ಹಾವೇರಿ | ಆನ್ಲೈನ್ ಬೆಟ್ಟಿಂಗ್ ಗೇಮ್ ನಿಷೇಧಿಸುವಂತೆ ನಮ್ಮ ಕರ್ನಾಟಕ ಸೇನೆ ಆಗ್ರಹ

Date:

“ಸುಮಾರು ದಿನಗಳಿಂದ ಆನ್ ಲೈನ್ ಬೆಟ್ಟಿಂಗ್ ಹಾಗೂ ಆನ್ಲೈನ್ ಗೇಮ್ ವೆಬ್ಸೈಟಗಳಿಂದ ಹಲವಾರು ವಿದ್ಯಾರ್ಥಿಗಳು, ಯುವಕರು, ರೈತರ ಮಕ್ಕಳು ಹಾಳಾಗಿದ್ದು, ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬಂದಿವೆ. ಹಾಗಾಗಿ ಆನ್ಲೈನ್ ಬೆಟ್ಟಿಂಗ್ ಗೇಮ್ ನಿಷೇದ ಮಾಡಬೇಕು” ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಮಾರುತಿ ಎಫ್ ಹಾಲಗಿ ಅಗ್ರಹಿದರು.

ಹಾವೇರಿ ಪಟ್ಟಣದ ನಮ್ಮ ಕರ್ನಾಟಕ ಸೇನೆ ವತಿಯಿಂದ ಆನ್ಲೈನ್ ಬೆಟ್ಟಿಂಗ್ ಹಾಗೂ ಆನ್ಲೈನ್ ಬೆಟ್ಟಿಂಗ್ ಗೇಮಗಳನ್ನು ನಿಷೇಡಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಆನ್ಲೈನ್ ಬೆಟ್ಟಿಂಗ್ ಸಹವಾಸದಿಂದ ಹಲವಾರು ಯುವಕರು, ವಿದ್ಯಾರ್ಥಿಗಳು ಸಾಲ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈಗಾಗಲೇ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.  ಅನಧೀಕೃತವಾಗಿ ಬೆಟ್ಟಿಂಗ್ ವ್ಯವಸ್ಥೆ ನಡೆಯುತ್ತಿದ್ದು, ಇಬ್ಬರು ಬುಕ್ಕಿಗಳ ಮೇಲೆ ಎಫ್.ಐ.ಆರ್ ದಾಖಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರಿಗೆ ಆನ್ಲೈನ್ ಬೆಟ್ಟಿಂಗ್ ಬಗ್ಗೆ ಅರಿವು ಮೂಡಿಸಬೇಕು. ಮೋಸಮಾಡುವ ಉದ್ದೇಶದಿಂದ ಜನರನ್ನು ವಂಚಿಸುತ್ತಿರುವ ಆನ್ ಲೈನ್ ಗೇಮಿಂಗ್ ವೆಬಸೈಟ್ ಹಾಗೂ ಆಪ್ ಗಳನ್ನು ರಾಜ್ಯಾದ್ಯಂತ ನಿಷೇಧಿಸಬೇಕು” ಎಂದು ಒತ್ತಾಯಿಸಿದರು.

“ಒಂದುವೇಳೆ ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ವೆಬಸೈಟ್ ಹಾಗೂ ಆಪ್ ಗಳನ್ನು ರಾಜ್ಯ ಸರ್ಕಾರ ನಿಷೇದಮಾಡದೇ ಹೋದಲ್ಲಿ ನಮ್ಮ ಕರ್ನಾಟಕ ಸೇನೆ ವತಿಯಿಂದ ರಾಜ್ಯದಾದ್ಯಂತ ಉಗ್ರವಾದ ಹೋರಾಟ ಮಾಡುತ್ತೇವೆ” ಎಂದು ಮಾರುತಿ ಹಾಲಗಿ ಅವರು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಏ.10ರವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಹೆದ್ದಾರಿ ತಡೆ

ಈ ಸಂದರ್ಭದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಯಲ್ಲಪ್ಪ ಕೋಣನತಂಬಿಗೆ ಮತ್ತು ಜಿಲ್ಲಾ ಮಹಿಳಾ ಅಧ್ಯಕ್ಷರಾದ ಅನ್ನಪೂರ್ಣ ವಡ್ಡಟ್ಟಿ, ಹಾವೇರಿ ತಾಲೂಕ ಮಹಿಳಾ ಅಧ್ಯಕ್ಷರಾದ ವೇದಾ, ಹಾಗೂ ಕೊಡಿ ಬಸನಗೌಡ,ರೇಣುಕಾ ಬಡಿಗೇರ,ನಾಗನಗೌಡ ಗೌಡ್ರು ಹೀಗೆ ಇನ್ನು ಅನೇಕ ಸದಸ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...