ಹಾವೇರಿ | ವಿದ್ಯಾರ್ಥಿಗಳು ಓದಿನೊಂದಿಗೆ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕು: ಶಾಸಕ ಪ್ರಕಾಶ ಕೋಳಿವಾಡ

Date:

“ವಿದ್ಯಾರ್ಥಿಗಳು ಓದಿನೊಂದಿಗೆ ಕೌಶಲ್ಯ ತರಬೇತಿ ಪಡೆದುಕೊಳ್ಳಬೇಕು. ಶಾಲಾ ಹಂತದಿಂದಲೇ ಮಕ್ಕಳಿಗೆ ಕೌಶಲ್ಯ ಕಲಿಸಬೇಕು” ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಹಾವೇರಿ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲೆಯ ಯುವನಿಧಿ ಅಭ್ಯರ್ಥಿಗಳಿಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಆಯೋಜಿಸಲಾದ “ಅರಿವು” ಉದ್ಯೋಗವಕಾಶಗಳ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

“ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ. ಯುವ ಸಮೂಹ ತಂತ್ರಜ್ಞಾನ ಸರಿಯಾಗಿ ಬಳಕೆಮಾಡಿಕೊಂಡು ಹಾಗೂ ಯುವನಿಧಿ ಹಣವನ್ನು ಕೌಶಲ್ಯ ತರಬೇತಿಗೆ ಉಪಯೋಗಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶದಲ್ಲಿ ದುಡಿಯುವ ಕೈಗಳು ಹೆಚ್ಚಾದರೆ ಆದೇಶ ಆರ್ಥಿಕ ಅಭಿವೃದ್ಧಿ ಜೊತೆಗೆ ವಿಶ್ವಗುರು ಆಗಲು ಸಾಧ್ಯ. ಹಾಗಾಗಿ ಕೃಷಿ, ತೋಟಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು. ಅವುಗಳ ಬಗ್ಗೆ ತಿಳಿದುಕೊಂಡು ಸ್ವಂತ ಉದ್ಯಮಗಳನ್ನು ಆರಂಭಿಸಿ ಸದೃಢ ದೇಶ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು” ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ. “ಭಾರತ ದೇಶದಲ್ಲಿ ಲಕ್ಷಕ್ಕೂ ಅಧಿಕ ಕಾಲೇಜುಗಳಿವೆ. ಪ್ರತಿ ವರ್ಷ ಕೋಟಿಗೂ ಅಧಿಕ ಪದವೀಧರರು ಹೊರಬರುತ್ತಿದ್ದಾರೆ. ನೂರು ಜನರಲ್ಲಿ ಶೇ.22.6 ರಷ್ಟು ಜನರಿಗೆ ಮಾತ್ರ ಉದ್ಯೋಗ ನೀಡಬಹುದಾಗಿದೆ. ಹಾಗಾಗಿ ಯುವ ಸಮೂಹ ಜ್ಞಾನದ ಜೊತೆಗೆ ಕೌಶಲ್ಯ ರೂಢಿಸಿಕೊಳ್ಳಬೇಕು. ಕೈಗಾರಿಕೆಗಳಿಗೆ ಬೇಕಾದ ಕೌಶಲ್ಯ ಯುವ ಸಮೂಹ ಕಲಿಯಬೇಕು” ಎಂದು ಹೇಳಿದರು.

“ಕಠಿಣ ಪರಿಶ್ರಮ ಹಾಗೂ ಇಚ್ಛಾಶಕ್ತಿಯಿಂದ ಏನಾದರೂ ಸಾಧಿಸಬಹುದು. ಸಮಯಕ್ಕೆ ಬಹಳ ಮಹತ್ವ ಇದೆ. ಜೀವನದಲ್ಲಿ ಶಿಸ್ತು ಸಮಯ ಪಾಲನೆ ಮಾಡಿದರೆ ಯಶಸ್ಸು ಸಾಧ್ಯ. ನಿಮ್ಮಲ್ಲಿ ದುಡಿಯುವ ಮನಸ್ಸು, ಸಾಧಿಸುವ ಛಲ ಇದ್ದರೆ ಮಿಲೆನಿಯನ್ ಹಾಗೂ ಬಿಲೆನಿಯನ್ ಕೂಡ ಆಗಬಹುದು. ಧೈರ್ಯದಿಂದ ಮುನ್ನುಗ್ಗಬೇಕು. ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಕೃಷಿ, ತೋಟಗಾರಿಕೆ, ಹಣ್ಣು, ತರಕಾರಿ, ಹಾಲು ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಸಂಸ್ಕರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಹಾಗೂ ಇಂತಹ ಕೌಶಲ್ಯ ತರಬೇತಿಗಳನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು” ಎಂದು ಶುಭ ಕೋರಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ ಅವರು ಮಾತನಾಡಿದರು. ಜಿಲ್ಲಾ ಕೌಶಲ್ಯ ಅಭಿವೃದ್ದಿ ಇಲಾಖೆ ಅಧಿಕಾರಿ ಶ್ರೀಮತಿ ಸೋನಾಲಿ ಕ್ಷೀರಸಾಗರ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಲಕ್ಷ್ಮೇಶ್ವರ ರಸ್ತೆಯುದ್ಧಕ್ಕೂ ನೂರಾರು ತಗ್ಗು ಗುಂಡಿಗಳು: ರಸ್ತೆ ಅಭಿವೃದ್ಧಿಪಡಿಸಲು ಸಾರ್ವಜನಿಕರು ಒತ್ತಾಯ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ರುಚಿ ಬಿಂದಲ್, ಬ್ಯಾಡಗಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಂಭನಗೌಡ ಪಾಟೀಲ ಹಾಗೂ ಸವಣೂರ ತಾಲೂಕು ಅಧ್ಯಕ್ಷ ಸುಭಾಸ ಮಜ್ಜಗಿ ಇತರರು ಉಪಸ್ಥಿತರಿದ್ದರು. ನಾಗಪ್ಪ ಗೋಡಿ ಸ್ವಾಗತಿಸಿದರು. ಕುಮಾರ ಬಿದರಗಡ್ಡಿ ಕಾರ್ಯಕ್ರಮ ನಿರೂಪಿಸಿದರು. ಚೇತನಕುಮಾರ ಮೊಹತೆ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...