ಹಾವೇರಿ | ಕಡಕೋಳ ಗ್ರಾಮಕ್ಕೆ ಮುಸ್ಲಿಂ ಬಾಂಧವ್ಯ ವೇದಿಕೆ ಭೇಟಿ

Date:

ವಕ್ಫ್ ಬೋರ್ಡ್ ರೈತರಿಗೆ ನೋಟಿಸ್ ನೀಡಿದೆ ಎಂಬುದನ್ನು ನೆಪವಾಗಿಸಿಕೊಂಡು ಕಡಕೋಳ ಗ್ರಾಮದಲ್ಲಿ ನಡೆದ ಭಯಾನಕ ಗಲಭೆಯಲ್ಲಿ ಸುಮಾರು 70ಕ್ಕೂ ಹೆಚ್ಚು ಮಂದಿ ಮುಸ್ಲಿಂ ಕುಟುಂಬಗಳು ಗ್ರಾಮ ತೊರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯವರು ಭೇಟಿ ನೀಡಿ ಸಭೆ ನಡೆಸಿದರು.

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಡಕೋಳ ಗ್ರಾಮದಲ್ಲಿ ನಡೆದ ಗಲಭೆಯ ಕಾರಣದಿಂದ ಮಸೀದಿಯ ಧರ್ಮಗುರುಗಳೂ ಕೂಡ ಗ್ರಾಮ ತೊರೆದಿದ್ದು, ಮಸೀದಿಯಲ್ಲಿ ಒಂದು ವಾರದಿಂದ ಪ್ರಾರ್ಥನೆ ನಿಂತಿದೆ. ಮಸೀದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಂ ಬಾಂಧವ್ಯ ವೇದಿಕೆ ಸದಸ್ಯರು ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷ ಮೌಲಾ ಸಾಬ್ ನದಾಫ್ ಮತ್ತು ಸದಸ್ಯರನ್ನು ಮಾತನಾಡಿಸಿ ನಡೆದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಊರಿನಲ್ಲಿರುವ ಹಿಂದೂ ಸಮುದಾಯದ ಮುಖಂಡರನ್ನು ಸೇರಿಸಿ ಸಭೆ ನಡೆಸಿದ್ದಾರೆ.

“ಶತಮಾನಗಳಿಂದ ರೂಪಿಸಿಕೊಂಡು ಬಂದ ಸಾಮರಸ್ಯವನ್ನು ಕೆಡಿಸಲು ರಾಜಕೀಯದ ಉದ್ದೇಶದಿಂದ ಸಮಾಜಘಾತುಕ ಶಕ್ತಿಗಳು ಮತ್ತು ಊರಿನ ಬಾಹ್ಯ ಶಕ್ತಿಗಳು ನಡೆಸುತ್ತಿರುವ ಷಡ್ಯಂತ್ರವನ್ನು ಅರಿತು ಸೌಹಾರ್ದಿಂದ ಬದುಕಬೇಕು” ಎಂದು ಸಂಘಟನೆಯ ಸದಸ್ಯರು ಗ್ರಾಮಸ್ಥರಿಗೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಊರಿನ ಹಿರಿಯ ಹಿಂದೂ ಮುಖಂಡರು “ಊರು ಬಿಟ್ಟುಹೋದ ಮುಸ್ಲಿಂ ಸದಸ್ಯರನ್ನು ಹಿಂತಿರುಗಿ ಕರೆದುಕೊಂಡು ಬರುವುದರ ಜತೆಗೆ ಕಿಡಿಗೇಡಿಗಳ ದಾಂಧಲೆ ಹಾಗೂ ದುಷ್ಕರ್ಮಿಗಳ ವಿರುದ್ಧ ಒಂದಾಗಿ ನಿಲ್ಲುತ್ತೇವೆ” ಎಂದು ಭರವಸೆ ನೀಡಿದರು.

ಊರಿನಲ್ಲಿ ಸೌಹಾರ್ದ ಸ್ಥಾಪಿಸಲು ಶ್ರಮಪಡುತ್ತಿರುವ ಮುಸ್ಲಿಂ ಬಾಂಧವ್ಯ ವೇದಿಕೆ ಕರ್ನಾಟಕ ಸಂಘಟನೆಯ ಪ್ರಯತ್ನವನ್ನು ಗ್ರಾಮಸ್ಥರು ಒಕ್ಕೂರಲಿನಿಂದ ಶ್ಲಾಘಿಸಿದರು. ಗಲಭೆ ಸಂಬಂಧ ಶೀಘ್ರದಲ್ಲಿ ನಡೆಯುವ ಶಾಂತಿ ಮತ್ತು ಸಂಧಾನ ಸಭೆಗೆ ಬಾಂಧವ್ಯ ವೇದಿಕೆಯು ಭಾಗವಹಿಸಬೇಕು ಎನ್ನುವ ಅಭಿಪ್ರಾಯವನ್ನು ಈ ಸಂದರ್ಭದಲ್ಲಿ ಉಭಯ ಸಮುದಾಯದ ಹಿರಿಯ ಮುಖಂಡರು ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ l ಅಕ್ರಮವಾಗಿ ಮದ್ಯ ಮಾರಾಟ; ನಾಶ ಪಡಿಸಿದ ಅಬಕಾರಿ ಇಲಾಖೆ ಅಧಿಕಾರಿಗಳು

ವೇದಿಕೆಯ ನಿಯೋಗದಲ್ಲಿ ಗೌರವಾಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಅಧ್ಯಕ್ಷ ಸುಹೇಲ್ ಅಹಮದ್ ಮರೂರ್, ವಕ್ತಾರ ಮುಷ್ತಾಕ್ ಹೆನ್ನಾಬೈಲ್, ಮಾಜಿ ಅಧ್ಯಕ್ಷ ಅನಿಸ್ ಪಾಷಾ, ಖಜಾಂಚಿ ಮುಝಫರ್ ಹುಸೇನ್ ಪಿರಿಯಾಪಟ್ಟಣ, ಮುಬಾರಕ್ ಗುಲ್ವಾಡಿ, ರಫೀಕ್ ನಾಗೂರ್, ರೆಹಮತ್ ದಾವಣಗೆರೆ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...