ಹಾವೇರಿ | ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್ ವಿತರಿಸಲು ಎಸ್ಎಫ್ಐ ಆಗ್ರಹ

Date:

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ನಿಲಯದ ವಿದ್ಯಾರ್ಥಿಗಳಿಗೆ ನಾಲ್ಕೈದು ತಿಂಗಳಿಂದ ಶುಚಿ ಸಂಭ್ರಮ ಕಿಟ್‌ ನೀಡದೆ, ವಿದ್ಯಾರ್ಥಿಗಳನ್ನು ಸೌಲಭ್ಯ ವಂಚಿತರನ್ನಾಗಿ ಮಾಡಿರುವುದು ಖಂಡನೀಯ ಎಂದು ಎಸ್‌ಎಫ್‌ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಆಗ್ರಹಿಸಿದರು.

ಹಾವೇರಿ ನಗರದ ಪರಿವೀಕ್ಷಣಾ ಮಂದಿರದಲ್ಲಿ ಎಸ್ಎಫ್ಐ ಜಿಲ್ಲಾ ಸಮಿತಿಯಿಂದ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, “ವಸತಿ ನಿಲಯದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಶುಚಿ ಸಂಭ್ರಮ ಕಿಟ್ ನೀಡಲಾಗುತ್ತಿತ್ತು, 2024-25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ನಾಲ್ಕೈದು ತಿಂಗಳಿಂದ ಯಾವುದೇ ರೀತಿಯ ಕಿಟ್ ನೀಡದೆ ವಿದ್ಯಾರ್ಥಿಗಳಿಗೆ ಸೌಲಭ್ಯಗಳಿಂದ ವಂಚಿಸಿದ್ದಾರೆ” ಎಂದು ಆರೋಪಿಸಿದರು.

“ಶೀಘ್ರವಾಗಿ ಶುಚಿ ಸಂಭ್ರಮ ಕಿಟ್ ವಿತರಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಶನ್ ನೇತೃತ್ವದಲ್ಲಿ ಅನೇಕ ಬಾರಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಅಧಿಕಾರಿಗಳು ತಿಂಗಳಗಳು ಕಳೆದರೂ ಯಾವುದೇ ರೀತಿಯಲ್ಲಿ ಸ್ಪಂದನೆ ನೀಡಿದೆ ವಳಂಬ ದೋರಣೆಯನ್ನು ಅನುಸಾರಿಸುತ್ತಿದ್ದಾರೆ. ಪ್ರತಿ ತಿಂಗಳು ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ಬ್ರಷ್, ಪೇಸ್ಟ್, ಮೈಸೂರು ಸ್ಯಾಂಡಲ್, 2 ಬಟ್ಟೆ ಸೋಪು, ಕೊಬ್ಬರಿ ಎಣ್ಣೆ ನೀಡುತ್ತಿದ್ದಾರೆ. ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರಿಗೂ ಈ ಎಲ್ಲ ಕಿಟ್‌ಗಳನ್ನು ನೀಡುತ್ತಿದ್ದರು. ಆದರೆ 2024-25 ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ನಾಲ್ಕೈದು ತಿಂಗಳು ಕಳೆದರೂ ಈವರೆಗೂ ವಿದ್ಯಾರ್ಥಿ ಕಿಟ್ ವಿತರಣೆ ಮಾಡಿಲ್ಲ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್ಥಿಕವಾಗಿ ಹಿಂದುಳಿದ ಬಡಕುಟುಂಬದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ, ಉತ್ತಮ ಅಭ್ಯಾಸಕ್ಕಾಗಿ ವಸತಿ ನಿಲದ ಆಸರೆಯೊಡ್ಡಿ ಬಂದಿರುತ್ತಾರೆ. ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. ಬೇರೆ ಬೇರೆ ಇಲಾಖೆಗಳ ರೀತಿಯಲ್ಲಿ ವಿಳಂಬ ಮಾಡದೆ ಮುಂಚಿತವಾಗಿ ವಿತರಣೆ ಮಾಡಬೇಕು. ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ನೀಡಬೇಕು ಹಾಗೂ ಸೌಲಭ್ಯಗಳನ್ನು ಹೆಚ್ಚಿಸಬೇಕು” ಎಂದು ಬಸವರಾಜ್‌ ಎಸ್‌ ಒತ್ತಾಯಿಸಿದರು.

ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ದುರುಗಪ್ಪ ಯಮ್ಮಿಯವರ ಮಾತನಾಡಿ, “ಬಡ ವಿದ್ಯಾರ್ಥಿಗಳ ಸಣ್ಣಪುಟ್ಟ ಅನುದಾನದ ಶುಚಿ ಕಿಟ್ ನೀಡಲು ಸರ್ಕಾರ ಬಜೆಟ್ ಕೊರತೆಯೆಂದು ಹೇಳುತ್ತಿರುವಾಗ, ಸಚಿವರು ತಮ್ಮ ಕಚೇರಿ ಮತ್ತು ಮನೆ ನವೀಕರಣ ಮಾಡಿಕೊಳ್ಳಲು ಒಬ್ಬೊಬ್ಬರು 50 ಲಕ್ಷ ರೂಪಾಯಿ ದುಂದುವೆಚ್ಚ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ. ಆದರೆ ಪ್ರತಿ ಗಂಡು ಮಕ್ಕಳ ಕಿಟ್‌ಗೆ ₹130 ಹಾಗೂ ಹೆಣ್ಣು ಮಕ್ಕಳ ಕಿಟ್‌ಗೆ ₹140 ಮೌಲ್ಯದ ಪರಿಕರ ಒಳಗೊಂಡ ಕಿಟ್ಟನ್ನು ಪ್ರತಿ ತಿಂಗಳು ನೀಡಬೇಕು. ಕಳೆದ ವರ್ಷ ಎರಡ್ಮೂರು ತಿಂಗಳು ಹಾಗೂ ಈ ವರ್ಷದ ನಾಲ್ಕೈದು ತಿಂಗಳು ವಿತರಣೆ ಮಾಡಿಲ್ಲ. ಆ ತಿಂಗಳು ನೀಡಬೇಕಾದ ಕಿಟ್ ಹಣ ಎಲ್ಲಿ? ಯಾರ ಜೇಬು ಸೇರಿತು? ಈ ಬಾರಿ ಭ್ರಷ್ಟಾಚಾರ ವಾಸನೆ ಕಂಡುಬರುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ಸ್ಪಷ್ಟತೆ ನೀಡಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ವಾಭಿಮಾನಿ ಸಮಾವೇಶದ ಮೂಲಕ ಸಿಎಂಗೆ ಬೆಂಬಲ : ಕೆ. ಶಾಂತಪ್ಪ

ಈ ಸಂದರ್ಭದಲ್ಲಿ ಎಸ್ಎಫ್ಐ ಉಪಾಧ್ಯಕ್ಷ ಸುಲೇಮಾನ್ ಮತ್ತಿಹಳ್ಳಿ, ಶೃತಿ ಆರ್ ಎಂ, ಮುತ್ತುರಾಜ್ ದೊಡ್ಡಮನಿ, ಸಹ ಕಾರ್ಯದರ್ಶಿ ವಿಜಯ ಶಿರಹಟ್ಟಿ, ಮಹೇಶ್ ಮರೋಳ, ಕೃಷ್ಣಾ ನಾಯಕ್, ಮುಖಂಡರಾದ ಅಣ್ಣಪ್ಪ ಕೊರವರ್, ನಿಖಿತಾ ಕಂಬಳಿ, ಫಾತಿಮಾ ಶೇಖ್, ದಾನೇಶ್ವರಿ, ಲಲಿತಾ ಬಿ ಸಿ, ರಕ್ಷಿತಾ ಡವಗಿ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...