ಹಾವೇರಿ | ಹಿಂದಿ ಹೇರಿಕೆ ವಿರೋಧಿಸಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

Date:

ಕೇಂದ್ರ ಸರ್ಕಾರದ ಒತ್ತಾಯಪೂರ್ವಕ ಹಿಂದಿ ಹೇರಿಕೆ ವಿರೋಧಿಸಿ ಹಾಗೂ ರಾಷ್ಟ್ರೀಯ ಹಿಂದಿ ದಿವಸ ಆಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ವತಿಯಿಂದ ಹಾವೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಗುತ್ತಲ ರಸ್ತೆಯ ಕರವೇ ಕಚೇರಿಯಿಂದ ಸಗೂರ ಕರಿಯಪ್ಪ ವೃತ್ತದವರೆಗೆ ಪ್ರತಿಭಟನಾ ರಾಯಲಿ ನಡೆಸಿದ ಕರವೇ ಕಾರ್ಯಕರ್ತರು ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಈ ಕೂಡಲೇ ಸಂವಿಧಾನಕ್ಕೆ ತಿದ್ದುಪಡಿ ತಂದು ಸಂವಿಧಾನದ 8ನೇ ಪರಿಚ್ಛೇದದಲ್ಲಿ ಉಲ್ಲೇಖಿಸಿರುವ ಎಲ್ಲ 22 ಭಾಷೆಗಳನ್ನೂ ಅಧಿಕೃತ, ಆಡಳಿತ ಭಾಷೆಗಳನ್ನಾಗಿ ಮಾಡಬೇಕು. ಹಿಂದಿಗೆ ಅನೈತಿಕವಾಗಿ ವಿಶೇಷ ಮನ್ನಣೆ ನೀಡುವ ಸಂವಿಧಾನದ 343ರಿಂದ 351ನೇ ವಿಧಿಗಳನ್ನು ರದ್ದುಪಡಿಸಿ ಎಲ್ಲ ಭಾಷೆಗಳೂ ಒಕ್ಕೂಟದ ದೃಷ್ಟಿಯಲ್ಲಿ ಸಮಾನ ಎಂದು ಸಾರಬೇಕು. ರಾಜ್ಯದಲ್ಲಿ ಎಲ್ಲ ಕೇಂದ್ರ ಸರ್ಕಾರಿ ಇಲಾಖೆಗಳು, ಉದ್ಯಮಗಳಲ್ಲಿ ಕನ್ನಡವೇ ಆಡಳಿತ ಭಾಷೆಯಾಗಬೇಕು. ಎಲ್ಲ ಬಗೆಯ ಪತ್ರ ವ್ಯವಹಾರಗಳೂ ಕನ್ನಡದಲ್ಲೇ ನಡೆಯಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಮನಗರ | ಹಿರಿಯ ಪತ್ರಕರ್ತ ದಿ.ಮೋಹನ್ ಕುಮಾರ್ ಮಗನ ಮೇಲೆ ಮಾರಣಾಂತಿಕ ಹಲ್ಲೆ; ಕೊಲೆ ಯತ್ನ

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ, ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಗುಡಮಿ, ತಾಲೂಕು ಅಧ್ಯಕ್ಷ ಹಾಲೇಶ ಹಾಲಣ್ಣನವರ, ಮಾರುತಿ ಪೂಜಾರ, ಸಿಖಂದ‌ರ್ ವಾಲಿಕಾರ, ಬಿ.ಎಚ್.ಬಣಕಾರ, ಹಸನಸಾಬ ಹತ್ತಿಮತ್ತೂರ, ಅಶೋಕ ಹೊಸಮನಿ, ಅಬ್ಬು ಕೊಡಮಗ್ಗಿ, ಶಿವಾನಂದ ಪೂಜಾರ, ಬಸವರಾಜ ಅರಳಿ, ಕಾಳಪ್ಪ ಬಡಿಗೇರ, ಸತ್ಯವತಿ ಕಡೇರ, ಲಕ್ಷ್ಮೀಶ ಮೇಲೂರಿ, ಬಸಲಿಂಗಪ್ಪ ನರಗುಂದ, ಇಮಾಮಸಾಬ ತಿಮಾಪೂರ, ಬಸವರಾಜ ಕಡೆಮನಿ ಸೇರಿದಂತೆ ಜಿಲ್ಲೆಯ ಹಲವು ಕಾರ್ಯಕರ್ತರು ಹಾಜರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...