ಹಾವೇರಿ | ಬೆಳೆ ಹಾನಿ, ಸೂಕ್ತ ಪರಿಹಾರ ನೀಡುವಂತೆ ಪ್ರಗತಿಪರ ಸಂಘಟನೆಗಳು ಮನವಿ

Date:

“ಹಾನಗಲ್ಲ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣ ಅಂದರೆ 80% ರಷ್ಟು ರೈತ ಸಮುದಾಯ ಜೀವನ ನಡೆಸುವ ಪ್ರದೇಶವಾಗಿದೆ.  ಅತೀ ಹೆಚ್ಚು ಅಂದರೆ ಸುಮಾರು 46 ಸಾವಿರ ಕ್ಕೂ ಹೆಚ್ಚು ಪೆಕ್ಟರ್ ಭೂ ಪ್ರದೇಶ ಸಾಗುವಳಿ ಮಾಡಲು ಅನುಕೂಲವಿದ್ದ ಪ್ರದೇಶವಾಗಿದೆ.ಮಾನ್ಸೂನ್ ಬೂಜಾಟದಿಂದ ಜಡೆ ಮಳೆ ಸುರಿದು ಅಷ್ಟೂ ಭೂ ಪ್ರದೇಶ ನೀರಿನಿಂದ ಆವೃತವಾಗಿದ್ದು, ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕು” ಎಂದು ಸರಕಾರಕ್ಕೆ ಪ್ರಗತಿಪರ ಸಂಘಟನೆ ಮುಖಂಡರು ಒತ್ತಾಯಿಸಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ತಹಸೀಲ್ದಾರ ಕಚೇರಿಯಲ್ಲಿ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರಗತಿಪರ ಸಂಘಟನೆ ಹಾಗೂ ರೋಷನಿ ಟ್ರಸ್ಟ್ ವತಿಯಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಈ ಮನವಿ ಸಮಯದಲ್ಲಿ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರಪ್ಪ ಬಳಿಗಾರ್ ಮಾತನಾಡಿ, ರೈತರು ಸಾಲ ಸೋಲ ಮಾಡಿ ಬೀಜ ಗೊಬ್ಬರ ಖರೀದಿಸಿ, ಮಣ್ಣಲ್ಲಿ ಬೆರೆಸಿ ಇನ್ನೇನು ಬೆಳೆ ಮೊಳಕೆಯೊಡೆಯುವ ಸಮಯದಲ್ಲಿ ಎಡೆಬಿಡದೆ ಸುರಿದ ಮಳೆಯಿಂದ ಇಲ್ಲದ ಅವಾಂತರ ಸೃಷ್ಟಿಯಾಗಿ ಬಿತ್ತಿದ ಬೀಜ ಮೊಳಕೆಯೊಡೆಯುವ ಹಂತದಲ್ಲಿಯೇ ಮಣ್ಣಲ್ಲಿ ಕಮರಿಹೋಗಿದೆ. ಅಲ್ಪ ಸ್ವಲ್ಪ ಬೆಳೆದ ಬೆಳೆಯೂ ಹಾಳಾಗಿ ಹೋಗಿದ್ದು, ಬಿತ್ತದೆ ಉಳಿದ ಭೂ ಪ್ರದೇಶ ಇನ್ನೂ ಹಾಗೆಯೇ ಉಳಿದಿದೆ. ಬಿತ್ತನೆಯ ಕಾಲ ಮುಗಿದುಹೋಗಿದ್ದು ರೈತ ಮುಂದಿನ ಜೀವನ ಕ್ರಮದ ಬಗ್ಗೆ ಚಿಂತೆಗೀಡಾಗಿದ್ದಾನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂತಹ ಸಂದರ್ಭದಲ್ಲಿ ರೈತರಿಗೆ ಅತ್ಮಸ್ಥೆರ್ಯ ತುಂಬುವುದರ ಜೊತೆಗೆ ಆರ್ಥಿಕ ನೆರವು ಸರಕಾರ ಮಾಡಬೇಕು. ಬೆಳೆ ಹಾನಿಗೆ ಸೂಕ್ತ ಪರಿಹಾರವನ್ನು ಸರಕಾರ ಕೊಡಬೇಕು” ಎಂದು ಒತ್ತಾಯಿದರು.

ಪ್ರಗತಿಪರ ಸಂಘಟನೆ ಮುಖಂಡರು ಫೇರೋಜ್ ಮಾತನಾಡಿ, “ರೈತ ಎಲ್ಲ ಬೆಳೆಗಳಿಗೆ ಬೆಳೆ ವಿಮೆ ಪಾವತಿಸಿದ್ದು, ಒಟ್ಟು ನಾಶವಾಗಿರುವ ಬೆಳೆಗೆ ಬೆಳೆ ವಿಮೆ ಪಾವತಿಸಿದ ಎಲ್ಲ ರೈತರಿಗೆ ವಿಮಾ ಕಂಪನಿ ಈ ಕೂಡಲೆ 25% ಬೆಳೆ ವಿಮೆ ಹಣವನ್ನು ರೈತರ ಖಾತೆಗೆ ಜಮೆ ಮಾಡಬೇಕು. ತಾಲೂಕಿನಲ್ಲಿ ಬೆಳೆದ ಬೆಳೆಗಳಿಗೆ ಮೇಲುಗೊಬ್ಬರವಾಗಿ ಬಳಸುವ ಯೂರಿಯಾ ಗೊಬ್ಬರ ಸರಿಯಾದ ಸಮಯಕ್ಕೆ ರೈತರಿಗೆ ಸಿಗದೆ ಮತ್ತಷ್ಟು ಬೆಳೆಗಳು ಅವನತಿಯ ಅಂಚಿನಲ್ಲಿದ್ದು ಶೀಘ್ರದಲ್ಲಿ ರೈತನಿಗೆ ಹೆಚ್ಚಿನ ಪ್ರಮಾಣದಲ್ಲಿ ಯೂರಿಯಾ ದೊರಕುವಂತಾಗಬೇಕು” ಎಂದು ಒತ್ತಾಯಿಸಿದರು.

“ರಾಸಾಯನಿಕ ಗೊಬ್ಬರದ ಜೊತೆಗೆ ಮಣ್ಣು ಪರೀಕ್ಷೆ ಮಾಡದೆ ಲಿಂಕ್‌ನ್ನು ಗೊಬ್ಬರದ ಜೊತೆಗೆ ಹೆಚ್ಚುವರಿಯಾಗಿ ನೀಡುತ್ತಿದ್ದು, ಒತ್ತಾಯ ಪೂರ್ವಕವಾಗಿ ರೈತರಿಗೆ ಹೊರೆ ಹೊರಿಸಲಾಗಿದೆ. ಇದು ಮತ್ತಷ್ಟು ರೈತರನ್ನು ಸಾಲಗಾರರನ್ನಾಗಿಸುವಲ್ಲಿ ಪ್ರಮುಖ ಕಾರಣವಾಗಿದೆ. ಮುಂದೆ ಕೃಷಿ ಇಲಾಖೆ ಮಣ್ಣು ಪರೀಕ್ಷೆ ಮಾಡದೆ ಯಾವುದೆ ಲಿಂಕ್‌ನ್ನು ರೈತರಿಗೆ ಕೊಡದಂತೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಈ ಸಮಯದಲ್ಲಿ ಪ್ರಗತಿಪರ ಮುಖಂಡರು ಮಂಜುನಾಥ ಕರ್ಜಗಿ, ಎನ್. ಎಂ ಪೂಜಾರ, ಬಿ. ಆರ್. ಶೆಟ್ಟರ, ಅನಿತಾ ಡಿಸೋಜಾ, ಕಲ್ಲಪ್ಪ, ಮಾರ್ತಾಂಡಪ್ಪ, ರೈತರು ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...