ಹಾವೇರಿ | ನೋಂದಣಿ ಶುಲ್ಕ ಏರಿಕೆ: ರೈತ ಸಂಘ ಖಂಡನೆ

Date:

“ರಾಜ್ಯದಲ್ಲಿ ಈಗಾಗಲೇ ಯಾವುದೇ ರೀತಿಯ ಸಾರ್ವಜನಿಕರ ಮತ್ತು ಸಚಿವರ ಸಂಪುಟದಲ್ಲಿ ಚರ್ಚೆ ಮಾಡದೆ, ಜನರ ಸಂಕಷ್ಟವನ್ನು ಅರ್ಥಮಾಡಿಕೊಳ್ಳದೆ ರಾತ್ರೋ ರಾತ್ರಿ ನೋಂದಣಿ ಶುಲ್ಕ ಹೆಚ್ಚಿಸಿರುವುದು ಸಾರ್ವಜನಿಕ ವಲಯದಲ್ಲಿ ಬರಸಿಡಿಲು ಬಡಿದಂತಾಗಿದೆ” ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಹಣಮಂತಪ್ಪ ಕಬ್ಬಾರ ಹೇಳಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ವತಿಯಿಂದ ರಾಜ್ಯದಲ್ಲಿ ನೋಂದಣಿ ಶುಲ್ಕ ಹೆಚ್ಚಿಸಿರುವದನ್ನು ವಾಪಸ್ ಪಡೆಯುವಂತೆ ಉಪನೋಂದಣಾಧಿಕಾರಿಗಳು ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಈಗಾಗಲೇ ರಾಜ್ಯದಲ್ಲಿ ಮಳೆರಾಯನ ಅಬ್ಬರಕ್ಕೆ ರೈತಾಪಿ ವರ್ಗ ಮತ್ತು ಸಾರ್ವಜನಿಕರು, ಉದ್ಯಮಿಗಳು ಕಷ್ಟದಲ್ಲಿ ಸಿಲುಕಿದ್ದಾರೆ. ಅದರ ಮದ್ಯೆ ತಾವುಗಳು ಬೇರೆ ರಾಜ್ಯದಲ್ಲಿ ಈ ರೀತಿಯಾದ ವ್ಯವಸ್ಥೆ ಎಲ್ಲಿದೆ. ನಮ್ಮ ರಾಜ್ಯದಲ್ಲಿ ಕಡಿಮೆ ಇದೆ ಎಂದು ಪತ್ರಿಕಾ ಹೇಳಿಕೆ ಕೊಟ್ಟಿರುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 “ರಾಜ್ಯದ ಜನರ ಹಿತದೃಷ್ಟಿಯಿಂದ ತಾವುಗಳು ಈ ನಿರ್ಧಾರ ತೆಗೆದುಕೊಂಡಿರುವುದು ತತ್‌ಕ್ಷಣವೇ ಜಾರಿಗೆ ಬರುವಂತೆ ನಿರ್ದೇಶನ ನೀಡಿರುವುದು ಖಂಡನೀಯ. ಕೂಡಲೇ ತಾವುಗಳು ನೋಂದಣಿ ಶುಲ್ಕವನ್ನು ಮೊದಲಿನಂತೆಯೇ ಯಥಾಸ್ಥಿತಿಯಲ್ಲಿ ಕಡಿಮೆಗೊಳಿಸಬೇಕು” ಎಂದು ಒತ್ತಾಯಿಸಿದರು.

“ಈಗಾಗಲೇ ರಾಜ್ಯ ಸರ್ಕಾರವು ಒಂದರ ಮೇಲೊಂದು ಬೆಲೆಗಳು ಏರಿಕೆ ಮಾಡುತ್ತಿದ್ದು, ಅದರೊಂದಿಗೆ ಈಗ ನೋಂದಣಿ ಶುಲ್ಕವನ್ನು ಹೆಚ್ಚಿಸಿರುವುದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಲ್ಲಿ ಕಡುಬಡವರು ಯಾವ ರೀತಿಯಾಗಿ ಆಸ್ತಿಗಳನ್ನು ನೋಂದಣಿ ಮಾಡಿಸಿಕೊಳ್ಳಬೇಕೆಂದು ಚಿಂತಿಸುತ್ತಿದ್ದಾರೆ” ಎಂದರು.

“ಒಂದು ವೇಳೆ ತಾವುಗಳು ಕಡಿಮೆ ಮಾಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಮತ್ತು ಮುಂಬರುವ ಚುನಾವಣೆಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಮೂವರು ಶಿಕ್ಷಕರಿಗೆ ಕಲಾಶಿಸಂ ಪ್ರತಿಷ್ಠಾನದ ಮಕ್ಕಳ ಸ್ನೇಹಿ ಶಿಕ್ಷಕ ಪ್ರಶಸ್ತಿ

ಮನವಿ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಮಂಜುನಾಥ ಸಂಭೋಜಿ, ರಾಜೇಶ ಅಂಗಡಿ, ಮಂಜುನಾಥ ಗುಂಡಣ್ಣನವರ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...