ಹಾವೇರಿ | ಒಳ ಮೀಸಲಾತಿ ಜಾರಿ ಮಾಡುವಂತೆ ಪ್ರತಿಭಟನೆ, ಆ 15ರ ವರೆಗೆ ಗಡುವು

Date:

ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿ ಒಳಮೀಸಲಾತಿ ಜಾರಿ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

 ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದ ಎದುರು ಒಳ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ, ಸುಪ್ರೀಂಕೋರ್ಟ್ ತೀರ್ಪುಗೆ ಗೌರವ ಕೊಡಿ, ಸಾಮಾಜಿಕ ನ್ಯಾಯಕ್ಕಾಗಿ ಒಳ ಮೀಸಲಾತಿ ಜಾರಿಮಾಡಿ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮುಖಂಡರು ಗವಿಸಿದ್ದಪ್ಪ ದ್ಯಾಮಣ್ಣವರ ಮಾತನಾಡಿ, “ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಸಮುದಾಯದೊಳಗಿನ ಅತೀ ಹಿಂದುಳಿದ ಮತ್ತು ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ಒಳ ಮೀಸಲಾತಿಯ ಬೇಡಿಕೆ ಈಡೇರಿಕೆಗೆ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಶೀಘ್ರವಾಗಿ ಒಳಮೀಸಲಾತಿ ಮಾಡಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖಂಡರು ಡಿ ಎಸ್ ಮಾಳಗಿ ಮಾತನಾಡಿ, “ಈ ಅಸಮಾನತೆಯನ್ನು ಸರಿಪಡಿಸಲು, ಸರ್ವೋಚ್ಛ ನ್ಯಾಯಾಲಯದ ತೀರ್ಪು ಇಂದಿಗೆ ಒಂದು ವರ್ಷ ಆಗಿದೆ. ಸ್ಪಷ್ಟವಾಗಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೂ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ನೀಡಲು ರಾಜ್ಯ ಸರ್ಕಾರಗಳಿಗೆ ಆದೇಶವನ್ನು ನೀಡಿದೆ. ರಾಜ್ಯ ಸರ್ಕಾರದ ವಿಳಂಬ ನೀತಿಯಿಂದಾಗಿ ನಮ್ಮ ಸಮುದಾಯದ ವಿದ್ಯಾರ್ಥಿಗಳು, ಉದ್ಯೋಗಾಕಾಂಕ್ಷಿಗಳು, ಕಾರ್ಮಿಕರು ಹಾಗೂ ಮಹಿಳೆಯರು ಹಾಗೂ ಒಟ್ಟಾರೆ ಸಮಾಜ ತಮ್ಮ ನ್ಯಾಯಯುತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ. ನಮಗೆ ಆಗಿರುವ ಅನ್ಯಾಯವನ್ನು ಸಹಿಸಲು ಸಾಧ್ಯವಿಲ್ಲಾ ನಮ್ಮ ಬೇಡಿಕೆ ಈಡೇರಿಕೆ ಮಾಡಲು ಸರ್ಕಾರ ಮುಂದಾಗಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡರು ಪರಮೇಶಪ್ಪ ಮೇಲಗಮನಿ ಮಾತನಾಡಿ, ಸುಪ್ರೀಂಕೋರ್ಟ್ ತೀರ್ಪಿನ ತರುವಾಯ ಹರಿಯಾಣ, ತೆಲಂಗಾಣ, ಆಂಧ್ರಪ್ರದೇಶ ಸರ್ಕಾರಗಳು ತುರ್ತು ನಿಗಾವಹಿಸಿ, ತಮ್ಮ ರಾಜ್ಯಗಳಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಿ ಸಾಮಾಜಿಕ ನ್ಯಾಯವನ್ನು ಒದಗಿಸಿವೆ. ನಾಗಮೋಹನ್ ದಾಸ್ ಆಯೋಗಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷದಿಂದಾಗಿ ಆರು ತಿಂಗಳಾದರು ಸರಿಯಾದ ಮಾಹಿತಿಗಳು ಆಯೋಗಕ್ಕೆ ಬಂದಿಲ್ಲ. ಸರ್ಕಾರ ಕುಂಟು ನೆಪ ಹೇಳದೇ ಶೀಘ್ರವಾಗಿ ಒಳಮೀಸಲಾತಿ ಮಾಡಲು ಮುಂದಾಗಬೇಕು” ಎಂದರು.

ರಾಜ್ಯ ಸಂಘಟನಾ ಸಂಚಾಲಕರಾದ ಉಡಚಪ್ಪ ಮಾಳಗಿ ಹಾಗೂ ಜಿಲ್ಲಾಧ್ಯಕ್ಷರಾದ ನಾಗರಾಜ ಮಾಳಗಿ ಮಾತನಾಡಿ “ಸರ್ಕಾರ ಅಗಸ್ಟ್-15 ಒಳಗೆ ನಮ್ಮ ಬೇಡಿಕೆಯನ್ನು ಈಡೇರಿಸಲು ವಿಫಲವಾದರೆ, ನಮ್ಮ ಹಕ್ಕುಗಳಿಗಾಗಿ ಕರ್ನಾಟಕದಾದ್ಯಂತ ಇರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು, ಕಾರ್ಮಿಕರು, ವಕೀಲರು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸುವುದು ಅನಿವಾರ್ಯವಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರು ಹೊನ್ನಪ್ಪ ತಗಡಿನಮನಿ, ನೀಲಕಂಠಪ್ಪ ಕುಸನೂರ, ಪ್ರಕಾಶ ಪೂಜಾರ, ಅಶೋಕ ಮರೆಣ್ಣನವರ, ತಿರಕಪ್ಪ ಚಿಕ್ಕೇರಿ, ಬಿ ಆರ್ ಪುಟ್ಟಣ್ಣನವರ, ಸುಭಾಷ ಬೆಂಗಳೂರು, ಸಂತೋಷ ಗುಡ್ಡಪ್ಪನವರ, ಕರಿಯಪ್ಪ ಕಟ್ಟಿಮನಿ, ಮಲ್ಲೇಶ ಕುನ್ನೂರ ಅವರು ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಪರಿಸರ ಸಂರಕ್ಷಣೆಯಿಂದ ಸಮಾಜದ ಸ್ವಾಸ್ಥ್ಯ ಕಾಪಾಡಲು ಸಾಧ್ಯ: ಕೆ. ಎಫ್. ನಾಯ್ಕರ

ಈ ಸಂದರ್ಭದಲ್ಲಿ ಮುಖಂಡರಾದ ಮಾಲತೇಶ ಯಲ್ಲಾಪುರ,ಜಗದೀಶ ಹರಿಜನ, ಸುರೇಶ ಆಶಾದಿ,ಕೃಷ್ಣ ಕರ್ಜಗಿ,ಮಲ್ಲೇಶ ಕಡಕೋಳ,ಮಹೇಶ ಹರಿಜನ,ಸುಭಾಸ ಮಾಳಗಿ,ಸುನೀಲ ಬೇಟಗೇರಿ,ರಾಜು ಹರಿಜನ,ಶ್ರೀಮತಿ ರೇಣುಕಾ ಬಡಕ್ಕಣ್ಣನವರ,s ಹನಮಂತಪ್ಪ ಸಿ.ಡಿ,ಸುಮಂಗಲಾ ಕೃಷ್ಣಾಪುರ,ಮಾರುತಿ ಬಣಕಾರ,ಶ್ರೀಮತಿ ಗೀತಾ ಒಳಗುಂಡಿ,ಶ್ರೀಮತಿ ಗೀತಾ ಕಡೇಮನಿ,ಶ್ರೀಮತಿ ನೇತ್ರಾ ದೊಡ್ಡಮನಿ,ಶ್ರೀಮತಿ ಗೀತಾ ಹರಿಜನ,ನಾಗರಾಜ ಬಣಕಾರ,ಮಹೇಶಪ್ಪ ಹರಿಜನ,ಶ್ರೀಮತಿ ಯಲ್ಲಮ್ಮ ಕೊಪ್ಪದ,ನಾಗರಾಜ ಹಾವನೂರ,ಶೇಕಣ್ಣ ದಂಡಿನ,ಮಾಲತೇಶ ಹಲಬಗೊಂಡ,ಗುಡ್ಡಪ್ಪ ಬಣಕಾರ ಸೇರಿದಂತೆ ಜಿಲ್ಲೆಯ ಮುಖಂಡರು,ಯುವಕರು,ಮಹಿಳೆಯರು,ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...