, “ಹೆಣ್ಣನ್ನು ಗೌರವಿಸುವುದು ಮತ್ತು ಅವರ ಗೌರವಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳುವುದು ಹೆಣ್ಣಿನ ಗರ್ಭದಿಂದ ಜನಿಸಿದ ಪ್ರತಿಯೊಬ್ಬರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ. ಆದರೆ ಪ್ರಸ್ತುತ ದಿನಗಳಲ್ಲಿ ನಡೆದ ಮಣಿಪುರದ ಘಟನೆ ಅಮಾನುಷವಾಗಿದ್ದು, ಜಗತ್ತಿನಲ್ಲಿ ಮಾನವೀಯತೆ ಸತ್ತು ಹೋದಂತೆ ಕಾಣಿಸಿಕೊಳ್ಳುತ್ತಿದೆ. ಮಹಿಳೆಯರನ್ನು ಗೌರವಿಸದ ದೇಶ ಎಂದೂ ಅಭಿವೃದ್ಧಿ ಆಗಲು ಸಾಧ್ಯವಿಲ್ಲ ಎಂಬುದನ್ನು ಮನಗಾಣಬೇಕಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕಲುಷಿತ ನೀರು ಕುಡಿದು ಮಹಿಳೆ ಸಾವು; ಹಲವರು ಅಸ್ವಸ್ಥ

ಈ ಸಂಧರ್ಭದಲ್ಲಿ ಆದರ್ಶ ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಪ್ರೇಮಾ ಕಾಳೇರ, ಉಪಾಧ್ಯಕ್ಷೆ ಕಮಲಾಕ್ಷಿ ಬೆಳಗಲಿ, ಕಾರ್ಯದರ್ಶಿ ಚಂಪಾ ಕರ್ಜಗಿ, ಲೋಯೋಲಾ ವಿಕಾಸ ಕೇಂದ್ರದ ನಿರ್ದೇಶಕ ಫಾದರ್ ಜರಾಲ್ಡ್ ಡಿಸೋಜಾ, ನ್ಯಾಯವಾದಿ ವೀಣಾ ಬ್ಯಾತನಾಳ, ಸುರೇಶ ನಿವೃತ್ತ ಸಿಡಿಪಿಒ ಬಿ ಆರ್ ಶೆಟ್ಟರ್, ರೈತ ಸಂಘದ ಅಧ್ಯಕ್ಷ ಮಾಲಿಂಗಪ್ಪ ಅಕ್ಕಿವಳ್ಳಿ, ವಿಷ್ಣುಕಾಂತ ಜಾದವ, ಜನವೇದಿಕೆ ಮುಖಂಡರು, ಹಳ್ಳಿ ಅಭಿವೃದ್ಧಿ ಸಮಿತಿ ಸದಸ್ಯರು, ಹಲವು ಸಂಘಟನೆಗಳ ಪದಾಧಿಕಾರಿಗಳು ಮತ್ತು ಮಹಿಳಾ ಸಂಘಗಳ ಸದಸ್ಯರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...