ಹಾವೇರಿ | ಸಂಧ್ಯಾ ಸುರಕ್ಷಾ ವೃದ್ದಾಪ ವಿಕಲಚೇತನ, ವಿಧವಾವೇತನ ಪಡೆದುಕೊಳ್ಳಬೇಕಾದರೆ ಹಣ ನೀಡಬೇಕು: ಕರವೇ ಪ್ರತಿಭಟನೆ

Date:

ಬಡತನದಲ್ಲಿ ಇರುವ ಫಲಾನುಭವಿಗಳು ಸಂಧ್ಯಾ ಸುರಕ್ಷಾ ವೃದ್ದಾಪ ವಿಕಲಚೇತನ, ವಿಧವಾವೇತನ ಪಡೆದುಕೊಳ್ಳಬೇಕಾದರೆ ಹಣ ನೀಡಬೇಕು. ಇಲ್ಲದಿದ್ದರೆ ಅರ್ಜಿಯನ್ನು ರದ್ದುಗೊಳಿಸಿ ಬಡವರನ್ನು ಸತಾಯಿಸುತ್ತೀದ್ದಾರೆ. ಅಥವಾ ನಿಮಗೆ ಗಂಡು ಮಕ್ಕಳಿದ್ದಾರೆ. ಅವರು ನಿಮ್ಮ ಲಾಲನೆ-ಪಾಲನೆ ಮಾಡುತ್ತಾರೆ. ನಿಮಗೆ ಮಾಶಾಸನ ಮಂಜೂರು ಮಾಡಲು ಆಗುವುದಿಲ್ಲ ಅಂತಾ ಉಡಾಪೆ ಉತ್ತರ ನೀಡುತ್ತಾರೆ” ಎಂದು ಕರವೇ ಗಜಸೇನೆ ತಾಲ್ಲೂಕು ಅಧ್ಯಕ್ಷ ಜಗದೀಶ ಮಲ್ಲಾಡದ ಅಸಮಾಧಾನ ವ್ಯಕ್ತಪಡಿಸಿದರು.

ಹಾವೇರಿ ಪಟ್ಟಣದ ತಹಸೀಲ್ದಾರ್ ಕಛೇರಿ ಎದುರು ಸಂಧ್ಯಾ ಸುರಕ್ಷಾ ವೃದ್ದಾಪ ವಿಕಲಚೇತನ, ವಿಧವಾವೇತನ ಮಂಜೂರು ಮಾಡಲು ತಹಶೀಲ್ದಾರ ಕಛೇರಿಯ ಸಿಬ್ಬಂದಿ ಹಣ ಕೇಳುತ್ತಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಪ್ರತಿಭಟಿಸಿ ತಹಶೀಲ್ದಾರ ಶರಣಮ್ಮ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಹಣವನ್ನು ಕೊಟ್ಟರೇ ಗಂಡು ಮಕ್ಕಳಿದ್ದರು ಆದಾಯ ಹೆಚ್ಚಿಗೆ ಇದ್ದರೂ ಮಾಶಾಸನ ಮಂಜೂರು ಮಾಡುತ್ತಾರೆ. ’60-65 ವರ್ಷ ಆಗದೇ ಇದ್ದರೂ ಸಹ ಅಂತವರಿಗೆ ವೈದ್ಯರು ವಯಸ್ಸಾಗಿದೆ’ ಎಂದು ಪ್ರಮಾಣ ಪತ್ರ ನೀಡುತ್ತಾರೆ. ಅಂತವರಿಗೂ ಸಹ ದುಡ್ಡು ತೆಗೆದುಕೊಂಡು ಮಾಶಾಸನ ಮಂಜೂರು ಮಾಡಿರುವ ಅನೇಕ ಉದಾಹರಣೆಗಳಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಬಂಧಿಸಿದ ಅಧಿಕಾರಿಗಳಿಗೆ ಅರ್ಜಿ ಸ್ವೀಕರಿಸುವ ಕಂಪ್ಯೂಟರ್ ಕೇಂದ್ರದ ಸಿಬ್ಬಂದಿ ಮೂಲಕ ಹಣ ವಸೂಲಿಗೆ ಇಳಿದಿರುವ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಜಗದೀಶ ಮಲ್ಲಾಡದ ಒತ್ತಾಯಿಸಿದರು.

ಕರವೇ ಜಿಲ್ಲಾಧ್ಯಕ್ಷ ಮಂಜುನಾಥ ಓಲೇಕಾರ್ ಮಾತನಾಡಿ, “ಸೂಕ್ತ ತನಿಕೆ ನಡೆಸಿ ಸಂಬಂಧಿಸಿದ ಅರ್ಹ ಫಲಾನುಭವಿಗಳಿಗೆ ಮಾಶಾಸನ ಮಂಜೂರು ಮಾಡಬೇಕು. ಹಾಗೂ ಈಗಾಗಲೇ ಅನರ್ಹ ಫಲಾನುಭವಿಗಳಿಂದ ಹಣ ತೆಗೆದುಕೊಂಡು ಮಾಶಾಸನ ಮಂಜೂರು ಮಾಡಿರುವ ಕಂಪ್ಯೂಟರ್ ಕೇಂದ್ರದ ಸಿಬ್ಬಂದಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಒಂದು ವಾರದ ನಂತರ ತಮ್ಮ ಕಛೇರಿಯ ಮುಂದೆ ಅನಿರ್ಧಿಷ್ಟವಾಗಿ ಧರಣಿ ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಮನವಿ ಸ್ವಿಕರಿಸಿದ ತಹಶೀಲ್ದಾರ್ ಶರಣಮ್ಮ ಮಾತನಾಡಿ, “ಈ ಬಗ್ಗೆ ನಾನು ಹಲವಾರು ಬಾರಿ ಫಲಾನುಭವಿಗಳಿಗೆ ಹಣ ನೀಡಬೇಡಿ. ಯಾರಾದರೂ ಹಣ ಕೇಳಿದರೆ ನನ್ನ ಗಮನಕ್ಕೆ ತನ್ನಿ ಎಂದು ಅನೇಕ ಭಾರಿ ಹೇಳಿದ್ದೇನೆ. ಅಲ್ಲದೇ ಈ ಬಗ್ಗೆ ವಿಚಾರಣೆ ಮಾಡಿ ನಮ್ಮ ಕಛೇರಿಯ ಸಿಬ್ಬಂದಿ ಹಣ ಪಡೆದುಕೊಂಡಿರುವುದು ನಿಜವಾದರೆ ಅಂತವರ ಮೇಲೆ ಸೂಕ್ತ ಕ್ರಮ ಕೈಗೊಂಡು ಮೇಲಾಧಿಕಾರಿಗಳಿಗೆ ವರದಿ ನೀಡುತ್ತೇನೆ” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಾಯಕದಲ್ಲಿ ಕೈಲಾಸ ಕಂಡ ಶರಣರು : ಸುರೇಖಾ ಕೆ.ಎ.ಎಸ್.

ಪ್ರತಿಭಟನೆಯಲ್ಲಿ ಕರವೇ ಗಜಸೇನೆ ಜಿಲ್ಲಾ ಕಾರ್ಯಧ್ಯಕ್ಷ ಪುಟ್ಟಪ್ಪ ಹಿತ್ತಲಮನಿ, ಜಿಲ್ಲಾ ಉಪಾಧ್ಯಕ್ಷ ಫಕ್ಕೀರೇಶ ಕಟ್ಟಿಮನಿ, ತಾಲೂಕ ಮಹಿಳಾ ಘಟಕದ ಅಧ್ಯಕ್ಷೆ ಮಾಹಾಬೂಬಿ ಹಿತ್ತಲಮನಿ, ಸುಧಾ ಪಾಟೀಲ. ಕುಮಾರ ಸುಳ್ಳನವರ, ಪವನ ವಡ್ಡರ, ಲಲಿತಾ ಗೊರವರ, ಮಾಂತೇಶ ಮಕರಬ್ಬಿ, ನಾಗರಾಜ ವಾಲಿಕಾರ, ದ್ಯಾಮಣ್ಣ ಮಲ್ಲಾಡದ, ಫಕ್ಕೀರೇಶ ತಹಶೀಲ್ದಾರ, ಚಿಕ್ಕಪ್ಪ ಬಿಟ್ಟೂರ, ಲಕ್ಷ್ಮೀ ಗಂಗಮ್ಮನವರ ಆಶಾ ಬಿ ಕೋಳೂರ, ಶಮಶಾನಬಿ ಬಡಿಗೇರ, ಶೇಖಪ್ಪ ದೀಪಾವಳಿ, ಶಿವಕುಮಾರ, ಅಕ್ಕಮಹಾದೇವಿ ಹರ್ತಿ, ಭಾಗ್ಯಶ್ರೀ ಮೋರೆ, ಶ್ರೀದೇವಿ ಹಿರೇಮಠ, ದರ್ಶನ ಹಾವನೂರು, ವೆಂಕಟೇಶ ದಾಸರ, ಗೌರಮ್ಮ ನೇರ್ತಿ, ಮಲ್ಲವ್ವ ಮಕರಬ್ಬಿ, ವಿಜಯ ಹೆಡಿಯಾಲ, ರೇಣುಕಾ ಮಕರಳ್ಳಿ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...