ಹಾವೇರಿ | ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ; ಸೌಜನ್ಯ ಪರ ಧ್ವನಿ ಎತ್ತಿದ ಸಮೀರ್ ಗೆ ಸೂಕ್ತ ರಕ್ಷಣೆ ಒದಗಿಸಲು ಡಿವೈಎಫ್ಐ ಆಗ್ರಹ

Date:

“ಧರ್ಮಸ್ಥಳ ಪಕ್ಕದ ಪಾಂಗಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ. ಈ ಕುರಿತು ಧ್ವನಿ ಎತ್ತಿದ ಯೂಟುಬರ್ ಸಮೀರ್ ಅವರಿಗೆ ಸರಕಾರ ಸೂಕ್ತ ರಕ್ಷಣೆ ಒದಗಿಸಬೇಕು” ಎಂದು ಡಿವೈಎಫ್ಐ ರಾಜ್ಯ ಅಧ್ಯಕ್ಷೆ ಲವಿತ್ರ ವಸ್ತ್ರದ ಆಗ್ರಹಿಸಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಸಮಿತಿ ಸಭೆಯಲ್ಲಿ ಮಾತನಾಡಿದರು.

“2012 ರಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ನ್ಯಾಯ ಮರೀಚಿಕೆಯಾಗಿದ್ದು, ಆಕೆಯ ಕುಟುಂಬದವರು ಇಂದಿಗೂ ಕಣ್ಣೀರು ಹಾಕುತ್ತಿದ್ದಾರೆ. ರಾಜ್ಯ ಸರಕಾರ ಈ ಕೇಸ್ ಅನ್ನು ಮರು ತನಿಖೆ ಮಾಡಿ ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕುವಂತೆ ಮಾಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೌಜನ್ಯ ಪ್ರಕರಣವನ್ನು ಸಂಪೂರ್ಣವಾಗಿ ತನಿಖೆ ಮಾಡದೆ ಮುಚ್ಚಿಹಾಕಲಾಗಿದೆ. ಇದರ ಬಗ್ಗೆ ಪ್ರಶ್ನೆ ಮಾಡಿದ ಸಮೀರ್ ಮೇಲೆ ಪೋಲೀಸರು ಸೊಮೋಟೊ ಕೇಸ್ ಹಾಕಿದ್ದಾರೆ. ವಿಡಿಯೋ ಮೂಲಕ ಈ ಪ್ರಕರಣದ ವಾಸ್ತವತೆಯನ್ನು ಜನರೆದುರು ತರಲು ಪ್ರಯತ್ನಿಸಿದ ಸಮೀರ್ ಅವರಿಗೆ ಸೂಕ್ತ ರಕ್ಷಣೆ ನೀಡಬೇಕು” ಎಂದು ಡಿವೈಎಫ್ಐ ರಾಜ್ಯ ಸಮಿತಿಯು ಆಗ್ರಹಿಸುತ್ತದೆ ಎಂದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಮಾತನಾಡಿ, “ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣವನ್ನು ಸಮಗ್ರ ತನಿಖೆಯಾಗಿ ಸತ್ಯ ಹೊರತಂದು ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಒತ್ತಾಯಿಸಬೇಕು. ಅದು ಬಿಟ್ಟು ಪ್ರಕರಣವನ್ನು ಕೋಮು ರಾಜಕಾರಣದತ್ತ ತಿರುಚುತ್ತಿರುವುದದನ್ನು ಡಿವೈಎಫ್ಐ ತೀವ್ರವಾಗಿ ಖಂಡಿಸುತ್ತದೆ. ಎಲ್ಲಿ ಕೋಮುರಾಜಕಾರಣ ಶುರುವಾಗುತ್ತದೋ ಅಲ್ಲಿ ನ್ಯಾಯ ಮರೆಮಾಚುತ್ತದೆ. ಯಾವುದೇ ಅನ್ಯಾಯ, ಅತ್ಯಾಚಾರ, ಕೊಲೆ ಘಟನೆಗಳನ್ನು ಕೋಮುಭಾವನೆಯಿಂದ ನೋಡದೇ, ಶಿಕ್ಷೆಗೆ ಒಳಪಡಿಸುವ ಅಪರಾಧವಾಗಿ ನೋಡಬೇಕು” ಎಂದು ಹೇಳಿದರು.

“ಸೌಜನ್ಯ ಪ್ರಕರಣದಲ್ಲಿ ಕೋಮು ರಾಜಕಾರಣ ಮಾಡದೇ ಅವಳ ಕುಟುಂಬಕ್ಕೆ ನ್ಯಾಯ ಸಿಗಲು, ಪ್ರಕರಣದ ಮರು ತನಿಖೆ  ನಡೆಸಿ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಬೇಕು. ಈ ಕುರಿತು ಬೆಳಕು ಚೆಲ್ಲಿದ ಸಮೀರ್ ಮೇಲಿನ ಸೊಮೋಟೊ ಕೇಸ್ ಅನ್ನು ರಾಜ್ಯ ಸರಕಾರ ಹಿಂಪಡೆಯಬೇಕು ಹಾಗೂ ಸಮೀರ್ ಮತ್ತವನ ಕುಟುಂಬಕ್ಕೆ ಭದ್ರತೆ ಒದಗಿಸಬೇಕು. ಇಲ್ಲವಾದಲ್ಲಿ ನಾಡಿನಾದ್ಯಂತ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಮದುವೆ ಖುಷಿಯಲ್ಲಿದ್ದ ಯುವಕನ ಕೊಲೆ

ಸಭೆಯಲ್ಲಿ ಡಿವೈಎಫ್ಐ ರಾಜ್ಯ ಸಮಿತಿ ಪದಾಧಿಕಾರಿಗಳಾದ ಸಂತೋಷ ಬಜಾಲ್, ಪೃಥ್ವಿ ಎಂ.ಜಿ, ಯು. ಯರ್ರಿಸ್ವಾಮಿ, ವಿ.ಸ್ವಾಮಿ, ನಾರಾಯಣ ಎಸ್. ಕೆ, ರೇಣುಕಾ ಪಿ.ಕೆ, ಈಡಿಗರ ಮಂಜುನಾಥ, ಎಚ್. ಸ್ವಾಮಿ, ಜ್ಯೋತಿ ಪಿ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...