ಹಾವೇರಿ | ಕ್ರಾಂತಿಕಾರಿ ವಿದ್ಯಾರ್ಥಿ ಚಳವಳಿ ಎಸ್ಎಫ್ಐಗೆ 56ರ ಸಂಭ್ರಮ

Date:

ದೇಶದ ವಿದ್ಯಾರ್ಥಿ ಚಳುವಳಿಯು ಸ್ವಾತಂತ್ರ್ಯ ಆಂದೋಲನದ ಭಾಗವಾಗಿ ಬಂದಿರುವಂತಹದ್ದು.  ಸಂಪೂರ್ಣ ಸ್ವಾತಂತ್ರ್ಯದ ಆಶಯವನ್ನು ಹೊಂದಿದ್ದ ಭಗತ್‍ಸಿಂಗ್‍ ಅವರ ಆಶಯಗಳನ್ನು ಮುಂದಕ್ಕೆ ಒಯ್ಯುವ ಜವಾಬ್ದಾರಿಯನ್ನು ಎಸ್ಎಫ್ಐ ವಿದ್ಯಾರ್ಥಿ ಚಳುವಳಿ ಮಾಡುತ್ತಿದೆ.

1970 ಡಿಸೆಂಬರ್ 30 ರಲ್ಲಿ ಕೇರಳದ ತಿರುವನಂತಪುರದಲ್ಲಿ ಎಸ್‍ಎಫ್‍ಐನ ಮೊದಲ ಅಖಿಲ ಭಾರತ ಸಮ್ಮೇಳನ ನಡೆದು ದೇಶದ ವಿದ್ಯಾರ್ಥಿಗಳ ಮಧ್ಯ ಬಲಿಷ್ಠ ಚಳುವಳಿಯನ್ನು ಕಟ್ಟುವ, ಸರ್ವರಿಗೂ ಶಿಕ್ಷಣ-ಸರ್ವರಿಗೂ ಉದ್ಯೋಗ ಹಾಗೂ ವಿದ್ಯಾರ್ಥಿ-ಯುವಜನ ಚಳುವಳಿಯಯನ್ನು ದೇಶದಲ್ಲಿ ಬಲಿಷ್ಠಗೊಳಿಸುವ ನಿರ್ಣಯಗಳು ಚರ್ಚಿತವಾದವು. ಅಂದು ನಡೆಸಿದ ಸಮ್ಮೇಳನ ಇಂದು ದೇಶಾದ್ಯಂತ ಕೋಟ್ಯಾಂತರ ವಿದ್ಯಾರ್ಥಿಗಳ ನಡುವೆ ಎಸ್‍ಎಫ್‍ಐ ಬಲಿಷ್ಠವಾಗಿದೆ.

ಶಿಕ್ಷಣದ ಉಳಿವಿಗಾಗಿ, ಸಂವಿಧಾನದ ರಕ್ಷಣೆಗಾಗಿ ಸಂಘರ್ಷಾತ್ಮಕ ಹೋರಾಟಗಳ ಮೂಲಕ ಚಳುವಳಿ ನಡೆಸುತ್ತಾ ವಿದ್ಯಾರ್ಥಿಗಳ ಆಶಾಕಿರಣವಾಗಿ ಬೆಳೆಯುತ್ತಿದೆ. ಶಿಕ್ಷಣದ ವ್ಯಾಪಾರೀಕರಣ, ಕೋಮುವಾದೀಕರಣ, ವಿದೇಶಿ ವಿವಿ, ಖಾಸಗಿ ವಿವಿಗಳ ಸ್ಥಾಪನೆಯ ವಿರುದ್ದ, ಸರ್ಕಾರಿ ಶಾಲಾ-ಕಾಲೇಜು, ಹಾಸ್ಟೆಲ್‍ಗಳನ್ನು ಬಲಪಡಿಸಲು ಹಾಗೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದರ ವಿರುದ್ದ ನಿರಂತರ ಹೋರಾಟಗಳನ್ನು ಎಸ್‍ಎಫ್‍ಐ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನ್ಯಾಯದ ವಿರುದ್ಧ ಹೋರಾಟ ನಡೆಸಿ, ಅಭ್ಯಾಸ, ಹೋರಾಟ, ತ್ಯಾಗದ ಮೂಲಕ ವಿದ್ಯಾರ್ಥಿಗಳ ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ದುಡಿಯುತ್ತಿದೆ. ಸಾಮ್ರಾಜ್ಯಶಾಹಿ, ವಸಾಹತುಶಾಹಿ ವಿರೋಧಿ ಸ್ವಾತಂತ್ರ್ಯ ಹೋರಾಟದ ಪರಂಪರೆ ಮುಂದುವರಿಸುತ್ತಿರುವ ಎಸ್ಎಫ್ಐ ದೇಶದ ಐಕ್ಯತೆಗಾಗಿ, ಸೌಹಾರ್ಧಾತೆಗಾಗಿ, ಜಾತಿವಾದಿ, ಕೋಮುವಾದಿ ದೇಶ ವಿಭಜನೆಯ ಕೆಟ್ಟ ಶಕ್ತಿಗಳ ವಿರುದ್ಧ , ಭ್ರಷ್ಟ ರಾಜಕೀಯ ನಾಯಕರು, ಅಧಿಕಾರಿಗಳು ವಿರುದ್ಧ ರಾಜಿ ಇಲ್ಲದ ಹೋರಾಟಗಳನ್ನು ಸಂಘರ್ಷವನ್ನು ನಡೆಸುವ ಹಾದಿಯಲ್ಲಿ ಸಾಗಿದೆ.

ಪ್ರಸ್ತುತದಿನಗಳಲ್ಲಿ  ವಿದ್ಯಾರ್ಥಿ ಚಳುವಳಿ ಬೆಳೆವಣಿಗೆ ಕುಂಠಿತಗೊಳಲು ಶಿಕ್ಷಣ ವ್ಯವಸ್ಥೆ ವಿಭಿನ್ನವಾಗಿದೆ. ಹೊಸ ಶಿಕ್ಷಣ ನೀತಿ (ಎನ್ಇಪಿ) 2020 ನಂತಹ ವಿದ್ಯಾರ್ಥಿ ವಿರೋಧಿ ನೀತಿಗಳು ಪ್ರಮುಖ ಕಾರಣವಾಗಿವೆ ಮತ್ತು ಕಾರ್ಪೊರೇಟ್ ಸಂಸ್ಥೆಗಳು ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ಆವರಿಸಿಕೊಂಡಿವೆ. ಹಾಗೂ ವಿದ್ಯಾರ್ಥಿ ಸಮುದಾಯವನ್ನು ರಾಜಕೀಯ ನಾಯಕರು ಅವರಿಗೆ ಬೇಕಾಗುವ ರೀತಿಯಲ್ಲಿ ಬಳಕೆ ಮಾಡಿಕೊಂಡು “ಕ್ಯಾಂಪಸ್ ಡೆಮಾಕ್ರಸಿ” ಹದಗೆಡಿಸಿವೆ. ಇಡೀ ದೇಶಾದ್ಯಂತ ಕೆಲವೇ ಕೆಲವು ವಿಶ್ವವಿದ್ಯಾಲಯಗಳಾದ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯೂ), ಹೈದರಾಬಾದ್ ವಿ,ವಿ ಕೇರಳದ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರ ಇವತ್ತು ವಿದ್ಯಾರ್ಥಿ ಚುನಾವಣೆಗಳು ನಡೆಯುತ್ತವೆ. ಇಲ್ಲಿ ಮಾತ್ರ ವಿದ್ಯಾರ್ಥಿ ಚಳುವಳಿಗಳು ಬಲಿಷ್ಠವಾಗಿವೆ ಸರ್ಕಾರದ ವಿದ್ಯಾರ್ಥಿ ವಿರೋಧಿ ಧೋರಣೆಗಳ ವಿರುದ್ಧ ಧೀರೋದತನ ಹೋರಾಟ ನಡೆಸಲು ಸಾಧ್ಯವಾಗುತ್ತದೆ.

ದೇಶದ ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಸ್ವಾತಂತ್ರ್ಯ, ಪ್ರಜಾಪ್ರಭುತ್ವ, ಸಮಾಜವಾದ ಶ್ವೇತ ಪತಾಕೆ ವಿಶಾಲ ಭಾರತಾದ್ಯಂತ ಸಮರಶೀಲ ಹೋರಾಟಗಳನ್ನು ನಡೆಸುತ್ತಾ ಬಂದಿದೆ. ದೇಶಾದ್ಯಂತ ನಡೆಯುವ ರೈತರ, ಕೂಲಿ-ಕಾರ್ಮಿಕರ, ಶೋಷಣೆಯ ವಿರುದ್ಧದ ಹೋರಾಟಗಳಿಗೆ ನಿರಂತರವಾಗಿ ಬೆಂಬಲ ನೀಡುತ್ತಿದ್ದ ಈ ಕ್ರಾಂತಿಕಾರಿ ವಿದ್ಯಾರ್ಥಿ ಚಳುವಳಿಯು 56 ವರ್ಷದ ಸಂಭ್ರಮದಲ್ಲಿದೆ. ಇಂತಹ ಹೆಮ್ಮೆಯ ಪರಂಪರೆಯ ಚಳುವಳಿಯನ್ನು ನೆನೆಯುತ್ತಾ ವರ್ಷವಿಡೀ 56 ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮಗಳನ್ನು ವಿಭಿನ್ನ ರೀತಿಯಲ್ಲಿ ಆಚರಣೆ ನಡೆಸುತ್ತಾ ಬಂದಿದೆ. ಜೊತೆಗೆ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ಧ ವಿದ್ಯಾರ್ಥಿಗಳನ್ನು ಸಂಘಟಿಸಿ ಹೆಮ್ಮರವಾಗಿ ಬಲಿಷ್ಠಗೊಳಬೇಕು. ಎಡ ವಿದ್ಯಾರ್ಥಿ ಸಂಘಟನೆಯಗಳನ್ನು ಐಕ್ಯ ಹೋರಾಟಕ್ಕೆ ತನ್ನೊಟ್ಟಿಗೆ ಕರೆದೊಯ್ಯುವ ಜವಾಬ್ದಾರಿಯಾಗಿದೆ.

ಬರಹ : ಬಸವರಾಜ ಎಸ್, ಭಾರತ ವಿದ್ಯಾರ್ಥಿ ಫೆಡರೇಷನ್ ಕರ್ನಾಟಕ ರಾಜ್ಯ ಸಮಿತಿ ರಾಜ್ಯ ಉಪಾಧ್ಯಕ್ಷರು

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...