ಹಾವೇರಿ | ಬಂಜಾರ ಸಮುದಾಯದ ಕಲೆ ಬೆಳಸಬೇಕು : ಸೈನಾ ಭಗತ್ ಮಹಾರಾಜ

Date:

“ತಮ್ಮ ಉಡುಪು ಮತ್ತು ನೃತ್ಯದ ಮೂಲಕ ಈಗಲೂ ಅನನ್ಯತೆಯನ್ನು ಉಳಿಸಿಕೊಂಡಿರುವ ಲಂಬಾಣಿ ಜನಾಂಗ ಸದಾ ಕಷ್ಟ ಜೀವಿಗಳು. ಇಂಥಹ ಸಣ್ಣ ಸಮುದಾಯದ ಕಲೆ ಸಂಸ್ಕೃತಿಯನ್ನು ಬಹು ಸಂಖ್ಯಾತ ಸಮಾಜದವರು. ಪ್ರೀತಿ ವಿಶ್ವಾಸದಿಂದ  ಬಂಜಾರ ಸಮುದಾಯದ ಕಲೆ ಬೆಳೆಸಬೇಕು” ಎಂದು ಬಂಜಾರ ಸಮುದಾಯದ ಸಾಲೂರಮಠದ ಸೈನಾ ಭಗತ್ ಮಹಾರಾಜರು ಹೇಳಿದರು.

ಹಾವೇರಿ ಪಟ್ಟಣದ ಗುರುಭವನದಲ್ಲಿ ಪೂರ್ವಿಕ ಬಂಜಾರ ಸಾಂಸ್ಕೃತಿಕ ಕಲಾ ಸಂಸ್ಥೆಯ ವಾರ್ಷಿಕೋತ್ಸವವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಆಶೀರ್ವಚನವನ್ನು ನೀಡಿದ ಹೊಸಮಠದ ಬಸವಶಾಂತಲಿಂಗ ಮಹಾಸ್ವಾಮಿಗಳು ಮಾತನಾಡಿ, “ಕಲೆ ಕಲಾವಿದನಿಗೆ ಸಮಾಜದಲ್ಲಿ ಬೆಲೆ ತರುತ್ತವೆ. ಬಂಜಾರುಗಳು ಉತ್ತಮ ಹಾಡುಗಾರರು ಮತ್ತು ನೃತ್ಯ ಪಟುಗಳು. ಅವರ ಕಲೆ ಒಟ್ಟು ಸಮಾಜದ ಶ್ರೀಮಂತಿಕೆಯನ್ನು ಹೆಚ್ಚಿಸಿದೆ. ಇಂತಹ ಸಮಾಜದ ಪ್ರತಿನಿಧಿಯಾಗಿ ಗೀತಾಬಾಯಿ ಲಮಾಣಿ ತಮ್ಮ ಪೂರ್ವಿಕಾ ಕಲಾ ಸಂಸ್ಥೆಯ ಮೂಲಕ ಘನತೆ ಹೆಚ್ಚಿಸಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾರಂಭವನ್ನು ಉದ್ದೇಶಿಸಿ ಆರ್.ಬಿ. ಪಾಟೀಲ, ಪ್ರಭಾಕರ ತಳವಾರ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಶ್ರೀಮತಿ ಪರಿಮಳಾ ಜೈನ್, ಜಿಲ್ಲಾ ಸಾಂಸ್ಕೃತಿಕ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರು ಬಸವರಾಜ ಸಾವಕ್ಕನವರ, ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು ಬಡವೆಪ್ಪ ಆನವಟ್ಟಿ, ದಲಿತ ನಾಯಕರು ಸಂಜಯಗಾಂಧಿ ಸಂಜೀವಣ್ಣನವರ, ಚೇತನರಾಜ ಎನ್ ಮುಂತಾದವರು ಮಾತನಾಡಿದರು.

ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಝಿ ಟಿ.ವ್ಹಿ ಸರಿಗಮ ರನ್ನರ್ ಅಪ್ ರಮೇಶ ಲಮಾಣಿ ಆಕರ್ಷಣಿಯಾಗಿದ್ದರು. ಗೌತಮ ಸಾವಕ್ಕನವನರವರ ಸ್ಯಾಕ್ಸೊಫೋನ್, ರೇಣುಕಾ ಗೋರಿಮಟ್ಟಿ ಅವರ ಸೋಬಾನಿ ಪದ, ಆರುಂಧತಿ ಅವರ ಜೋಗತಿ ನೃತ್ಯ, ಎಸ್. ಕುಶಾಲ ಚಿತ್ರಗಾರರ ಭಕ್ತಿಗೀತೆ, ಜ್ಯೋತಿ ಅರ್ಕಸಾಲಿ ಅವರ ಕೋಲಾಟ, ರಕ್ಷಿತಾ ಬಂಜಾರ, ಮೇಘಾ ಲಂಬಾಣಿ ಅವರುಗಳ ಲಂಬಾಣಿ ನೃತ್ಯ ಪ್ರದರ್ಶನವಾದವು.

ಈ ಸುದ್ದಿ ಓದಿದ್ದೀರಾ? ಗದಗ | ಅವಳಿ ನಗರಕ್ಕೆ ಸಮರ್ಪಕ ನೀರಿನ ಪೂರೈಕೆಗೆ ಆದ್ಯತೆ ಇರಲಿ : ಸಚಿವ ಎಚ್ ಕೆ ಪಾಟೀಲ

ಗಣ್ಯರಾದ ರಾಜಾಸಾಹೇಬ ಮಾನೇಗಾರ, ಪ್ರದೀಪಗೌಡ್ರ, ನಾಗರಾಜ ಲಮಾಣಿ, ಶಾಂತಪ್ಪ ಲಮಾಣಿ, ಶೇಖಪ್ಪ ದೇವಪ್ಪ ಲಮಾಣಿ, ಹಾಲೇಶ ಗೋಪಿನಾಯಕ್, ಸುನೀಲ್ ಲಮಾಣಿ, ಯೂಸುಫ್ ಸೈಕಲ್‌ಗಾರ, ಶಿವಯೋಗಿ ಗುರ್ಜನವರ ಮುಂತಾದವರು ಉಪಸ್ಥಿತರಿದ್ದರು. ಆರಂಭದಲ್ಲಿ ನಾಗರಾಜ ನಡುವಿನಮಠ ಸ್ವಾಗತಿಸಿದರು. ಪೂರ್ವಿಕಾ ಬಂಜಾರು ಕಲಾಸಂಸ್ಥೆಯ ಮುಖ್ಯಸ್ಥರಾದ ಗೀತಾಬಾಯಿ ಲಮಾಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶ್ರೀಮತಿ ಅನಿತ ಹರನಗಿರಿ ಮತ್ತು ಕುಬೇರ ನಾಯ್ಕ ನಿರೂಪಿಸಿದರು. ಕೊನೆಯಲ್ಲಿ ಶಿವಪ್ಪ ಲಮಾಣಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...