ಹಾವೇರಿ | ವಿಶ್ವಗುರು ಬಸವೇಶ್ವರರ 190ನೇ ಜಯಂತಿಯಂದು ಸಾಮೂಹಿಕ ವಿವಾಹ

Date:

ಮಾಹಾನ್ ನಾಯಕರ ದಿನಾಚಾರಣೆಗಳು ಬಡವರ ಹಾಗೂ ಹಿಂದುಳಿದ ವರ್ಗಗಳ ಜನರಿಗೆ ಉಪಯುಕ್ತ ಕಾರ್ಯ ಮಾಡುವ ಮೂಲಕ ಅರ್ಥಪೂರ್ಣ ಆಚರಣೆಗೆ ನಾಂದಿಯಾಗಲಿ ಎಂದು ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆಯ ರಾಜ್ಯಾಧ್ಯಕ್ಷ ತಿರಕಪ್ಪ ಕೆ ಚಿಕ್ಕೇರಿ ಹೇಳಿದರು.

ಹಾವೇರಿ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ದಲಿತ ಸಂಘಟನಾ ಸಮಿತಿ ಭೀಮ ಘರ್ಜನೆ ವತಿಯಿಂದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರ 133ನೇ ಜಯಂತಿ, ಡಾ.ಬಾಬು ಜಗಜೀವನ್‌ ರಾಮ್ ಅವರ 117ನೇ ಜಯಂತಿ ಹಾಗೂ ವಿಶ್ವಗುರು ಶ್ರೀ ಬಸವೇಶ್ವರ ಅವರ 190ನೇ ಜಯಂತಿ ಅಂಗವಾಗಿ ಹಮ್ಮಿಕೊಂಡ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಸಮಾನತೆಯ ಹರಿಕಾರ, ವಿಶ್ವಗುರು ಬಸವೇಶ್ವರರ ದಿನಾಚಾರಣೆಯ ಈ ದಿನ ಬಡವರ ಬದುಕಿಗೆ ಬೆಳಕಾಗುವ ಸಾಮೂಹಿಕ ವಿವಾಹ ಕಾರ್ಯ ಸಾಮಾಜಿಕ ಕಳಕಳಿಯ ಕೆಲಸವಾಗಿದೆ. ಸರ್ವರೂ ಸಮಾನರು ಎಂದು ಬಸವಣ್ಣನವರು 12ನೇ ಶತಮಾನದಲ್ಲಿಯೇ ನಮಗೆ ತಿಳಿಸಿದ್ದಾರೆ.  ಡಾ. ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಿ ಎಲ್ಲರ ಧ್ವನಿಯಾಗಿದ್ದಾರೆ. ದೇಶದಲ್ಲಿ ಡಾ.ಬಾಬು ಜಗಜೀವನ ರಾಮ್ ಅವರು ಆದರ್ಶ ಜೀವನ ಸಾಗಿಸುವ ಮೂಲಕ ಮಹಾನ್ ನಾಯಕರು ನಮ್ಮ ಜೀವನಕ್ಕೆ ಉತ್ತಮ ಸಂದೇಶ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಉದ್ಘಾಟನೆ ಮಾಡಿದ ಡಿಎಸ್‌ಎಸ್ ರಾಜ್ಯ ಸಮಿತಿ ಸದಸ್ಯ ಉಡಚಪ್ಪ ಮಾಳಗಿ ಮಾತನಾಡಿ, “ಸಂಘಟನೆಗಳು ಇಂತಹ ಸಾಮಾಜಿಕ ಕೆಲಸ ಮಾಡಿದಾಗ ಜನರ ಮೆಚ್ಚುಗೆಗೆ ಪಾತ್ರರಾಗುತ್ತೇವೆ. ಈ ಮೂರು ಮಾಹಾನ್ ನಾಯಕರ ಜನ್ಮದಿನದ ನೆನೆಪಿಗಾಗಿ ಸಾಮೂಹಿಕ ವಿವಾಹ ಹಮ್ಮಿಕೊಂಡಿದ್ದು, ಶ್ಲಾಘನೀಯವಾಗಿದೆ. ವಿವಾಹವಾದ ನವ ಜೋಡಿಗಳು ಮಾಹಾನ್ ನಾಯಕರ ತತ್ವ ಸಿದ್ದಾಂತದಡಿ ಉತ್ತಮ ಬದುಕಿಗೆ ಸಾಕ್ಷಿಯಾಗಿರಿ” ಎಂದು ಹೇಳಿ ಕಾರ್ಯಕ್ರಮದ ಯಶಸ್ವಿಗಾಗಿ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರೈತರಿಗೆ ವೈಜ್ಞಾನಿಕವಾಗಿ ಬೆಳೆನಷ್ಟ ಪರಿಹಾರ ಘೋಷಿಸಬೇಕು: ರಾಜ್ಯಾಧ್ಯಕ್ಷ ಭಾಗ್ಯರಾಜ್

ಈ ಸಂದರ್ಭದಲ್ಲಿ ಮುಖಂಡರುಗಳಾದ ಡಿ ಎಸ್ ಮಾಳಗಿ, ಸಂತೋಷ ಕನ್ನಮ್ಮನವರ, ವೈ ಎನ್ ಮಾಸೂರ, ದುರಗೇಶ ಗೊಣೆಮ್ಮನವರ, ರವಿ ಹುಣಸಿಮರದ, ಮಂಜಪ್ಪ ಮರೋಳ, ಬಸವರಾಜ ಕಾಳೆ ಸದೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...