ಹಾವೇರಿ | ಹಿಂದಿ ಹೇರಿಕೆ ವಿರೋಧ; ಕರವೇ ಕಾರ್ಯಕರ್ತರ ಬಂಧಿಸಿದವರನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ

Date:

“ರಾಜ್ಯದಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಹೋರಾಟ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸ ಕ್ರಮವನ್ನು ಖಂಡಿಸುತ್ತೇವೆ. ಕೂಡಲೇ ಬಿಡುಗಡೆ ಮಾಡಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ ಆಗ್ರಹಿಸಿದರು.

ಹಾವೇರಿ ಪಟ್ಟಣದ ಸಿದ್ದಪ್ಪ ಕಂಬಳಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ 41 ಜನರ ಕರವೇ ಕಾರ್ಯಕರ್ತರ ಬಂದಿಸಿರುವವರನ್ನು ಬಿಡುಗಡೆ ಮಾಡುವಂತೆ  ಪ್ರತಿಭಟನೆಯಲ್ಲಿ ಮಾತನಾಡಿದರು.

“ಸ್ವಾತಂತ್ರ್ಯಾನಂತರ ಇದೇ ರಾಜಾಭಾಷಾ ಆಯೋಗ/ಸಮಿತಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ಮೊಟ್ಟ ಮೊದಲ ಬಾರಿ ಈ ರಾಜಭಾಷಾ ಸಮಿತಿಗೆ ನೇರವಾಗಿ ಬಿಸಿ ಮುಟ್ಟಿಸುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದಲ್ಲಿರುವುದು ಪ್ರಜಾಪ್ರಭುತ್ವ. ಜನರ ಆಳ್ವಿಕೆಯ ಕಾಲದಲ್ಲಿ ನಾವು ಇದ್ದೇವೆ. ರಾಜಪ್ರಭುತ್ವ ಹೋಗಿ ಎಷ್ಟೋ ದಶಕಗಳಾಗಿವೆ. ರಾಜರೇ ಇಲ್ಲದ ಕಾಲದಲ್ಲಿ ರಾಜಭಾಷೆ ಇರಲು ಹೇಗೆ ಸಾಧ್ಯ? ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ, ಇರುವುದು ನೆಲದ ಭಾಷೆಗಳು, ಜನರ ಭಾಷೆಗಳು. ರಾಜಭಾಷೆ ಎಂಬುದೇ ಪ್ರಜಾಪ್ರಭುತ್ವ ವಿರೋಧಿ” ಎಂದು ಕಿಡಿಕಾರಿದರು.

“ಒಕ್ಕೂಟ ಸರ್ಕಾರ ರಾಜಭಾಷಾ ಸಮಿತಿ/ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ನಾವು ಸಹಿಸುವುದಿಲ್ಲ. ಹಿಂದಿ ಹೇರಿಕೆ ದೇಶಕ್ಕೆ ಮಾರಕ ಮಾತ್ರವಲ್ಲ, ಭಾರತದ ಐಕ್ಯತೆಗೆ ಧಕ್ಕೆ ತರುತ್ತಿದೆ” ಎಂದು ಹೇಳಿದರು.

ನಂತರ ರಾಜ್ಯ ಕಾರ್ಯದರ್ಶಿ ಕರಿಬಸಯ್ಯ ಎಸ್ ಬಿ, ಮಾತನಾಡಿ, “ನಿನ್ನೆ ನಡೆದ ಪ್ರತಿಭಟನೆ ಹಿನ್ನೆಲೆಯಲ್ಲಿ ನಮ್ಮ ಮುಖಂಡರು/ಕಾರ್ಯಕರ್ತರ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ನಾವು ಪೊಲೀಸರ ಕೇಸು, ಜೈಲಿಗೆ ಹೆದರುವುದಿಲ್ಲ. ಹೆದರಿಸಿ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇನ್ನು ಮುಂದೆ ರಾಜ್ಯದದಲ್ಲಿ ಹಿಂದಿ ಪ್ರಚಾರಕ್ಕೆ ಯಾವುದೇ ಸಂಸ್ಥೆ ಕಾರ್ಯಕ್ರಮ ಮಾಡಲು ಮುಂದಾದರೆ ಅದರ ಪರಿಣಾಮವನ್ನು ಅವರೇ ಎದುರಿಸಬೇಕಾಗುತ್ತದೆ. ನಮ್ಮ ಸಹನೆ ಮಿತಿ ಮೀರಿದೆ. ಇನ್ನು ನಾವು ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೇಲೆ ಹೂಡಲಾಗಿರುವ ಸುಳ್ಳು ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂದಕ್ಕೆ ಪಡೆದು, ಅವರನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಇಡೀ ಜಿಲ್ಲಾಧ್ಯಂತ ನಾವು ಚಳವಳಿ ಸಂಘಟಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಮುಖಂಡರು ಸತೀಶ ಗೌಡ ಮುದಿಗೌಡ್ರು,  ಮಾರುತಿ ಪೂಜಾರ, ಸಂತೋಷ ಪಾಟೀಲ, ಸಿಕಂದರ್ ಓಲೆಕಾರ, ಬಿ ಎಚ್ ಬಣಕಾರ,  ಅಬ್ಬು ಕೋಡಮಗಿ, ನಾಗೇಶ ಪೂಜಾರ,  ಶಿವರಾಜ ಕುರುಬರ, ರಾಮಣ್ಣ ಅಗಸರ, ವಿಜಯಲಕ್ಷ್ಮಿ ಗುಡಿಮಿ, ಈರಮ್ಮ ಮಂಗಳ, ಲಕ್ಷ್ಮಿ, ರೂಪ, ಶೋಭಕ್ಕ ಹೊನ್ನಳ್ಳಿ, ಜಿಎಸ್ ಕೊಟ್ರೇಶ್, ಚೆನ್ನಪ್ಪ, ಕುತ್ನ ಸಲೀಂ ದುಕಾಂಧರ, ಮಂಜು ಕಾಯಿಕಲ್ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...