ಹಾವೇರಿ | ಸ್ಥಳೀಯರಿಗೆ ಟೋಲ್ ಶುಲ್ಕ: ಕರವೇ ಪ್ರತಿಭಟನೆ

Date:

“ಸುಮಾರು ಹತ್ತು ವರ್ಷದಿಂದ ಸ್ಥಳಿಯವಾಗಿ ಟೊಲ್‌ಗಳು ಕಾರ್ಯನಿರ್ವಹಿಸುತ್ತಿದೆ. ಟೋಲ್‌ಗೆ ಸಂಬಂದಿಸಿದ ಏಜೇನ್ಸಿಗಳು ಸ್ಥಳೀಯರಿಗೆ ಮತ್ತು 3 ಕೀಮಿ ಸಂಬಂದಿಸಿದಂತಹ ಎಲ್ಲಾ ಹಳ್ಳಿಗಳ ವಾಹನ ಸವಾರರಿಗೆ ಟೋಲ್‌ ಶುಲ್ಕ ಇಲ್ಲದೆ ಬಿಡುವದು ಇರುತ್ತದೆ. ಆದರೆ ಸ್ಥಳೀಯರಿಗೆ ಶುಲ್ಕ ವಿಧಿಸುತ್ತಿರುವುದು ಖಂಡನೀಯ ಎಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲ್ಲೂಕಿನ ಹಂಸಭಾವಿ ಹತ್ತಿರದ ಟೋಲ್ ನಲ್ಲಿ ಸ್ಥಳೀಯರಿಗೂ ಶುಲ್ಕ ವಿಧಿತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಟೋಲ್ ಎದುರಿಗೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು 

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ ಮಾತನಾಡಿ, “ಸ್ಥಳೀಯರಿಗೆ ಶುಲ್ಕವಿಲ್ಲದೆ ಬಿಡಬೇಕು ಎಂದು ಹಲವಾರು ಬಾರಿ ನಾವು ಹೋರಾಟ ಮಾಡಿದ್ದೇವೆ. ಆದರೆ ಈಗಿರುವ ಏಜೇನ್ಸಿಯವರು ‘ಯಾವುದೇ ವಾಹನಗಳನ್ನು ಬಿಡಬಾರದು’ ಎಂದು ತಮ್ಮ ಸಿಬ್ಬಂದಿಗೆ ಹೇಳಿರುವುದು ನಮ್ಮ ಗಮನಕ್ಕೆ ಬಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಒಂದು ಟೊಲ್‌ನಲ್ಲಿ ಸಾರ್ವಜನಿಕರಿಗೆ ಕೊಡಬೇಕಾದ ಮೂಲಭೂತ ಸೌಲಭ್ಯಗಳನ್ನು ನೀವು ಕೊಡುತ್ತಿಲ್ಲ. ಆದರೆ ಕೇವಲ ಟೊಲ್ ವಸೂಲಿಯ ಮೇಲೆ ಮಾತ್ರ ನಿಮ್ಮ ಗಮನ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ ಒಂದು ಟೋಲ್ ನಿಂದ ‘ಇನ್ನೊಂದು ಟೋಲ್ ಗೆ 60 ಕೀಮಿ ಅಂತರ ಇರಬೇಕು. ಸಾರ್ವಜನಿಕರಿಗೆ ತುರ್ತು ಆಂಬುಲೆನ್ಸ ವ್ಯವಸ್ತೆ, ಪ್ರಥಮ ಚಿಕಿತ್ಸೆ, ವಾಹನ ಸವಾರರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂಬ ಆದೇಶ ಇದ್ದರೂ ಯಾವುದೇ ಸೌಲಭ್ಯಗಳಿಲ್ಲ” ಅಸಮಾಧಾನ ವ್ಯಕ್ತಪಡಿಸಿದರು.

 “ರಾಣೇಬೆನ್ನೂರಿನಿಂದ ಹಿರೇಕೆರೂರವರೆಗೂ ಇರುವ ಕೆ ಆರ್ ಡಿ ಸಿ ಎಲ್ ರಸ್ತೆಯು ಇರುವುದು ಕೇವಲ 58 ಕೀಮಿ ಇರುತ್ತದೆ. ಇಷ್ಟರಲ್ಲಿಯೇ ಎರಡು ಟೋಲ್ ಇರುವದು ವಿಪರ್ಯಾಸ. ಕೇಂದ್ರ ಸರ್ಕಾರದ ಆದೇಶವನ್ನು ದಿಕ್ಕರಿಸಿ ಹಣ ಸಂಗ್ರಹ ಮಾಡುತ್ತಿರುವುದು ಹಗಲು ಧರೊಡೆ ಆಗಿದೆ. ನಾವು ಕಟ್ಟುತ್ತಿರುವ ತೇರಿಗೆ ಹಣದಿಂದದಿಂದ ರಸ್ತೆಗಳ ಸುಗಮ ಸಂಚಾರ ಆಗಬೇಕು. ಆದರೆ ರಸ್ತೆಯಾಗಿ ಹತ್ತು ವರ್ಷ ಕಳೇದರು ಯಾವೂದೆ ಮೂಲಭೂತ ಸೌಲಭ್ಯಗಳಿಲ್ಲದೆ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದಾರೆ” ಎಂದರು.

“ಈ ಹಿಂದೆ ಕಾರ್ಯನಿರ್ವಹಿಸುತ್ತಿರುವ ಏಜೇನ್ಸಿಗಳ ಪ್ರಕಾರ ಸ್ಥಳಿಯರಿಗೆ ಟೋಲ್ ಫ್ರೀ ಮಾಡಿ ಬಿಡಬೇಕು. ನಾವು ಮನವಿ ನೀಡಿದ 15 ದಿನದ ಒಳಗೆ ಏಜೇನ್ಸಿಯವರು ಒಂದು ಸಭೆ ಕರೆದು, ಇದರ ಬಗ್ಗೆ ಚರ್ಚಿಸಬೇಕು. ಇಲ್ಲದೇ ಹೊದಲ್ಲಿ ಕೇಂದ್ರ ಸರ್ಕಾರದ ಆದೇಶದ ಪ್ರಕಾರ ನೀವು ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸುವವರೆಗೂ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಹಂಸಭಾವಿ ಹೋಬಳಿ ಘಟಕದ ಅಧ್ಯಕ್ಷ ನಾಗರಾಜ ವಾಲ್ಮೀಕಿ, ಉಪಾಧ್ಯಕ್ಷ ಕಾಂತೇಶ್ ಕೋಟಿಹಾಳ, ಯೋಗೇಶ್ ಕೋಟಿಹಾಳ್, ಪರಶುರಾಮ ಕೋಟೆಯವರ, ಸಾಧಿಕ, ಆನಂದ್ ಬಂಡಿವಡ್ಡರ್, ಸುರೇಶ್ ಕೋಟಿಹಾಳ, ಬಸವರಾಜ್ ಚಕ್ರಸಾಲಿ, ಸುಭಾಸ್, ಸಿಕಂದರ್ ಮೈಸೂರು, ಸುಹಿಲ್, ಬಿ. ಎಚ್ ಬನಕಾರ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...