ಹಾವೇರಿ | ರಟ್ಟಿಹಳ್ಳಿ ಮಸೀದಿಯಲ್ಲಿ ನಿತ್ಯ ಕನ್ನಡದಲ್ಲಿಯೇ ನಮಾಜ್

Date:

ರಟ್ಟಿಹಳ್ಳಿ ತಾಲೂಕಿನ ಚಿಕ್ಕಕಬ್ಬಾರ ಗ್ರಾಮದ ಜಾಮಿಯಾ ಮಸೀದಿ ಮತ್ತು ಹಜರತ್ ಮಹಬೂಬ್ ಸುಭಾನಿ ದರ್ಗಾದಲ್ಲಿ ಮುಸ್ಲಿಮರು ನಿತ್ಯ ಐದು ಬಾರಿ ಕನ್ನಡದಲ್ಲಿಯೇ ನಮಾಜ್ ಮಾಡುತ್ತಾರೆ. ಈ ಮೂಲಕ ಕನ್ನಡ ನಾಡು ನುಡಿಯ ಬಗ್ಗೆ ತಮ್ಮ ಪ್ರೀತಿ, ಗೌರವವನ್ನು ಅರ್ಪಿಸುತ್ತಿದ್ದಾರೆ. ಈ ಗ್ರಾಮದಲ್ಲಿ 450ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳಿವೆ. ಗ್ರಾಮದಲ್ಲಿ ಯುಗಾದಿ, ದೀಪಾವಳಿ, ಜಾತ್ರೆ, ಉತ್ಸವಗಳನ್ನು ಹಿಂದು-ಮುಸ್ಲಿಂ ಒಂದಾಗಿ ಆಚರಿಸುತ್ತಾರೆ.

ಗ್ರಾಮದ ವೀರನಗೌಡ ಪಾಟೀಲ್ ಅವರ ಕುಟುಂಬದ ಹಿರಿಯರು 150 ವರ್ಷಗಳ ಹಿಂದೆ, ಇಲ್ಲಿರುವ ಮುಸ್ಲಿಂ ಕುಟುಂಬಗಳ ಪ್ರಾರ್ಥನೆಗಾಗಿ ತಮ್ಮ ಮೂರುವರೆ ಗುಂಟೆ ಜಾಗವನ್ನು ದಾನವಾಗಿ ನೀಡಿದ್ದರು. ಅದೇ ಜಾಗದಲ್ಲಿ ಈ ಮಸೀದಿ ನಿರ್ಮಿಸಲಾಗಿದ್ದು, ಅಂದಿನಿಂದ ಇಂದಿನವರೆಗೂ ಇಲ್ಲಿ ನಿತ್ಯ ಕನ್ನಡದಲ್ಲಿಯೇ ನಮಾಜ್ ಪಠಿಸಲಾಗುತ್ತಿದೆ.

ಮಸೀದಿಯ ಹೊರಗೆ ಮತ್ತು ಒಳಗೆ ಕನ್ನಡದ ನಾಮಫಲಕಗಳನ್ನು ಹಾಕಲಾಗಿದೆ. ಇಲ್ಲಿ ಉರ್ದು ಶಾಲೆ ಇದ್ದರು ಮುಸ್ಲಿಂ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಶಾಲೆಯಲ್ಲಿ ಓದುತ್ತಿದ್ದಾರೆ. ಈ ಹಳ್ಳಿಯ ಮುಸ್ಲಿಮರಿಗೆ ಅಷ್ಟಾಗಿ ಉರ್ದು ಮಾತನಾಡಲು ಬರುವುದಿಲ್ಲ. ಹೆಚ್ಚು ಮಂದಿ ಕೃಷಿ ಚಟುವಟಿಕೆಯನ್ನೇ ಅವಲಂಬಿಸಿದ್ದು, ಎಲ್ಲಾ ಮುಸ್ಲಿಮರು ಸ್ಪಷ್ಟ ಕನ್ನಡದಲ್ಲಿ ಮಾತನಾಡುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಸೀದಿಯ ಮೌಲ್ವಿ ಮೌಲಾನ ಮಹಮ್ಮದ್ ಚಮನ್, ಇಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮೌಲ್ವಿಯಾಗಿದ್ದಾರೆ. ಗ್ರಾಮದ ಮುಸ್ಲಿಮರ ಅಪೇಕ್ಷೆಯಂತೆ ನಿತ್ಯ ಕನ್ನಡದಲ್ಲಿ ನಮಾಜ್ ಮಾಡುತ್ತಾರೆ. ಅರೇಬಿಕ್ ಭಾಷೆಯಲ್ಲಿರುವ ಕುರಾನ್ ಅನ್ನು ಕನ್ನಡಕ್ಕೆ ಅನುವಾದಿಸಿ ಪಠಿಸುತ್ತಾರೆ. ಅಲ್ಲದೇ ಮಸೀದಿಗೆ ಬರುವ ಮುಸ್ಲಿಮರಿಗೆ ಬುದ್ಧ, ಬಸವಣ್ಣ, ಮಹಮದ್ ಪೈಗಂಬರರು ಬೋಧಿಸಿದ ತತ್ವ, ಆದರ್ಶಗಳನ್ನು, ಜೀವನ ಸಾರವನ್ನು ಕನ್ನಡದಲ್ಲಿ ತಿಳಿಸಿಕೊಡಲಾಗುತ್ತದೆ ಎನ್ನುತ್ತಾರೆ.

ಕರ್ನಾಟಕದ ಅನೇಕ ಊರುಗಳಲ್ಲಿ ಕನ್ನಡವನ್ನು ತಮ್ಮ ಬದುಕಿನ ಭಾಗದಂತೆ ಬಳಸುತ್ತಿದ್ದಾರೆ. ಅದರಲ್ಲಿ ರಟ್ಟಿಹಳ್ಳಿಯ ಮಸೀದಿಯೂ ಒಂದು. ಆ ಮಸೀದಿ ಮತ್ತು ಮುಸಲ್ಮಾನರ ಕನ್ನಡ ಕೊಡುಗೆ ಸ್ಮರಣಿಕೆಗೆ ಯೋಗ್ಯವಾದುದು. ಇದು ಎಲ್ಲರಿಗೂ ತಿಳಿಯಬೇಕಾದುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...