ಹಾವೇರಿ | ಒಳಮೀಸಲಾತಿ ಜಾರಿಗೆ ಹೊಸ ಆಯೋಗ: ಹೋರಾಟ ಸಮಿತಿ ಖಂಡನೆ

Date:

ಸುಪ್ರೀಂ ಕೋರ್ಟ್ ಆದೇಶವಿದ್ದರೂ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿಗೊಳಿಸದೇ ಹೊಸದಾಗಿ ಆಯೋಗ ರಚಿಸಲು ಮುಂದಾಗಿದೆ. ಈ ಮೂಲಕ ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಒಳಮೀಸಲಾತಿ ಹೋರಾಟ ಸಮಿತಿ ಆಕ್ರೋಶ ಹೊರಹಾಕಿದೆ.

ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಒಳಮೀಸಲಾತಿ ಹೋರಾಟ ಸಮಿತಿಯ ಮುಖಂಡರಾದ ಗವಿಸಿದ್ದಪ್ಪ ದ್ಯಾಮಣ್ಣ, “30 ವರ್ಷಗಳಿಂದ ನಮ್ಮ ಸಮುದಾಯ ಸುದೀರ್ಘವಾಗಿ ಹೋರಾಟ ಮಾಡುತ್ತ ಬಂದಿದೆ. ಮೀಸಲಾತಿ ಜಾರಿಗೊಳಿಸುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ. ಸುಪ್ರೀಂಕೋರ್ಟ್ ಆದೇಶ ನೀಡಿರುವುದು ನಮಗೆ ಬಲ ತಂದಿದೆ. ಈ ಆದೇಶ ನೀಡಿ ಮೂರು ತಿಂಗಳಾದರೂ ರಾಜ್ಯ ಸರ್ಕಾರ ಜಾರಿಗೆ ತಂದಿಲ್ಲ” ಎಂದು ತಿಳಿಸಿದರು.

ಐದು ಗ್ಯಾರಂಟಿ ಜತೆಗೆ ಒಳಮೀಸಲಾತಿ ಜಾರಿಗೊಳಿಸುವುದಾಗಿ ಘೋಷಿಸಿದ್ದರು. ಒಂದೂವರೆ ವರ್ಷ ಕಳೆದರೂ ಕಾಂಗ್ರೆಸ್ ಸರ್ಕಾರ ಚಕಾರ ಎತ್ತುತ್ತಿಲ್ಲ. ಈಗ ಮತ್ತೊಂದು ಆಯೋಗ ರಚಿಸಬೇಕೆಂದು ಸರ್ಕಾರ ಹೇಳುತ್ತಿದೆ. ಅವರೇ ರಚಿಸಿದ್ದ ಆಯೋಗದ ವರದಿ ಅವರಿಗೆ ಬೇಡವಾಯಿತೇ? ಚುನಾವಣೆ ಹಿನ್ನೆಲೆಯಲ್ಲಿ ಕಾಲ ಹರಣ ಮಾಡುವ ಹುನ್ನಾರ ನಡೆಸಿದೆ. ಸಿಎಂ ಸಿದ್ದರಾಮಯ್ಯ ಯಾರ ಒತ್ತಡಕ್ಕೂ ಮಣಿಯದೇ, ಬೊಮ್ಮಾಯಿ ಅವರಂತೆ ದಿಟ್ಟ ನಿರ್ಧಾರ ತೆಗೆದುಕೊಂಡು ಕೂಡಲೇ ಒಳಮೀಸಲಾತಿ ಜಾರಿಗೊಳಿಸಬೇಕೆಂದು ದ್ಯಾಮಣ್ಣ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿದ್ದೀರಾ:ಹಾವೇರಿ | ಶಾಸಕ ರುದ್ರಪ್ಪ ಲಮಾಣಿ ಕಾಣೆಯೆಂದು ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ

ಸುದ್ದಿಗೋಷ್ಠಿ ವೇಳೆ ಉಡಚಪ್ಪ ಮಾಳಗಿ, ಅಶೋಕ ಮರೆಣ್ಣನವರ, ಮಾರುತಿ ಸೊಟ್ಟಪ್ಪನವರ, ಪರಶುರಾಮ ಹರಪನಹಳ್ಳಿ, ಮೃತ್ಯುಂಜಯ ಮುಷ್ಟಿ, ಜಗದೀಶ ಹರಿಜನ, ಹನುಮಂತಗೌಡ ತಳಮನಿ, ಬಸವರಾಜ ಕಾಳೆ, ದುರ್ಗಪ್ಪ ಮಾದರ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...