ಹಾವೇರಿ | ರಸ್ತೆಯಲ್ಲಿ ಗುಂಡಿಗಳು ಬೈಕ್ ಸವಾರರು ಜೀವ ಭಯದಲ್ಲಿ ಸಂಚಾರ

Date:

ರಸ್ತೆಯ ಮೇಲೆ ಸಣ್ಣ ಸಣ್ಣ ಗುಂಡಿಗಳನ್ನು ಸರಿಪಡಿಸಲು ಜೆಸಿಬಿ ಮೂಲಕ ಕೆದರಿದ ಪರಿಣಾಮ ಏರಿಳಿತ ಆಗಿದ್ದು ವಾಹನ ಸವಾರರಿಗೆ ಅಪಾಯ ತಂದೊಡ್ಡಿವೆ. ಇದರಿಂದ ವಾಹನ ಸವಾರರು ಜೀವ ಭಯದಲ್ಲೇ ಸಂಚಾರ ಮಾಡುತ್ತಿದ್ದಾರೆ.

ಹಾವೇರಿ ಹಾನಗಲ್ ಮಾರ್ಗದಲ್ಲಿರುವ ರಾಜ್ಯ ಹೆದ್ದಾರಿಯಲ್ಲಿ ಬೈಪಾಸ್ ದಾಟಿದ ಮೇಲೆ ಗೌರಾಪೂರದವರೆಗೂ ಅಲ್ಲಲ್ಲಿ  ಸಣ್ಣಪುಟ್ಟ ಗುಂಡಿಗಳು ಬಿದ್ದಿವೆ. ಇವು ವಾಹನ ಸವಾರರಿಗೆ ಅದರಲ್ಲೂ ಬೈಕ್ ಸವಾರರಿಗೆ ಸಾಕಷ್ಟು ಅಪಾಯವನ್ನು ತಂದೊಡ್ದುತ್ತಿವೆ. ಈ ಗುಂಡಿಗಳನ್ನು ಮುಚ್ಚಿ ರಸ್ತೆ ಸರಿಪಡಿಸಿ ಸುರಕ್ಷಿತ ರಸ್ತೆ ನಿರ್ಮಾಣ ಮಾಡುವಂತೆ ಜನರು ಒತ್ತಾಯಿಸುತ್ತಿದ್ದಾರೆ.

ಸಣ್ಣ ಸಣ್ಣ ಗುಂಡಿಗಳನ್ನು ರಿಪೇರಿ ಮಾಡಲು ಜೆಸಿಬಿಗಳಿಂದ ಕೆದರಿ ದೊಡ್ಡ ಗುಂಡಿಗಳಾಗಿ ಮಾರ್ಪಟ್ಟಿವೆ. ಈ ರೀತಿ ಮಾಡಿ ತಿಂಗಳು ಕಳೆದರೂ ಸಂಬಂಧಿಸಿದ ಇಲಾಖೆಯವರು ಗುತ್ತಿಗೆದಾರರು ಇದನ್ನು ಸರಿಪಡಿಸಲು ಮುಂದಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಸ್ತೆಯಲ್ಲಿ ದೊಡ್ಡ ಗುಂಡಿಗಳಿರುವುದು ವಾಹನ ಸವಾರರಿಗೆ ಅದರಲ್ಲೂ ದ್ವಿ ಚಕ್ರವಾಹನ ಸವಾರರಿಗೆ ಸಾಕಷ್ಟು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಈ ಗುಂಡಿಗಳನ್ನು ತಪ್ಪಿಸಲು ಒಂದೇ ಬದಿ ವಾಹನ ಓಡಿಸುವ ಒತ್ತಡದಲ್ಲಿ ಎದುರಿಗೆ ಬರುವ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸುವ ಸಾಧ್ಯತೆಗಳು ಹೆಚ್ಚು.

ಬೈಕ್ ಸವಾರರು ತಗ್ಗು ಗುಂಡಿಗಳನ್ನು ತಪ್ಪಿಸಿ ಗಾಡಿ ಹೊಡೆಯುವಾಗ ಬ್ಯಾಲೆನ್ಸ್ ಕಳೆದುಕೊಂಡು ಬೈಕುಗಳು ಬಿದ್ದು ಅಪಘಾತಕ್ಕೀಡಾಗುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಜೀವ ಕೈಯಲ್ಲಿ ಹಿಡಿದುಕೊಂಡು ಭೀತಿಯಿಂದಲೇ ಜನರು ವಾಹನ ಓಡಿಸುತ್ತಿದ್ದಾರೆ.

ಬೈಕ್ ಸವಾರ ಮಾತನಾಡಿ, “ಗುಂಡಿಗಳನ್ನು ತಪ್ಪಿಸಲು ಹೋಗಿ ಬೈಕುಗಳು ಸ್ಲಿಪ್ ಆಗಿ ಬೀಳುತ್ತೀವೆ. ಬೇಗ ದುರಸ್ಥಿ ಮಾಡಿದರೆ ಬೈಕ್ ಸವಾರರು ಬೀಳುವುದನ್ನು ತಪ್ಪಿಸಬಹುದು” ಎಂದು ಹೇಳುದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಗ್ಯಾರಂಟಿ ವೈಫಲ್ಯ ಆರೋಪ; ಜೆಡಿಎಸ್ ಪ್ರತಿಭಟನೆ

ಈ ಕುರಿತು ಈದಿನ.ಕಾಮ್ ನೊಂದಿಗೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಗುಂಡಿಗಳನ್ನು ಸರಿಪಡಿಸಲು ಜೆಸಿಬಿ ಮೂಲಕ ಕೆದರಿ ಅನೇಕ ತಿಂಗಳುಗಳಾದರೂ ದುರಸ್ತಿ ಕೈಗೊಂಡಿರುವುದಿಲ್ಲ. ಬೈಕ್ ಸವಾರರಿಗೆ ತೊಂದರೆ ಆಗುತ್ತಿವೆ. ಇಲ್ಲಿಯ ಜನಪ್ರತಿನಿಧಿಗಳು ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಗುಂಡಿಗಳನ್ನು ಕೂಡಲೇ ದುರಸ್ತಿಗೊಳಿಸಿ ಅಪಘಾತ, ಜೀವಹಾನಿಯಾಗುವುದನ್ನು ತಪ್ಪಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

SHARANAPPA H SANGANALA
ಶರಣಪ್ಪ ಎಚ್ ಸಂಗನಾಳ
+ posts

ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಶರಣಪ್ಪ ಎಚ್ ಸಂಗನಾಳ
ಶರಣಪ್ಪ ಎಚ್ ಸಂಗನಾಳ
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ. ಧ್ವನಿ ಶೈಕ್ಷಣಿಕ ಸಂಪನ್ಮೂಲ ಕೇಂದ್ರದಲ್ಲಿ ಒಂದಷ್ಟು ಕಾಲ ಕೆಲಸ. ಸದ್ಯ 'ಈ ದಿನ.ಕಾಮ್'ನಲ್ಲಿ ಮೀಡಿಯಾ ಕೋಆರ್ಡಿನೇಟರ್. ಓದು, ಪಕ್ಷಿ ವೀಕ್ಷಣೆ, ಕೃಷಿಯಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...