ಹಾವೇರಿ | ಸಚಿವ ಸತೀಶ ಜಾರಕಿಹೊಳಿ ಅವರಿಂದ ಪ್ರಜಾಸಂಗ್ರಾಮ ಕೋ-ಆಪರೇಟಿವ್ ನೂತನ ಸೊಸೈಟಿ ಉದ್ಘಾಟನೆ

Date:

“ಕೋ-ಆಪರೇಟಿವ್ ಸೊಸೈಟಿ ತಳ ಸಮುದಾಯ ಆರ್ಥಿಕವಾಗಿ ಸದೃಢರಾಗುವುದಷ್ಟೇ ಅಲ್ಲದೇ ಸಮಾಜದಲ್ಲಿ ನಾವು ಹೇಗೆ ಇರಬೇಕು ಎಂಬುದರ ಭಾಗವಾಗಿದೆ. ನಿಮ್ಮ ಮುಂದಿನ ಮಕ್ಕಳಿಗೆ ನೇರವಾಗಲಿದೆ” ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಪ್ರಜಾ ಸಂಗ್ರಾಮ ಕೋ-ಆಪರೇಟಿವ್ ನೂತನ ಸೊಸೈಟಿ ಉದ್ಘಾಟಿಸಿ ಮಾತನಾಡಿದರು.

ಹಾವೇರಿ ಪಟ್ಟಣದ ಶಿವಶಕ್ತಿ ಪ್ಯಾಲೇಸ್ನಲ್ಲಿ ಭಾರತ ಸೇವಾ ಪೋರ್ಸ್ ಕರ್ನಾಟಕ ನೇತೃತ್ವದಲ್ಲಿ ಪ್ರಜಾಸಂಗ್ರಾಮ ಕೋ-ಆಪರೇಟಿವ್ ನೂತನ ಸೊಸೈಟಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಒಬ್ಬರಿಂದ ಸಮಾಜವನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ. ಎಲ್ಲರಿಂದ ಸಾಧ್ಯ. ಈ ಸಮಯ ಬದಲಾವಣೆಗೆ ಸಕಾಲ. ಇಷ್ಟು ದಿನ ಬೇರೆಯವರ ಮಾತುಗಳನ್ನು ನಾವು ಕೇಳುತ್ತಿದ್ದೆವು, ಇನ್ನೂ ಮುಂದು ಬೇರೆಯವರು ನಮ್ಮಮಾತುಗಳನ್ನು ಕೇಳಬೇಕು. ಆ ರೀತಿಯಲ್ಲಿ ನಮ್ಮ ನಡೆ ನುಡಿ ಇರಬೇಕು. ಜೊತೆಗೆ ಡಾ. ಬಿ. ಆರ್. ಅಂಬೇಡ್ಕರ್, ಬಸವಣ್ಣನವರ ವಿಚಾರಗಳನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೊಸೈಟಿ ಕಟ್ಟಲು ಬಹಳ ಪ್ರಾಮಾಣಿಕ ಇರಬೇಕು. ನಿಷ್ಠಾವಂತರಾಗಿ ಸೇವೆ ಸಲ್ಲಿಸಿದಾಗ ಮಾತ್ರ ಯಶಸ್ವಿಯಗಲು ಸಾಧ್ಯ. ಎಲ್ಲರೂ ನಿಮ್ಮ ಉಳಿತಾಯದ ಹಣವನ್ನು ಸೊಸೈಟಿಯಲ್ಲಿ ಇಡಬೇಕು. ಈ ಮೂಲಕ ಎಲ್ಲರೂ ಆರ್ಥಿಕವಾಗಿ ಬೆಳೆಯಬೇಕು” ಎಂದರು.

ಪ್ರಜಾಸಂಗ್ರಾಮ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರು ಏಳುಕೋಟೆಪ್ಪ ಪಾಟೀಲ್ ಪ್ರಸ್ತಾವಿಕ ಮಾತನಾಡಿ, “ಮಾತೃ ಭೂಮಿಯ ಋಣವನ್ನು ತೀರಿಸಲು, ಭಾರತ್ ಸೇವಾ ಪೋರ್ಸ್ ಮೂಲಕ ಕೆಲಸ ಮಾಡುತ್ತಾ ಬಂದಿದ್ದೇವೆ. ಸತೀಶ್ ಜಾರಕಿಹೊಳಿ ಅವರು ಪ್ರೋತ್ಸಾಹ ಸಾಕಷ್ಟು ಇದೆ. ಅವರ ಆಶಯದಂತೆ ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳೆಯುವಲ್ಲಿ ನಮ್ಮ ಸೊಸೈಟಿ ಮುಂದುವರಿಯಲಿದೆ” ಎಂದರು.

ಬಸವರಾಜ್ ಶಿವಣ್ಣನವರ ಸೊಸೈಟಿಯ ಲೋಗೋ ಬಿಡುಗಡೆ ಗೊಳಿಸಿ ಮಾತನಾಡಿದರು,”ತಳ ಸಮುದಾಯದವರು ಸಮಾಜದಲ್ಲಿ ಕಷ್ಟ, ಸಮಸ್ಯೆಗಳನ್ನು ಅನುಭವಿಸಿಕೊಂಡು ಬಂದವರು. ಅದರಲ್ಲೂ ಮೂಢನಂಬಿಕೆ ಹೆಚ್ಚು ಹೊಂದಿದವರು.ಅದನ್ನು ಹೋಗಲಾಡಿಸಲು ಸತೀಶ್ ಜಾರಕಿಹೊಳಿ ಹೋಳಿ ಅವರು ಮಾನವ ಬಂಧುತ್ವ ಮೂಲಕ ಹೋಗಲಾಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಸಮಾಜವನ್ನು ಆರ್ಥಿಕವಾಗಿ, ಸಾಮಾಜಿಕ, ಶೈಕ್ಷಣಿಕವಾಗಿ ಬೆಳೆಯಲು ಈ ಸಂಸ್ಥೆ ಮಾಡಲಿ. ಮಹಿಳೆಯರು ಆರ್ಥಿಕ ಸ್ವವಲಂಬಿಯಾಗಿ ಬೆಳೆಯಲು ಈ ಸಂಸ್ಥೆ ಹುಟ್ಟಿಕೊಂಡಿದೆ” ಎಂದರು.

ವೇದಿಕೆಯಲ್ಲಿ ಪರಮಪೂಜ್ಯ ಡಾ. ಸಿದ್ದರಾಜು ಮಹಾಸ್ವಾಮಿಗಳು, ಪೂರ್ಣಾನಂದ ಭಾರತಿ ಮಹಾಸ್ವಾಮಿಗಳು, ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ, ಹೆಸ್ಕಾಂ ಅಧ್ಯಕ್ಷರು ಸೈಯದ್ ಅಜ್ಜಂಪೀರ ಖಾದ್ರಿ, ಕಾಂಗ್ರೆಸ್ ಮುಖಂಡರು ಸಂಜೀವಕುಮಾರ ನೀರಲಗಿ, ರಾಮಪ್ರಸಾದ, ಹಿರಿಯ ನ್ಯಾಯವಾದಿ, ಬಸವರಾಜ ಹಾದಿಮನಿ, ಅಶೋಕ ಮರಿಯಮ್ಮನವರ, ಡಿ ವೈ ಎಫ್ ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಉಡಚಪ್ಪ ಮಾಳಗಿ, ರವಿ ಹಾದಿಮನಿ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು. ಡಾ. ಮಂಜುನಾಥ ಎಂ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...