ಎಸ್ಸಿ/ಎಸ್ಟಿ ಸಮುದಾಯಕ್ಕೆ ಸ್ಮಶಾನ ಭೂಮಿ ಇಲ್ಲದೇ ಇರುವುದರಿಂದ ನಮ್ಮ ಸಮಾಜಕ್ಕೆ 6 ಎಕರೆ ಜಮೀನು ಮತ್ತು ಡಾ// ಬಾಬು ಜಗಜೀವನ ರಾಮ ಅವರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 1 ಎಕರೆ ಜಮೀನು ಮಂಜೂರು ಮಾಡಬೇಕು” ಎಂದು ಒತ್ತಾಯಿಸಿ, ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು ಡಾ.ಮೂರ್ತಿ ಎಲ್ ಅವರಿಗೆ ಹಾವೇರಿ ಪಟ್ಟಣದ ಜಿಲ್ಲಾಡಳಿತ ಭವನದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ವತಿಯಿಂದ ಜಿಲ್ಲಾಡಳಿತ ಭವನದಲ್ಲಿ ಮನವಿ ಸಲ್ಲಿಸಲಾಯಿತು.
“ಎಸ್ಸಿ/ಎಸ್ಟಿ ಸಮುದಾಯಗಳು ನಗರದಲ್ಲಿ ಹೆಚ್ಚಿನ ಜನಸಂಖ್ಯೆ ಇದ್ದು, ಸ್ಮಶಾನಕ್ಕೆ ಭೂಮಿ ನೀಡಬೇಕು. ಬಹುದಿನಗಳಿಂದ ಆಳುವ ಸರ್ಕಾರಗಳಿಗೆ ಮನವಿ ಸಲ್ಲಿಸುತ್ತಾ ಬರುತ್ತಿದ್ದೇವೆ. ಡಾ.ಬಾಬು ಜನಜೀವನ ರಾಮ್ ಅವರ ಹೆಸರಿನಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 1 ಎಕರೆ ಸರ್ಕಾರಿ ಜಮೀನು ನೀಡಿದರೆ ನಮ್ಮ ಸಮುದಾಯ ಹಾಗೂ ಎಲ್ಲಾ ಸಮುದಾಯಗಳ ಬಡವರ ವಿವಿಧ ಕಾರ್ಯಕ್ರಮಗಳನ್ನು ಮಾಡಲು ಸಹಾಯವಾಗುತ್ತದೆ” ಎಂದು ಮುಖಂಡರು ಮನವಿ ಮಾಡಿದರು.
“ಜಿಲ್ಲೆಯಲ್ಲಿನ ಇನ್ನೂ ಅನೇಕ ಹಳ್ಳಿಗಳಲ್ಲಿ ಸ್ಮಶಾನದ ಸಮಸ್ಯೆಗಳು ಕಂಡು ಬಂದಲ್ಲಿ ಶೀಘ್ರವಾಗಿ ಜಿಲ್ಲಾಡಳಿತ ಸ್ಪಂದಿಸಬೇಕು. ಜಿಲ್ಲೆಯ ಎಲ್ಲಾ ಎಸ್ಸಿ/ಎಸ್ಪಿ ಸಮುದಾಯದವರಿಗೆ ಮನೆ ನಿರ್ಮಾಣ ಮಾಡಲು ನಿಗಮದಿಂದ ಹೆಚ್ಚಿನ ಅನುದಾನ ನೀಡಬೇಕು. ವಸತಿ ಯೋಜನೆಯ ಮನೆಗಳಿಗೆ ಹೆಚ್ಚಿನ ಸಹಾಯಧನ ನೀಡಲು ಕ್ರಮಕೈಗೊಳ್ಳಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನದಲ್ಲಿ ಭಾರಿ ಅವ್ಯವಹಾರವಾಗಿರುವ ಮಾತುಗಳು ಕೇಳಿ ಬರುತ್ತಿದ್ದು, ಸಮಗ್ರ ತನಿಖೆ ಮಾಡಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ, ಡಿಎಸ್ಎಸ್ ಜಿಲ್ಲಾ ಸಂಚಾಲಕರು ಮಾಲತೇಶ ಯಲ್ಲಾಪುರ, ವಾಲ್ಮೀಕಿ ಸಮಾಜದ ಅಧ್ಯಕ್ಷರು ರಮೇಶ ಆನವಟ್ಟಿ, ವಕೀಲರು ಬಸವರಾಜ ಹಾದಿಮನಿ, ಮುಖಂಡರು ಫಕ್ಕಿರೇಶ ಹರಿಜನ,ಬಸವರಾಜ ಅರಳೇಶ್ವರ, ಗುಡ್ಡಪ್ಪ ಬಣಕಾರ, ಜಗದೀಶ ಹರಿಜನ ಸೇರಿದಂತೆ ಡಿಎಸ್ಎಸ್ ಮತ್ತು ವಿವಿಧ ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.





