ಹಾವೇರಿ | ರಾಜ್ಯ ಸರಕಾರ ಹಾವೇರಿ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಗೊಳಿಸಲು ಎಸ್ಎಫ್ಐ, ಡಿವೈಎಫ್ಐ ಆಗ್ರಹ

Date:

ಕಳೆದ ಎರಡು ವರ್ಷಗಳ ಹಿಂದೆ ಆರಂಭಗೊಂಡ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ ಒಂಬತ್ತು ವಿವಿಗಳನ್ನು ಮುಚ್ಚುವ ಬಗ್ಗೆ ಸಂಪುಟ ಉಪ ಸಮಿತಿ ತೀರ್ಮಾನಿಸಿರುವುದು ಆತಂಕಕಾರಿ ನಡೆಯಾಗಿದೆ. ರಾಜ್ಯ ಸರಕಾರ ಹಾವೇರಿ ವಿವಿ ಮುಚ್ಚುವ ತೀರ್ಮಾನ ರದ್ದೂಗೊಳಿಸಲು ಎಸ್ಎಫ್ಐ, ಡಿವೈಎಫ್ಐ ಸಂಘಟನೆಗಳು ಆಗ್ರಹಿಸಿವೆ.

ಹಾವೇರಿ ಪಟ್ಟಣದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಡಿವೈಎಫ್ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಡವರಾಜ್ ಪೂಜಾರ ಮಾತನಾಡಿದರು.

“ಎರಡು ವರ್ಷಗಳು ಯಾವುದೇ ಅನುದಾನವಿಲ್ಲದೆ ಸಂಕಷ್ಟಮಯ ಪರಿಸ್ಥಿತಿಯಲ್ಲಿಯೂ ಕೂಡ ಹಾವೇರಿ ವಿಶ್ವ ವಿದ್ಯಾಲಯವು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಲ್ಲದೆ ಹಲವು ಪ್ರಮುಖ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಮುನ್ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ವಿಶ್ವವಿದ್ಯಾಲಯಕ್ಕೆ ಪೂರ್ಣಕಾಲಿಕ ಉಪನ್ಯಾಸಕರು, ಬೋದಕೇತರ ಸಿಬ್ಬಂದಿ ನೇಮಕ, ಅನುದಾನ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಸರಕಾರ ಒದಗಿಸಬೇಕಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶ್ವ ವಿದ್ಯಾಲಯಗಳನ್ನು ಬಲಿಷ್ಠಪಡಿಸುವ ಬದಲು ವಿ ವಿಗಳನ್ನು ಮುಚ್ಚುವ ತೀರ್ಮಾನವು ಹಾವೇರಿ ಜಿಲ್ಲೆಯ ಬಡ ಹಾಗೂ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ವಂಚಿಸುವುದಾಗಿದೆ. ಹಾಗಾಗಿ ಸಂಪುಟ ಸಮಿತಿ ತೆಗೆದುಕೊಂಡಿರುವ ನಿರ್ಧಾರವನ್ನು ಯಾವುದೇ ಕಾರಣ ನೀಡದೇ ಕೂಡಲೇ ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

“ಜಿಲ್ಲೆಯ ಜನರ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಾವೇರಿ ವಿವಿ ಮುಚ್ಚದಂತೆ ಜಿಲ್ಲೆಯ ಎಲ್ಲ ಶಾಸಕರು ಮೌನವಹಿಸದೇ ಕೂಡಲೇ ಈ ವಿಷಯದಲ್ಲಿ ಮಧ್ಯೆಪ್ರವೇಶಿಸಿ ಸಂಪುಟ ಉಪಸಮಿತಿಯ ತೀರ್ಮಾನ ಹಿಂಪಡೆಯಲು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಒತ್ತಡ ಹೇರಬೇಕೆಂದು ಆಗ್ರಹಿಸಿವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಖ್ಯ ಚುನಾವಣಾ ಆಯುಕ್ತರ ಅಧಿಕಾರ ಸ್ವೀಕಾರ: ಯಾರು ಈ ಜ್ಞಾನೇಶ್ ಕುಮಾರ್?
“ಹಾವೇರಿ ಜಿಲ್ಲೆಗೆ ವಿಶ್ವವಿದ್ಯಾಲಯ ಅತ್ಯವಶ್ಯವಾಗಿದ್ದು ಈ ಬಗ್ಗೆ ಸಂಪುಟ ಸಮಿತಿಯ ತೀರ್ಮಾನವನ್ನು ಹಿಂಪಡೆಯಬೇಕು ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ವಿಶ್ವವಿದ್ಯಾಲಯ ಬೆಳವಣಿಗೆ ಹೊಂದಲು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ವಿಶ್ವ ವಿದ್ಯಾಲಯದ ಉಳಿವಿಗಾಗಿ ತೀವ್ರತೆರನಾದ ಪ್ರತಿಭಟನೆ ನಡೆಸಲು ಮುಂದಾಗುವುದಾಗಿ ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಎಚ್ಚರಿಕೆ ನೀಡಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...