ಹಾವೇರಿ | ಅತೀ ಹೆಚ್ಚು ಉದ್ಯೋಗ ಒದಗಿಸುವ ಕೃಷಿ ಕ್ಷೇತ್ರದ ಕಂಪನಿಕರಣಕ್ಕೆ ಮುಂದಾಗುತ್ತಿರುವುದು ಅಪಾಯಕಾರಿ: ಚಂಸು ಪಾಟೀಲ

Date:

“ದೇಶದಲ್ಲಿ ಅತ್ಯಂತ ಹೆಚ್ಚು ಉದ್ಯೋಗ ಒದಗಿಸಲು ಅವಕಾಶ ಇರುವುದು ಕೃಷಿ ಕ್ಷೇತ್ರದಲ್ಲಿ ಮಾತ್ರ. ಆದರೆ ಪ್ರಭುತ್ವದ ಚುಕ್ಕಾಣಿ ಹಿಡಿದವರು ಕೃಷಿ ಕ್ಷೇತ್ರದ ಕಂಪೆನಿಕರಣಕ್ಕೆ ಮುಂದಾಗಿ ಜನತೆ ಕೃಷಿಯಿಂದ ವಿಮುಖರಾಗುವಂತೆ ಮಾಡುತ್ತಿರುವುದು ಅಪಾಯಕಾರಿಯಾಗಿ ಪರಿಣಮಿಸಲಿದೆ” ಎಂದು ಪ್ರಗತಿಪರ ಸಾಹಿತಿ ಚಂಸು ಪಾಟೀಲ ಅಭಿಪ್ರಾಯಪಟ್ಟರು.

ಹಾವೇರಿ ಪಟ್ಟಣದಲ್ಲಿ ಇಂದು ಭಗತ್ ಸಿಂಗ್ ಪಿ.ಯು ಕಾಲೇಜಿನಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ಜಿಲ್ಲಾ ಸಮಿತಿ ವತಿಯಿಂದ ನಿರುದ್ಯೋಗದ ವಿರುದ್ಧ ಉದ್ಯೋಗದ ಹಕ್ಕಿಗಾಗಿ ಯುವಜನರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

“ಕೃಷಿ ಕ್ಷೇತ್ರವನ್ನು ಸುಸ್ಥಿರವಾಗಿ ಅಭಿವೃದ್ಧಿಪಡಿಸಿದರೆ ಸಾಕಷ್ಟು ಯುವಜನರಿಗೆ ಉದ್ಯೋಗ ದೊರೆತು ಅವರು ಬದುಕು ಕಟ್ಟಿಕೊಳ್ಳುವ ಅವಕಾಶವಿದೆ. ಆ ಮೂಲಕ ಯುವ ಜನರು ನಿರುದ್ಯೋಗಿಗಳಾಗದಂತೆ ತಡೆಯಲು ಸಾಧ್ಯವಿದೆ. ಇದಕ್ಕಾಗಿ ಸೂಕ್ತ ಕಾರ್ಯ ಯೋಜನೆ ರೂಪಿಸಿ ಪ್ರಾಮಾಣಿಕ ಬದ್ಧತೆ ಹಾಗೂ ಇಚ್ಛಾಶಕ್ತಿಯಿಂದ ಆಳುವ ಸರಕಾರಗಳು ಜಾರಿಗೊಳಿಸಬೇಕು. ಯುವಜನತೆ ಈ ನಿಟ್ಟಿನಲ್ಲಿ ಪ್ರಬಲವಾಗಿ ಧ್ವನಿ ಎತ್ತಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳು ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಕೇಂದ್ರ ಮತ್ತು ರಾಜ್ಯ ಸರಕಾರಗಳು ಖಾಲಿ ಇರುವ ಹುದ್ದೆಗಳನ್ನು ಭರ್ತಿಗೊಳಿಸಲು ಹಾಗೂ ನಿರುದ್ಯೋಗ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಕೆಲಸ ಮಾಡುತ್ತಿಲ್ಲ. ಉದ್ಯೋಗ ಸೃಷ್ಠಿಸುತ್ತೆವೆಂಬ ಹುಸಿ ಭರವಸೆ ನೀಡುತ್ತಾ ವಂಚಿಸುತ್ತಿರುವ ಹುನ್ನಾರದ ವಿರುದ್ಧ ಯುವ ಜನರು ಪ್ರಬಲ ಆಂದೋಲನಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

“ಕೃಷಿ ಪ್ರಧಾನ ಹಾವೇರಿ ಜಿಲ್ಲೆಯಲ್ಲಿ ಕೃಷಿಯಾಧಾರಿತ ಕೈಗಾರಿಕೆಗಳನ್ನು ಆರಂಭಿಸಿ ಜಿಲ್ಲೆಯ ಯುವಜನರಿಗೆ ಉದ್ಯೋಗ ಒದಗಿಸುವ ಪ್ರಾಮಾಣಿಕ ಪ್ರಯತ್ನವನ್ನು ಜಿಲ್ಲೆಯ ಜನಪ್ರತಿನಿಧಿಗಳು ಮಾಡಬೇಕಿತ್ತು. ಆದರೆ ಜನರಿಂದ ಅಧಿಕಾರ ಹಿಡಿದವರು ತಮ್ಮನ್ನು ಆಯ್ಕೆ ಮಾಡಿದ ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯ ವ್ಯವಸ್ಥೆಯನ್ನು ಒದಗಿಸುವಲ್ಲಿ ವಿಫಲರಾಗಿದ್ದಾರೆ” ಎಂದರು.

“ಉದ್ಯೋಗದ ಹಕ್ಕು ಮೂಲಭೂತ ಹಕ್ಕು’ ಆದರೆ ಆ ಹಕ್ಕು ಯುವಜನರಿಗೆ ದೊರೆಯುತ್ತಿಲ್ಲ. ಈಗಾಗಲೇ ಕಳೆದ ಐದು ವರ್ಷಗಳಿಂದ ನೇಮಕಾತಿ ಮಾಡದಿರುವುದರಿಂದ ಅರ್ಹ ಉದ್ಯೋಗಾಂಕ್ಷಿಗಳ ವಯೋಮಿತಿ ಮೀರುತ್ತಿದೆ. ಸರಕಾರ ವಯೋಮಿತಿ ಕನಿಷ್ಠ ಐದು ವರ್ಷ ವಯೋಮಿತಿ ಹೆಚ್ಚಳಗೊಳಿಸಬೇಕು. ಖಾಲಿಯಿರುವ ಹುದ್ದೆಗಳನ್ನು ಭರ್ತಿಗೊಳಿಸಬೇಕು” ಎಂದು ಆಗ್ರಹಿಸಿದರು.

ಸತೀಶ ಎಂ.ಬಿ ಮಾತನಾಡಿ, “ವಿದ್ಯಾರ್ಥಿ ಯುವಜನತೆ ಕಷ್ಟಪಟ್ಟು ಅಧ್ಯಯನ ಮಾಡಿ ಬದುಕು ಕಟ್ಟಿಕೊಳ್ಳಬೇಕು. ಉದ್ಯೋಗದ ಅವಕಾಶಗಳಿಗಾಗಿ ಐಕ್ಯತೆಯಿಂದ ಧ್ವನಿ ಎತ್ತಬೇಕು” ಎಂದರು.

ಅಧ್ಯಕ್ಷತೆಯನ್ನು ವಹಿಸಿದ್ದ ನಾರಾಯಣ ಕಾಳೆ ಮಾತನಾಡಿ, “ಜಿಲ್ಲೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳ ಭರ್ತಿಗೆ ಜನಪ್ರತಿನಿಧಿಗಳು ಮುಂದಾಗಬೇಕು. ಯುವಜನರು ಸ್ವಾವಲಂಬಿಯಾಗಿ ಜೀವನ ಕಟ್ಟಿಕೊಳ್ಳಲು ಅಗತ್ಯ ಕಾರ್ಯಯೋಜನೆ ರೂಪಿಸಿ ಜಾರಿಗೊಳಿಸಬೇಕು” ಎಂದರು.

ವೇದಿಕೆ ಮೇಲೆ ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಡಿವೈಎಫ್ಐ ಜಿಲ್ಲಾ ಮುಖಂಡರಾದ ಪ್ರಿಯಾ ಗಡ್ಡಿಯವರ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಡಿವೈಎಫ್ಐ ಮುಖಂಡರು ಹಬೀಬ್ ಮುಲ್ಲಾ, ಮೌಲಾಲಿ ನವಲಗುಂದ, ಮಂಜುಳಾ ಹಾನಗಲ್, ವೀರಣ್ಣ ಗಡ್ಡಿಯವರ, ಮೇಘನಾ ಕಹಾರ, ಅಭಿಷೇಕ ಎಸ್.ಕೆ, ನಿಂಗರಾಜ ಪೂಜಾರ ಸೇರಿದಂತೆ ವಿವಿಧ ಘಟಕಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ವಿಶಾಲಾ ಬಿ ಮುಳಗುಂದ ಸ್ವಾಗತಿಸಿ, ನಿರ್ವಹಿಸಿದರು. ರೇಣುಕಾ ಕಹಾರ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...