ಹಾವೇರಿ | ಅಂಬೇಡ್ಕರ್‌ರಂತಾಗಲು ಪಂಚ ಜ್ಞಾನಾರ್ಜನೆ ಮುಖ್ಯ: ಅನ್ನಪೂರ್ಣ ಸಂಗಳದ

Date:

ಸಮಾಜದಲ್ಲಿ ಭಾರತ ರತ್ನ ಡಾ. ಬಿ ಆರ್‌ ಅಂಬೇಡ್ಕರ್‌ ಅಂತಹ ದೊಡ್ಡ ವ್ಯಕ್ತಿಗಳ ಸಾಲಿಗೆ ನಿಲ್ಲಲು ಜ್ಞಾನ, ಜಾಣ್ಮೆ, ತಾಳ್ಮೆ, ಬುದ್ಧಿವಂತಿಕೆ ಹಾಗೂ ಶಿಕ್ಷಣ ಎಂಬ ಪಂಚ ಜ್ಞಾನಗಳ ಅರ್ಜನೆ ಬಹಳ ಮುಖ್ಯ ಎಂದು ಹಾವೇರಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ ಅಭಿಪ್ರಾಯಪಟ್ಟರು.

ಹಾವೇರಿ ನಗರದ ಶ್ರೀಶಕ್ತಿ ತೆರೆದ ತಂಗುದಾಣದಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, “ಜ್ಞಾನಾರ್ಜನೆಗೆ ತ್ಯಾಗ ಮಾಡಬೇಕು. ಆಶ್ರಮಗಳಲ್ಲಿ ಕಲಿತು ಉನ್ನತ ಹುದ್ದೆಗಳನ್ನು ಪಡೆದುಕೊಳ್ಳಬೇಕು. ಉನ್ನತ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಮಹಾಂತೇಶ್ ಮೂಲಿಮನಿ ಮಾತನಾಡಿ, “ಜೀವನದಲ್ಲಿ ಯಶಸ್ಸು ಕಾಣಲು ಪ್ರತಿಯೊಬ್ಬರು ಮಹಾತ್ಮ ಗಾಂಧೀಜಿ ಅವರಂತೆ ಸತ್ಯದ ಮಾರ್ಗದಲ್ಲಿ ನಡೆಯಬೇಕು. ಸದಾಕಾಲವೂ ನಿಮ್ಮ ಜೀವನ ಹಸನ್ಮುಖವಾಗಿರಲಿ, ಭವಿಷ್ಯದಲ್ಲಿ ಉನ್ನತ ಮಟ್ಟಕ್ಕೆ ಸಾಗುವಂತಾಗಲಿ” ಎಂದು ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 26 at 4.41.53 PM

ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಮಾತನಾಡಿ, “ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೇತೃತ್ವದ ಸಂವಿಧಾನವು ನೀಡಿರುವ ಮಕ್ಕಳ ಹಕ್ಕುಗಳನ್ನು ಕಾಪಾಡಿಕೊಳ್ಳಬೇಕು. ಶಿಕ್ಷಣ, ಉದ್ಯೋಗಗಳು ಮೂಲಭೂತ ಹಕ್ಕಾಗಬೇಕು. ಶಿಕ್ಷಣ ಎಂಬುದು ಹುಲಿಯ ಹಾಲಿದ್ದಂತೆ. ಅದನ್ನು ಕುಡಿದವರು ಘರ್ಜಿಸಲೇಬೇಕು ಎಂದು ಹೇಳಿದ ಅಂಬೇಡ್ಕರ್ ಅವರ ಈ ಸಂದೇಶವನ್ನು ಅಳವಡಿಸಕೊಳ್ಳಬೇಕು. ಶಿಕ್ಷಣ ಹಕ್ಕು ಕಾಯಿದೆ ( Right To Education 2009) ಸಮರ್ಪಕವಾಗಿ ಜಾರಿಯಾಗಬೇಕು. ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಉಚಿತ ಶಿಕ್ಷಣ, ಸಮಾನಾಂತರ ಶಿಕ್ಷಣ ಸಿಗಬೇಕು. ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂವಿಧಾನ ಆಶಯಗಳನ್ನು ಈಡೇರಿಸಲು ಮುಂದಾಗಬೇಕು” ಎಂದು ಒತ್ತಾಯಿಸಿದರು.

ತಂಗುದಾಣದ ವಿದ್ಯಾರ್ಥಿಗಳಿಂದ ಅಂಬೇಡ್ಕರ್ ಅವರ ಜೀವನ ಚರಿತ್ರೆ ಹಾಡುಗಳನ್ನು ಹಾಗೂ ದೇಶ, ಕನ್ನಡಾಭಿಮಾನದ ವಿವಿಧ ನೃತ್ಯ, ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಈ ಸುದ್ದಿ ಓದಿದ್ದೀರಾ?: ಹಾವೇರಿ | ವಿದ್ಯಾರ್ಥಿನಿಗೆ ಅಸ್ಪೃಶ್ಯತೆ ಆಚರಣೆ: ತಪ್ಪಿತಸ್ತರಿಗೆ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯ

ಕಾರ್ಯಕ್ರಮದಲ್ಲಿ ಮಹೇಶ್ ಹೆಡಿಯಾಲ್, ಸಂಸ್ಥೆಯ ಸಿಬ್ಬಂದಿ ಪಾರ್ವತಿ ಎಲ್, ಲಕ್ಷ್ಮಿ ಸಿಂಗಣ್ಣನವರ, ದೀಪಾ ಪಿ ಹೆಚ್, ಉಮಾ ವಾಯ ಹೆಚ್, ಪವಿತ್ರಾ ವಿ ವಿ, ವಿದ್ಯಾರ್ಥಿಗಳಾದ ರಾಜು ಕುಂಚಿಕೊರವರ, ಗಣೇಶ ಕುರಿ, ಅಣ್ಣಪ್ಪ ಹುಲ್ಮನಿ, ಆಕಾಶ ಕೆ, ಲಿಂಗರಾಜ ಗುಡ್ಡದಮತ್ತಿಹಳ್ಳಿ, ಮನೋಜ್ ಯರೇಶಿಮಿ, ಚಂದ್ರು ಜಾಡರ, ವಿನಾಯಕ ಮಾನ್ವಿ, ಶಿವಪ್ಪ ದುರಮುರುಗಿ, ರಾಜೇಶ್ ಬಾದಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...