ಹಾವೇರಿ | ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆ ವಿರುದ್ಧ ಹೋರಾಟಕ್ಕೆ ಎಸ್ಎಫ್ಐ ಕರೆ

Date:

ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್ಎಫ್ಐ) ಹಾವೇರಿ ತಾಲೂಕು ಸಮಿತಿಯಿಂದ ಸಭೆ ನಡೆಸಿದ್ದು, ಸರ್ಕಾರದ ವಿರುದ್ಧ ಹೋರಾಟ ಕೈಗೊಳ್ಳುವುದಾಗಿ ಕರೆ ನೀಡಿದೆ.

ಎಸ್ಎಫ್ಐ ಜಿಲ್ಲಾ ಸಹಕಾರ್ಯದರ್ಶಿ ಕೃಷ್ಣ ನಾಯ್ಕ ಮಾತನಾಡಿ, “ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಜಿಲ್ಲೆಯಲ್ಲಿ ಹಾಸ್ಟೆಲ್‌ಗಳು, ಬಸ್ಸಿನ ಸಮಸ್ಯೆಗಳು ಪರಿಹಾರವಾಗಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲಕ್ಕೆ ತಕ್ಕಂತೆ ಬಸ್‌ಗಳಿಲ್ಲ, ಸಮಯಕ್ಕೆ ಬಸ್ ಬರುವುದಿಲ್ಲವೆಂದು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ವಿದ್ಯಾರ್ಥಿನಿಯರ ಉಚಿತ ಬಸ್ ಪಾಸ್ ಜತೆಗೆ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

“ಹಾಸ್ಟೆಲ್‌ಗೆ ಅರ್ಜಿ ಹಾಕಿದ ವಿದ್ಯಾರ್ಥಿಗಳಿಗೆ ಇನ್ನೂ ಹಾಸ್ಟೆಲ್ ಪ್ರಾರಂಭವಾಗಿಲ್ಲದಿರುವುದು ದುರಂತವಾಗಿದೆ. ಈ ಹಿಂದೆ ಸರ್ಕಾರದ ವಿರುದ್ಧ ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು ಹಾಗೂ ನೂತನ ಹಾಸ್ಟೆಲ್ ಮಂಜೂರು ಮಾಡಬೇಕೆಂದು ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ರಾಜ್ಯಾದ್ಯಂತ ನೆಡೆದ ವಿದ್ಯಾರ್ಥಿಗಳ ಪ್ರತಿಭಟನೆ ಪರಿಣಾಮವಾಗಿ ಇಡೀ ರಾಜ್ಯದಲ್ಲಿ ಹೆಚ್ಚುವರಿಯಾಗಿ ಹಾಸ್ಟೆಲ್‌ಗಳು ಮಂಜೂರಾಗಿವೆ. ಆದರೂ ರಾಜ್ಯ ಸರ್ಕಾರ, ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲು ಮುಂದಾಗಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ವರ್ಷದಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಲವರಿಗೆ ಬಂದಿಲ್ಲ. ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ವಿಪರೀತವಾಗಿದ್ದು, ಇದನ್ನು ತಡೆಯುವಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ವಿಫಲವಾಗಿದೆ. ಡೊನೇಷನ್ ಹಾವಳಿ ವಿರುದ್ಧ ಹೋರಾಟ ಮಾಡಲು ಹಾಗೂ ಡೊನೇಷನ್ ಹಾವಳಿ ನಿಯಂತ್ರಣ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಒತ್ತಾಯಿಸಬೇಕು” ಎಂದು ತೀರ್ಮಾನಿಸಲಾಯಿತು.

“ಪ್ರಸಕ್ತ ವರ್ಷದಿಂದಲೇ ಕಾನೂನು ಮಹಾವಿದ್ಯಾಲಯ 3 ಮತ್ತು 5 ವರ್ಷದ ಕೋರ್ಸ್ ಪ್ರಾರಂಭಿಸಬೇಕು. ಜಿಲ್ಲಾ ಕೇಂದ್ರದ ನಗರದಲ್ಲೇ ಮುನ್ಸಿಪಲ್ ಮೈದಾನದಲ್ಲಿರುವ ಕಾಲೇಜು ಕಟ್ಟಡದಲ್ಲಿ ತರಗತಿಗಳನ್ನು ಪ್ರಾರಂಭ ಮಾಡಬೇಕು. ನೂತನ ಹಾವೇರಿ ವಿಶ್ವವಿದ್ಯಾಲಯ ಅನುದಾನ ಬಿಡುಗಡೆ ಮಾಡಿ ಅಭಿವೃದ್ಧಿ ಮಾಡಲು ಮುಂದಾಗಬೇಕು. ನಗರದ ಸರ್ಕಾರಿ ಮಹಿಳಾ ಕಾಲೇಜಿಗೆ ಬಸ್ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ನಗರ ಸಾರಿಗೆ ವ್ಯವಸ್ಥೆ ಪ್ರಾರಂಭಿಸಬೇಕು” ಎನ್ನುವಂತಹ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ರೂಪಿಸಲು ಎಸ್ಎಫ್ಐ ಕಾರ್ಯಕರ್ತರು ಚರ್ಚೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಬೈಂದೂರು ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗ ಕೆಎಸ್ಸಾರ್ಟಿಸಿ ಬಸ್ಸಿಗಾಗಿ ಪ್ರತಿಭಟನೆ

“ಹಾಸ್ಟೆಲ್ ವಿದ್ಯಾರ್ಥಿಗಳ ಮೂಲಭೂತ ಸೌಕರ್ಯಗಳ ಕೊರತೆ, ಶೈಕ್ಷಣಿಕ ಸಮಸ್ಯೆಗಳ ಹಾಗೂ ಶೈಕ್ಷಣಿಕ ವರ್ಷದ ಶಾಲಾ-ಕಾಲೇಜು ಪ್ರವೇಶದ ಜತೆಗೆ ಏಕಕಾಲಕ್ಕೆ ವಸತಿ ನಿಲಯಗಳನ್ನು ಪ್ರಾರಂಭಿಸುವುದು ಸೇರಿದಂತೆ ವಿದ್ಯಾರ್ಥಿ ಸಮುದಾಯದ ವಿವಿಧ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್ಎಫ್ಐ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜು-ಹಾಸ್ಟೆಲ್‌ ಮುಖಂಡರು ಸುದೀರ್ಘ ಚರ್ಚೆ ನಡೆಸಿ ಹೋರಾಟಕ್ಕೆ ಕರೆ ನೀಡಲಾಗಿದೆ” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್ ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಮುಖಂಡ ಅರುಣ ಕುಮಾರ ಎನ್, ವೈಶಾಲಿ ಎನ್, ಲಕ್ಷ್ಮೀ, ಅಕ್ಷತಾ ಹೆಚ್, ಸೌಮ್ಯಾ ಪೂಜಾರ್, ಚೈತ್ರ ಕೊರವರ್, ಸ್ಪೂರ್ತಿ ಮಾಳಗಿ, ಅನಿತಾ ಎಂ, ಸೀಮಾ ಬೂದಿಹಾಳ, ಹಜ್ರತ್ ವಿ, ವಿಕಾಸ್ ಗೌಡ, ವಿಮಲ್ ನಾಥ್, ಸಂಪದ ಜಿ, ನಝಮೀನ್ ಎನ್ ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...