ಹಾವೇರಿ | 77 ಗ್ರಾಮಗಳ, 162 ಕೆರೆಗಳಿಗೆ ನೀರು ಹರಿಸಲು ಶಾಸಕ ಶ್ರೀನಿವಾಸ ಮಾನೆ ಚಾಲನೆ

Date:

ಏತ ನೀರಾವರಿ ಯೋಜನೆಯ ಪಂಪ್ ಗೆ ಶಾಸಕ ಶ್ರೀನಿವಾಸ ಮಾನೆ ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ ಪಂಪಹೌಸ್‌ನಲ್ಲಿ ಚಾಲನೆ ನೀಡಿ ಯೋಜನೆ ವ್ಯಾಪ್ತಿಯ ಕೆರೆಗಳಿಗೆ ನೀರು ಹರಿಸಲಾಯಿತು.

ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದ್ದು ಹಾಗಾಗಿ ಪಂಪ್ ಚಾಲನೆಗೊಳಿಸಿ ತಾಲೂಕಿನ 77 ಗ್ರಾಮಗಳ 162 ಕೆರೆಗಳಿಗೆ ನೀರು ಹರಿಸಲಾರಂಭಿಸಲಾಯಿತು.

ಶಾಸಕ ಶ್ರೀನಿವಾಸ ಮಾನೆ ಮಾತನಾಡಿ “ಈ ಯೋಜನೆಯಿಂದ ಜನ, ಜಾನುವಾರು, ಕುಡಿಯುವ ನೀರು ಹಾಗೂ ಅಚ್ಚುಕಟ್ಟು ಪ್ರದೇಶದ ರೈತರ ಉಪಯೋಗಕ್ಕಾಗಿ ನೀರು ಪೂರೈಸುವ ಜೊತೆಗೆ ಅಂತರ್ಜಲ ಮಟ್ಟದ ಸುಧಾರಣೆಗೂ ಅನುಕೂಲವಾಗಲಿದೆ. ಕಳೆದ ವರ್ಷ ಯೋಜನೆ ವ್ಯಾಪ್ತಿಯ ಎಲ್ಲ ಕೆರೆಗಳನ್ನು ತುಂಬಿಸಿರುವ ಕಾರಣ ಅನುಕೂಲವಾಗಿತ್ತು. ಈ ಬಾರಿ ಅವಧಿಗೆ ಮೊದಲೇ ಪಂಪ್ ಆರಂಭಿಸಲಾಗಿದ್ದು, ಕರಗಳಿಗೆ ನೀರು ಹರಿಸಲಾಗುತ್ತಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನದಿ ನೀರು ಸದ್ಬಳಕೆ ಮಾಡಿಕೊಂಡು ಎಲ್ಲ ಕೆರೆಗಳನ್ನು ತುಂಬಿಸುವಂತೆ” ಇದೇ ಸಂದರ್ಭದಲ್ಲಿ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಕರ್ನಾಟಕ ನೀರಾವರಿ ನಿಗಮದ ಎಇಇ ಪ್ರಹ್ಲಾದ ಶೆಟ್ಟಿ ಮಾತನಾಡಿ, “3250 ಎಚ್.ಪಿ. ಸಾಮರ್ಥ್ಯದ ಒಟ್ಟು 6 ಪಂಪುಗಳನ್ನು ಅಳವಡಿಸಲಾಗಿದ್ದು, ಸದ್ಯ ದಿನದ 22 ಗಂಟೆಗಳ ಕಾಲ ಒಂದು ಪಂಪು ನೀರು ಹರಿಸಲಿದೆ. ನೀರಿನ ಹರಿವು ಆಧರಿಸಿ ಇನ್ನುಳಿದ ಪಂಪುಗಳನ್ನು ಆರಂಭಿಸಲಾಗುವುದು. ವರದಾ ನದಿಯಿಂದ ಒಟ್ಟು 0.445 ಟಿಎಂಸಿ ನೀರನ್ನು ಎತ್ತಿ ಕೆರೆಗಳನ್ನು ತುಂಬಿಸಲಾಗುವುದು ಎಂದು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ, ಜಿಪಂ ಮಾಜಿ ಸದಸ್ಯ ಮಿಯ್ಯಾಜಾನ್ ಕಂಬಳಿ, ತಾಪಂ ಮಾಜಿ ಅಧ್ಯಕ್ಷ ರಾಜೇಂದ್ರ ಬಾರ್ಕಿ, ಮುಖಂಡರಾದ ಫಕ್ಕೀರಪ್ಪ ಚಿಕ್ಕಜ್ಜನವರ, ಶಿವಣ್ಣ ಬಾರ್ಕಿ, ಮಂಜಣ್ಣ ತಡಸದ, ಬಸವರಾಜ ಚಲವಾದಿ, ದಿನೇಶ ಕಂಬಿ, ರುದ್ರಪ್ಪ ಹೇರೂರ, ದೇವೇಂದ್ರಪ್ಪ ಕತ್ತಿ, ಉಡುಚಪ್ಪ ಮಾಸಣಗಿ, ರಾಜೇಂದ್ರ ಜಿನ್ನಣ್ಣನವರ, ಗುಡ್ಡಣ್ಣ ಕೆಂಚಣ್ಣನವರ, ರಫೀಕ್ ಉಪ್ಪಣಸಿ ಜಗದೀಶ್ ಹರಿಜನ್  ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...