ಹಾವೇರಿ | ಸೋಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಜಾಗೃತಿ ಅಭಿಯಾನ: ಜೇಬ್ರಿನ್ ಖಾನ್

Date:

“ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ವತಿಯಿಂದ ರಾಜ್ಯಾದ್ಯಂತ ಜಾಗೃತಿ ಅಭಿಯಾನವನ್ನು ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ಹಮ್ಮಿಕೊಳ್ಳಲಾಗಿದೆ” ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾ ಯುವ ಕಾರ್ಯದರ್ಶಿ ಜೇಬ್ರಿನ್ ಖಾನ್ ತಿಳಿಸಿದರು.

ಹಾವೇರಿ ಜಿಲ್ಲೆಯ ರಾಣಿಬೆನ್ನೂರ ಪಟ್ಟಣದಲ್ಲಿ ಪತ್ರಿಕಾ ಹೇಳಿಯಲ್ಲಿ ಅವರು ಮಾತನಾಡಿ, “ಡಿಜಿಟಲ್ ಸ್ವಾತಂತ್ರ್ಯ– ಸೈಬರ್ ವಂಚನೆ, ಜೂಜಾಟ ಮತ್ತು ಗೇಮಿಂಗ್ ವ್ಯಸನದಿಂದ ಯುವಕರನ್ನು ರಕ್ಷಿಸುವುದು”ಹೇಗೆ ಎಂಬಿತ್ಯಾದಿ ವಿಷಯಗಳ ಕುರಿತು ಯುವಕರಿಗೆ ಉಪನ್ಯಾಸ ನೀಡಲಾಗುವುದು ಎಂದರು.

“ನಮ್ಮ ಯುವಕರು ಮತ್ತು ಕುಟುಂಬಗಳು ಸೈಬರ್ ವಂಚನೆ, ಸೈಬರ್ ದಾಳಿಗಳು, ಆನ್‌ಲೈನ್ ಜೂಜಾಟ, ಬೆಟ್ಟಿಂಗ್ ಮತ್ತು ಗೇಮಿಂಗ್ ವ್ಯಸನದಿಂದ ಹೆಚ್ಚುತ್ತಿರುವ ಅಪಾಯಗಳನ್ನು ಎದುರಿಸುತ್ತಿದ್ದಾರೆ. ಇವು ಜೀವನವನ್ನು ಹಾಳುಮಾಡುವುದು, ಉಳಿತಾಯವನ್ನು ನಾಶಮಾಡುವುದು, ಜನರನ್ನು ಸಾಲಕ್ಕೆ ತಳ್ಳುವುದು ಮತ್ತು ಆತ್ಮಹತ್ಯೆಗಳಿಗೆ ಕಾರಣವಾಗುತ್ತಿರುವುದರಿಂದ ಈ ಅಭಿಯಾನವನ್ನು ಕೈಗೆತ್ತಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭಿಯಾನದ ಉದ್ದೇಶಗಳು: ಜಾಗೃತಿ ಯುವಕರು, ಪೋಷಕರು ಮತ್ತು ಸಾರ್ವಜನಿಕರಿಗೆ ಡಿಜಿಟಲ್ ಅಪಾಯಗಳ ಬಗ್ಗೆ ತಿಳಿಸುವುದು. ಬೆಂಬಲ: ಬಲಿಪಶುಗಳು ಮತ್ತು ಕುಟುಂಬಗಳ ಕಥೆಗಳನ್ನು ಹಂಚಿಕೊಳ್ಳಲು ಹಾಗೂ ಸಹಾಯ ಪಡೆಯಲು ಪ್ರೋತ್ಸಾಹಿಸುವುದು. ವಕಾಲತ್ತು: ಸರ್ಕಾರದ ಬಳಿ ಕಠಿಣ ಕಾನೂನುಗಳು ಹಾಗೂ ವ್ಯಸನಮುಕ್ತ ಸೇವೆಗಳಿಗಾಗಿ ಒತ್ತಾಯಿಸುವುದು.

ಪ್ರಮುಖ ಸಂದೇಶಗಳು: ಸೈಬರ್ ವಂಚನೆ ನಮ್ಮ ಸಂಪತ್ತನ್ನು ಕದಿಯುತ್ತಿದೆ. ಜೂಜು, ತ್ವರಿತ ಸಾಲ ಮತ್ತು ಬೆಟ್ಟಿಂಗ್ ಕುಟುಂಬಗಳನ್ನು ನಾಶಪಡಿಸುತ್ತಿವೆ. ಆನ್ಲೈನ್ ಗೇಮಿಂಗ್ ವ್ಯಸನ ಯುವಕರ ಅಧ್ಯಯನ, ಆರೋಗ್ಯ ಮತ್ತು ಸಂಬಂಧಗಳನ್ನು ಹಾಳುಮಾಡುತ್ತಿದೆ.

“ವಿವಿಧ ಹಂತಗಳ ಚಟುವಟಿಕೆಗಳು ತಾಲ್ಲೂಕು, ಸ್ಥಳೀಯ ವಾಗಿ ಬೀದಿ ನಾಟಕಗಳು, ಜಾಗೃತಿ ಭಾಷಣ, ಪೋಸ್ಟರ್‌ಗಳು, ಸಾಮಾಜಿಕ ಮಾಧ್ಯಮ ಸವಾಲು” ವಿಷಯಗಳ ಕುರಿತು ಉಪನ್ಯಾಸ ನಡೆಸಲಾಗುವುದು. ಜಿಲ್ಲಾ ಮಟ್ಟ ದಲ್ಲಿ ಬೀದಿ ನಾಟಕಗಳು, ವಿಚಾರ ಸಂಕಿರಣಗಳು, ರ್ಯಾಲಿಗಳು, ಸಾಕ್ಷ್ಯಗಳು, ಜಿಲ್ಲಾಧಿಕಾರಿ/ತಹಶೀಲ್ದಾರರಿಗೆ ಮನವಿ ಪತ್ರ ನೀಡಲಾಗುವುದು. ರಾಜ್ಯ ಮಟ್ಟದಲ್ಲಿ ಬೀದಿ ನಾಟಕಗಳು, ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಇತ್ಯಾದಿಯಾಗಿ ಯುವಕರಲ್ಲಿ ಜಾಗೃತಿ ಮೂಡಿಸಲಾಗುವುದು.

“ಯುವಕರು ನಮ್ಮ ದೇಶದ ಭವಿಷ್ಯ. ಡಿಜಿಟಲ್ ಅಪಾಯಗಳಿಂದ ಅವರನ್ನು ರಕ್ಷಿಸುವುದು ಸಮಾಜದ ಜವಾಬ್ದಾರಿ. ಈ ಅಭಿಯಾನದ ಮೂಲಕ ನಾವು ಸರ್ಕಾರ, ಸಮಾಜ ಮತ್ತು ಕುಟುಂಬಗಳನ್ನು ಒಗ್ಗೂಡಿಸಿ ಭವಿಷ್ಯವನ್ನು ಸುರಕ್ಷಿತಗೊಳಿಸಲು ಪ್ರಯತ್ನಿಸುತ್ತೇವೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ₹5 ಲಕ್ಷ ಮೌಲ್ಯದ ಗಾಂಜಾ ಜಪ್ತಿ : ಇಬ್ಬರ ಬಂಧನ

“ಈ ಅಭಿಯಾನಕ್ಕೆ ಎಲ್ಲಾ ಸಮಾಜ ಸುಧಾರಕ ಮತ್ತು ಯುವ ಸಂಘಟನೆಗಳು ಸಹಕಾರ ನೀಡಲು ಮನವಿ. ಯುವ ಸಮುದಾಯದ ಭವಿಷ್ಯ ರೂಪಿಸುವಲ್ಲಿ ನಾವೆಲ್ಲರೂ ಒಗ್ಗೂಡಬೇಕು. ಈ ಮೂಲಕ ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರೆ ನೀಡುತ್ತದೆ” ಎಂದು ಜೇಬ್ರಿನ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...