ಟ್ರ್ಯಾಕ್ಟರ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾವೇರಿ ತಾಲೂಕಿನ ಬಸಾಪುರ ಗ್ರಾಮದ ಬಳಿ ನಡೆದಿದೆ.
ಹಾವನೂರು ಜಾತ್ರೆ ನೋಡಲು ಹಳೇರಿತ್ತಿ ಗ್ರಾಮದಿಂದ ಜನರು ಟ್ರ್ಯಾಕ್ಟರ್ ಮೂಲಕ ಹೊರಟಾಗ ಬಸ್ ಡಿಕ್ಕಿಯಾಗಿದ್ದರಿಂದ ಅಪಘಾತ ಸಂಭವಿಸಿದೆ. ಈ ವೇಳೆ ಟ್ರ್ಯಾಕ್ಟರ್ನಲ್ಲಿದ್ದ ಹತ್ತಾರು ಸಣ್ಣಪುಟ್ಟ ಮಕ್ಕಳಿಗೂ ತೀವ್ರ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಾವನೂರು ಜಾತ್ರೆಯನ್ನು ನೋಡಲು ಜನರು ಹಳೇರಿತ್ತಿ ಗ್ರಾಮದಿಂದ ಹಾವನೂರು ಜಾತ್ರೆಗೆ ಟ್ರ್ಯಾಕ್ಟರ್ನಲ್ಲಿ ಹೋಗುತ್ತಿದ್ದರೆಂದು ತಿಳಿದು ಬಂದಿದೆ.
ಹಳೇರಿತ್ತಿ ಗ್ರಾಮದ ಬೇಟಗೇರಿ ಕುಟುಂಬ ಸದಸ್ಯರು ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ತಕ್ಷಣವೇ ಹಾವೇರಿ ತಹಸೀಲ್ದಾರ್ ಶರಣಮ್ಮ ಹಾಗೂ ಗುತ್ತಲ ಪೊಲೀಸರು ಭೇಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





