ಹಾವೇರಿ | ವ್ಯಕ್ತಿತ್ವ ನಿರ್ಮಾಣ ಹೊಂದಲು ಪರಸ್ಪರ ಸಂವಹನ ಕಲೆ ಬಹು ಮುಖ್ಯವಾಗಿದೆ: ಕುಮಾರ ಬೆಣ್ಣಿ

Date:

“ಸಮಾಜದಲ್ಲಿ ಪರಿಪೂರ್ಣತೆಯಿಂದ ಶಿಕ್ಷಣ ಪಡೆದು ವ್ಯಕ್ತಿತ್ವ ನಿರ್ಮಾಣ ಹೊಂದಲು ಪರಸ್ಪರ ಸಂವಹನ ಕಲೆ ಬಹು ಮುಖ್ಯವಾಗಿದೆ” ಎಂದು ಜೆಸಿಐ ನೂತನ ಅಧ್ಯಕ್ಷ ಕುಮಾರ ಬೆಣ್ಣಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.

ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಪಟ್ಟಣದ ಕೆ. ಎಲ್. ಇ ಶಿಕ್ಷಣ ಸಂಸ್ಥೆಯ ರಾಜ ರಾಜೇಶ್ವರಿ ವಾಣಿಜ್ಯ  ಮಹಿಳಾ ಮಹಾವಿದ್ಯಾಲಯದಲ್ಲಿ ಜೆಸಿಐ ಸಂಸ್ಥೆ ಆಯೋಜಿಸಿದ್ದ ವ್ಯಕ್ತಿತ್ವ ಹಾಗೂ ವಿಕಾಸತೆ ವಿಷಯ ಕುರಿತು ಮಾತನಾಡಿದರು.

“ಜೆಸಿಐ ಸಂಸ್ಥೆಯು, ತನ್ನದೇ ಆದ ಯೋಜನೆಯಲ್ಲಿ ವ್ಯಕ್ತಿತ್ವ ನಿರ್ಮಾಣ, ಪರಿಣಾಮ ಕಾರಿ ಭಾಷಣ ಕಲೆ, ಸೇರಿದಂತೆ ಮತ್ತಿತರ ಕ್ರಿಯಾ ಯೋಜನೆಗಳು ಅಳವಡಿಸಲಾಗಿದೆ.  ವಿದ್ಯಾರ್ಥಿಗಳು ನಾಲ್ಕು ಗೋಡೆಗಳ ಮಧ್ಯ ನಡೆಯುವ ಶಿಕ್ಷಣಕ್ಕಷ್ಟೇ ಸೀಮಿತವಾಗದೆ, ಸಮಾಜದ ವಿವಿಧ ಕ್ಷೇತ್ರದಲ್ಲಿ ತಮ್ಮದೇ ಆದ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಲು ಅವಕಾಶವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೋನ್ ಚೇರ್ಮನ್ ಪ್ರಭುಲಿಂಗಪ್ಪ  ಹಲಗೇರಿ ಅವರು ಮಾತನಾಡಿ, “ಶಿಕ್ಷಣ ಮತ್ತು ಸಂಸ್ಕೃತಿ  ವಿದ್ಯಾರ್ಥಿ ಜೀವನದಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಪರಿಪೂರ್ಣತೆ ವಿದ್ಯಾರ್ಥಿಗಳ ಜೀವನದ ಅವಿಭಾಜ್ಯ ಅಂಗವಾಗಬೇಕು ಅಂದಾಗ ಮಾತ್ರ ಸಮಾಜದಲ್ಲಿ ಸಮಾನತೆ ಸಾಧಿಸಿ, ದೇಶದ ಏಕತೆ ಮತ್ತು ಐಕ್ಯತೆ ಸಾಧಿಸಲು  ಸಾಧ್ಯವಾಗಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಒಕ್ಕಲಿಗರ ವಿಕಾಸ ವೇದಿಕೆಯಿಂದ ‘ಹತ್ತನೇ ಚಾಮರಾಜ ಒಡೆಯರ್ ಜಯಂತ್ಯುತ್ಸವ ‘

ಕಾಲೇಜು ಪ್ರಾಚಾರ್ಯ ನಾರಾಯಣ ನಾಯಕ ಎ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜೋನ್ ಟ್ರೈನರ್ ಪ್ರಮೋದ ಶಾಸ್ತ್ರಿ, ವಿದ್ಯಾರ್ಥಿ ಪ್ರತಿನಿಧಿ ರೇಖಾ ಶಿಡೇನೂರ,ಕಾರ್ಯದರ್ಶಿಇಮ್ರಾನ್ ನೀಲಗಾರ, ಉಪಾಧ್ಯಕ್ಷ ಅಶೋಕ ದುರ್ಗದಸೀಮಿ, ಕೋಶಾಧ್ಯಕ್ಷ   ವಿದ್ಯಾದರ ಹಲಗೇರಿ, ಕಾರ್ಯಕ್ರಮಾಧಿಕಾರಿ ಭೋಜರಾಜ ಗುಲಗಂಜಿ, ಮಾಜಿ ಅಧ್ಯಕ್ಷರಾದ ಶಿವಶಂಕರ ಕೆ, ಡಾ, ಶಿವಾನಂದ ಹಿತ್ತಲಮನಿ, ವೆಂಕಟೇಶ್ ಕಾಕಿ, ಶರತ ಕುಮಾರ್,  ವಿನಯ ಕುಮಾರ ಗುಲಗಂಜಿ, ವಿನಾಯಕ ಯಕನಹಳ್ಳಿ,  ಮಂಜುನಾಥ ಜಿ, ಜಯಣ್ಣ ಕರಡೇರ, ಪ್ರಕಾಶ್ ಗಚ್ಚಿನ ಮಠ, ಸೇರಿದಂತೆ ಮತ್ತಿತರೆ ಪದಾಧಿಕಾರಿಗಳು ಕಾಲೇಜಿನ ಉಪನ್ಯಾಸಕರು ಎನ್. ಎಸ್.ಎಸ್, ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...