“ಮಹೀಳಾ ಸಭಲೀಕರಣದ ದಿಕ್ಕಿನಲ್ಲಿ ಇಂತಹ ತರಬೇತಿ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ” ಎಂದು ಸಂಪನ್ಮೂಲ ವ್ಯಕ್ತಿಗಳು ಪರವೀನಭಾನು ಚಿನ್ನಳ್ಳಿ ಅಭಿಪ್ರಾಯ ವ್ಯಕ್ತವಾಯಿತು.
ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ಕೊಪ್ಪರಿಸಿಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ ಮತ್ತು ಸುಸ್ಥಿರ ಅಭಿವೃದ್ಧಿ ಕಾರ್ಯಕ್ರಮ ಇವರ ಆಶ್ರಯದಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ತರಬೇತಿ ಕಾರ್ಯಕ್ರಮದಲ್ಲಿ ಹೊಲಿಗೆ – ಟೇಲರಿಂಗ, ಆಹಾರ ಸಂಸ್ಕರಣೆ, ಮೇಣಬತ್ತಿ ಮತ್ತು ಧೂಪ ತಯಾರಿ, ಸೌಂದರ್ಯ ಸೇವೆಗಳು, ಹೈನಗಾರಿಕೆ, ಕುರಿ- ಕೋಳಿ ಸಾಕಾಣಿಕೆ, ಸ್ವ- ಸಹಾಯ ಸಂಘಗಳ ಮೂಲಕ ಸಣ್ಣ ಉದ್ಯಮ ಆರಂಭಿಸುವ ಬಗ್ಗೆ ಸಮಗ್ರ ಮಾಹಿತಿ ನೀಡಲಾಯಿತು. ಜೊತೆಗೆ ಬ್ಯಾಂಕ ಸಾಲ, ಸರ್ಕಾರದ ಅನುದಾನ, ಸಹಾಯಧನ ಯೋಜನೆಗಳು ಹಾಗೂ ಮಾರುಕಟ್ಟೆ ವ್ಯವಸ್ಥೆಗಳ ಕುರಿತು ವಿವರಿಸಿದರು.
ಈ ತರಬೇತಿಯಲ್ಲಿ ಬಾಗವಹಿಸಿದ ಮಹಿಳೆಯರು ಈ ಕಾರ್ಯಕ್ರಮದಿಂದ ಮನೆಯಲ್ಲಿ – ಸಂಘಗಳಲ್ಲಿ ಉದ್ಯಮ ಆರಂಭಿಸಲು ಆತ್ಮವಿಶ್ವಾಸ ದೊರೆತಿದ್ದು, ಮುಂದಿನ ದಿನಗಳಲ್ಲಿ ಸಯಂ ಉದ್ಯೋಗ ಆರಂಭಿಸುವ ಸಂಕಲ್ಪ ವ್ಯಕ್ತಪಡಿಸಿದರು.
ಇದನ್ನು ಓದಿದ್ದೀರಾ? ಗದಗ | ಸಿಎಂ ಅವರಿಗೆ ಅಲೆಮಾರಿ ಸಮುದಾಯದ ಗುಡಿಸಲು ಕಾಣದಂತೆ ಮರೆ ಮಾಡಿದ ಜಿಲ್ಲಾಡಳಿತ
ಕಾರ್ಯಕ್ರಮದಲ್ಲಿ ಮೂವತ್ತೆಂಟಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಪಿರಪ್ಪ ಶಿರ್ಶಿ ನಿರೂಪಿಸಿದರು. ಮಂಜುಳಾ ನಾಗೋಜಿ ಸ್ವಾಗತಿಸಿದರು. ಹೊನ್ನಮ್ಮ ವಂದಿಸಿದರು





