ಹಾವೇರಿ | ಹಾಸ್ಟೆಲ್ ವಿದ್ಯಾರ್ಥಿನಿಯರನ್ನು ಕೆಲಸಕ್ಕೆ ಹಚ್ಚಿದ ವಾರ್ಡನ್ : ಅಮಾನತಿಗೆ ಎಸ್ಎಫ್ಐ ಆಗ್ರಹ

Date:

ಹಾವೇರಿ ನಗರದ ವಾಲ್ಮೀಕಿ ವೃತ್ತದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿನಿಯರನ್ನು ಹಾಸ್ಟೆಲ್‌ನಲ್ಲಿ ಹಗಲು-ರಾತ್ರಿ ಅಪಾಯಕಾರಿ ಕೆಲಸಗಳಿಗೆ ಬಳಕೆ ಮಾಡುತ್ತಿರುವ ಘಟನೆಯನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸಿದೆ.

ವಿದ್ಯಾರ್ಥಿಗಳು ಉತ್ತಮ ಅಭ್ಯಾಸ ಮಾಡಲೇಂದು ತಮ್ಮ ಮನೆಯಿಂದ ವಸತಿ ನಿಲಯಕ್ಕೆ ಬಂದಿರುತ್ತಾರೆ. ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಸತಿಯುತ ಶಿಕ್ಷಣ ನೀಡಬೇಕು ಆದರ ಆದ್ಯ ಕರ್ತವ್ಯವಾಗಿರುತ್ತದೆ. ಸರ್ಕಾರವು ವಿದ್ಯಾರ್ಥಿಗಳನ್ನು ನೋಡಿಕೊಳ್ಳಲು ಮೂಲಭೂತ ಸೌಕರ್ಯಗಳನ್ನು ನೀಡಿ ಜೊತೆಗೆ ಅಡುಗೆ ಸಿಬ್ಬಂದಿ, ರಾತ್ರಿ ಕಾವಲುಗಾರರು, ಹಾಸ್ಟೆಲ್ ಉಸ್ತುವಾರಿ ನೋಡಿಕೊಳ್ಳಲು ಲಕ್ಷಾಂತರ ಹಣ ಖರ್ಚು ಮಾಡಿರುತ್ತದೆ. ವಸತಿ ನಿಲಯವನ್ನು ನಿಭಾಯಿಸಲು ಸರ್ಕಾರ ವೇತನ ಕೊಟ್ಟು ಮೇಲ್ವಿಚಾರಕರನ್ನು ನೇಮಿಸುತ್ತದೆ. ಆದರೆ ಇಷ್ಟೆಲ್ಲಾ ಸೌಲಭ್ಯಗಳನ್ನು ನೀಡಿದರೂ ಕೂಡ, ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಎಸ್‌ಎಫ್‌ಐ ಆರೋಪಿಸಿದೆ.

ಕೆಲಸ

ಉತ್ತಮ ವಿದ್ಯಾಭ್ಯಾಸ ಮಾಡಲು ವಿದ್ಯಾರ್ಥಿನಿಯರನ್ನು ಹಾಸ್ಟೆಲ್ ಸ್ವಚ್ಚತೆ ಕೆಲಸಗಳಿಗೆ ಹಚ್ಚಿರುವುದು ಎಷ್ಟರಮಟ್ಟಿಗೆ ಸರಿ? ಈ ರೀತಿ ಯಾಕೆ ವಿದ್ಯಾರ್ಥಿನಿಯರನ್ನು ದುರ್ಬಳಕೆಯ ಮಾಡಿಕೊಂಡಿದಿರಿ ಅಂತ ವಿದ್ಯಾರ್ಥಿ ಸಂಘಟನೆ ಮುಖಂಡರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರಮದಾನ ಎಂದು ಉಡಾಫೆಯ ಉತ್ತರ ನೀಡುತ್ತಿರುವುದು ಸರಿಯಲ್ಲ. ಶ್ರಮ ದಾನ ಮಾಡುವುದಕ್ಕೆ ಸಮಯದ ಹೊತ್ತುಗೊತ್ತು ಬೇಡವೇ? ಈ ರೀತಿಯಾಗಿ ವಿದ್ಯಾರ್ಥಿನಿಯರನ್ನು ದುರ್ಬಳಕೆ ಮಾಡಿಕೊಳ್ಳವುದು, ಅಪಾಯಕಾರಿ ಕೆಲಸಗಳನ್ನು ಮಾಡಿಸುವುದು ಕಾನೂನು ಬಾಹಿರ. ರಾತ್ರಿಹೊತ್ತು ಕೆಲಸ ಮಾಡಿಸುವ ಸಂದರ್ಭದಲ್ಲಿ ಅನಾಹುತವಾದರೆ ಯಾರು ಹೊಣೆ? ಎಂದು ಕೇಳಿದ್ದಾರೆ.

ಹಾಸ್ಟೆಲ್ ಪ್ರವೇಶ ದಾಖಲಾತಿ ಮಾಡುವ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ವಸತಿ ನಿಲಯದ ವಿರುದ್ಧ ಧ್ವನಿ ಎತ್ತಬಾರದು ಸೇರಿದಂತೆ ಅನೇಕ ನಿಯಮಗಳನ್ನು ಹಾಕಿ ಕಾನೂನು ಬಾಹಿರ ಬಾಂಡ್ ಬರೆಸಿಕೊಳ್ಳುತ್ತಾರೆ. ಯಾಕೆ ಅಂತಾ ಪ್ರಶ್ನೆ ಮಾಡಿದ್ದಾರೆ ವಿದ್ಯಾರ್ಥಿನಿಯರಿಗೆ ತೊಂದರೆ ಆದರೆ ಯಾರು ಜವಾಬ್ದಾರಿ ಎಂದು ಉತ್ತರ ನೀಡುತ್ತಾರೆ. ಹಾಸ್ಟೆಲ್‌ನಲ್ಲಿ ಜೀತದಾಳುಗಳನಾಗಿ ದುಡಿಸಿಕೊಳ್ಳಲು ಹೆತ್ತವರು ನಿಮಗೆ ಬಾಂಡ್ ಬರೆದುಕೊಡಬೇಕಾ? ಉತ್ತಮ ವಿದ್ಯಾಭ್ಯಾಸ ಮಾಡಬೇಕಾದ ವಿದ್ಯಾರ್ಥಿನಿಯರನ್ನು ದುರ್ಬಳಕೆ ಮಾಡಿಕೊಂಡ ವಾರ್ಡನ್ ಮೇಲೆ ಶಿಸ್ತು ಕ್ರಮ ಜರುಗಿಸಿ ಅಮಾನತು ಮಾಡಬೇಕು. ಇಲ್ಲವಾದರೆ ಜಿಲ್ಲಾಧಿಕಾರಿ ಕಛೇರಿ ಎದುರು ಬೃಹತ್ ಹೋರಾಟ ಮಾಡಲಾಗುವುದು ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಜಿಲ್ಲಾ ಕಾರ್ಯದರ್ಶಿ ದುರುಗಪ್ಪ ಯಮ್ಮಿಯವರ, ಜಿಲ್ಲಾ ಉಪಾಧ್ಯಕ್ಷ ಮುತ್ತುರಾಜ್ ದೊಡ್ಡಮನಿ, ದೇವರಾಜ ಅಕ್ಕಸಾಲಿ, ಜಿಲ್ಲಾ ಸಹ ಕಾರ್ಯದರ್ಶಿ ಅಣ್ಣಪ್ಪ ಕೊರವರ್, ವಿಜಯ ಶಿರಹಟ್ಟಿ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...