ಹಾವೇರಿ | ಬಾಳಂಬೀಡ ಗ್ರಾ. ಪಂಚಾಯತ್‌ನಲ್ಲಿ ಹಣ ದುರುಪಯೋಗ: ಸೂಕ್ತ ಕ್ರಮಕ್ಕೆ ಒತ್ತಾಯ

Date:

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ ಕಳೆದ 2021 ರಿಂದ 2024ವರೆಗೆ 14,15 ನೇ ಹಣಕಾಸಿನ ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರ ಕುರಿತು ತನಿಖೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಅಕ್ಷಯ್ ಶ್ರೀಧರ್ ಅವರಿಗೆ ಮನವಿ ಸಲ್ಲಿಸಿದೆ.

ಮನವಿ ಸಲ್ಲಿಸಿ ದಸಂಸ ರಾಜ್ಯ ಸದಸ್ಯ ಉಡಚಪ್ಪ ಮಳಗಿ ಮಾತನಾಡಿ, “ಬಾಳಂಬೀಡ ಗ್ರಾಮ ಪಂಚಾಯತಿಯಲ್ಲಿ 14,15 ನೇ ಹಣಕಾಸು ಯೋಜನೆ ಅಡಿಯಲ್ಲಿ ಸಾರ್ವಜನಿಕ ಹಣ ದುರುಪಯೋಗ ಮಾಡಲಾಗಿದ್ದು, ಕುಡಿಯುವ ನೀರು, ಬೊರ್‌ವೆಲ್ ದುರಸ್ತಿ, ವಿದ್ಯುತ್ ಬಿಲ್, ಚರಂಡಿ ದುರಸ್ತಿ ಹಾಗೂ ಸ್ವಚ್ಛತೆ, ಬೀದಿ ದೀಪ, ನೈರ್ಮಲೀಕರಣ, ಹೈ ಮಾಸ್ಟ್‌ ಬೀದಿ ದೀಪ ಸಾಮಗ್ರಿಗಳ ಖರೀದಿ, ಮಿನಿ ವಾಟರ್ ನಿರ್ವಹಣೆ ಕಾಮಗಾರಿಗಳಿಗೆ ಬಳಸಬೇಕಾದ ಹಣದಲ್ಲಿ ಯಾವುದನ್ನು ಸರಿಯಾಗಿ ನಿರ್ವಹಣೆ ಮಾಡದೇ ಹಣವನ್ನು ಖರ್ಚು ಹಾಕಿ ಸಾರ್ವಜನಿಕ ಹಣ ದುರುಪಯೋಗ ಪಡೆಸಿಕೊಂಡು ಲೂಟಿ ಮಾಡಿದ್ದಾರೆ” ಎಂದು ಆರೋಪಿಸಿದರು.

ಈ ವಿಚಾರದಲ್ಲಿ ಜಿಲ್ಲಾ ಪಂಚಾಯತ್ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಮುಖಂಡರು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಕುಂದಗೋಳ ತಾಲೂಕಿನಲ್ಲಿ ಸಮಸ್ಯೆಗಳದ್ದೇ ಕಾರುಬಾರು; ಕ್ಯಾರೇ ಎನ್ನದ ಅಧಿಕಾರಿಗಳು!

ಮನವಿ ಸಲ್ಲಿಸುವ ಸಂದರ್ಭದಲ್ಲಿ ದಸಂಸ ಮುಖಂಡರಾದ ಮಂಜಪ್ಪ ಮಾರೋಳ, ವೈ. ಎನ್.ಮಾಸೂರ, ಜಗದೀಶ್ ಹರಿಜನ, ಮಂಜುನಾಥ ದೊಡ್ಡಮರಿಯಮ್ಮನವರ, ಮಹೇಶಪ್ಪ ಶಾಕಾರ, ಶಿವು ಮುದಿಮಲ್ಲಣ್ಣವರ, ಶ್ರೀಮತಿ ರೇಣುಕಾ ಬಡಕಣ್ಣವರ, ಬಸವಣ್ಣಪ್ಪ ಅರಳಿಹಳ್ಳಿ,ಶಂಭುಲಿಂಗಪ್ಪ ದಿವಟರ,ಕೃಷ್ಣಕಾಂತ ಹೊಳಿಯಪ್ಪನವರ, ಮಂಜುನಾಥ್ ಮಾಸೂರ,ಹನಮಂತಪ್ಪ ಹೌಶಿ, ಗೀತಾ ಹಳೆಶಿಡೆನೂರ,ರತ್ನವ್ವ ದೊಡ್ಡಮನಿ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...