ಹಾವೇರಿ | ಜನರಿಗೆ ತಲುಪದ ವಿವಿಧ ಇಲಾಖೆಯ ಯೋಜನೆಗಳು, ಅಧಿಕಾರಿಗಳ ಇಚ್ಚಾಶಕ್ತಿಯ ಕೊರತೆ: ಕರವೇ ಆರೋಪ

Date:

“ಸರಕಾರದ ವಿವಿಧ ಇಲಾಖೆಗಳಲ್ಲಿ ಇರುವ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಇಲಾಖೆಗಳಗೆ ಜನರು ಅಲೆದಾಡಿ ಹೈರಾಣ ಆಗುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಜನರಿಗೆ ತಲುಪುತ್ತಿಲ್ಲ. ಅಧಿಕಾರಿಗಳ ಇಚ್ಛಾಸಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದು ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ ಆರೋಪಿಸಿದರು.

ಹಾವೇರಿ ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ವಿವಿಧ ಇಲಾಖೆಯ ಯೋಜನೆಗಳು ಸ್ಥಗಿತವಾಗಿರುವ ಕುರಿತು ತಹಸೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಕಾರ್ಮಿಕ ಇಲಾಖೆಯಲ್ಲಿ ಸುಮಾರು 2022 ರಿಂದ ಇಲ್ಲಿಯವರೆಗೆ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳು ಫಲಾನುಭವಿಗಳಿಗೆ ಸಿಗ್ಗುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಂರ್ತಜಾತಿ ವಿವಾಹದ ಯೊಜನೆಯ ಹಣ ಬಿಡುಗಡೆ ಆಗಿಲ್ಲ. ಗ್ರಾಮೀಣ ಮತ್ತು ಸಣ್ಣಕೈಗಾರಿಕೆ ಯೊಜನೆ ಅಡಿಯಲ್ಲಿ ಬಡ ಮತ್ತು ನಿರ್ಗತಿಕ/ವಿಧವೆ ಮಹಿಳೆಯರಿಗೆ ಅವರ ಜೀವನ ಕಟ್ಟಿಕೊಳ್ಳಲು ಹೊಲಿಗೆ ಯಂತ್ರವನ್ನು ಕೊಡುವ ಮುಲಕ ಅವರನ್ನು ಆರ್ಥಿಕ ಸಬಲಿಕರಣ ಮಾಡಬೆಕ್ಕಿತ್ತು. ಸರಕಾರ/ಇಲಾಖೆ ಅರ್ಜಿಯನ್ನು ಹಾಕಿ ವರ್ಷಗಳೆ ಕಳೆದರು ಇಲಿಯವರೆಗೂ ಯಾವುದೆ ಫಲಾನುಭವಿಗೂ ಯೋಜನೆಯ ಹೊಲಿಗೆ ಯಂತ್ರ ಕೊಟ್ಟಿರುವುದಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಆಸ್ಪತ್ರೆಗಳಲ್ಲಿ ಸಿಬ್ಬಂದಿಗಳ ಕೊರೆತೆಯಿದೆ. ಶಿಘ್ರವಾಗಿ ಕ್ರಮ ಕೈಗೊಂಡು ಸಿಬ್ಬಂದಿ ಭರ್ತಿ ಮಾಡಿಸಬೇಕು. ಮಳೆಯ ಪ್ರಮಾಣ ಹೆಚ್ಚಾಗಿದ್ದು ಗ್ರಾಮೀಣ ಪ್ರದೆಶದ ರಸ್ತೆಗಳು ದಗ್ಗು-ಗುಂಡಿ ಬಿದ್ದು ಹಾಳಾಗಿವೆ. ದುರಸ್ಥಿಗೊಳಿಸಬೇಕು. ಸರಕಾರಿ ಶಾಲೆಗಳ ಕಟ್ಟಡಗಳು ಶಿಥಿಲಾವಸ್ಥೆಗೆ ಬಂದಿದ್ದು ಮಕ್ಕಳು ಭಯದಿಂದ ಶಿಕ್ಷಣ ಪಡೆಯುವ ಸ್ಥಿತಿ ನಿರ್ಮಾವಾಗಿದೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಬೆಕು. ಸುಮಾರು ವರ್ಷಗಳಿಂದ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹಲವಾರು ಬಡವರು ನಿರ್ಗತಿಕರು ಅಂಗವಿಕಲರು ವೃದ್ಧರು ಕೆಲಸ ಮಾಡುತ್ತಿದ್ದು, ಕೂಲಿ ಹಣ ಬಂದಿರುವುದಿಲ್ಲ” ಎಂದರು.

“ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಅವ್ಯಾವಹತವಾಗಿ ನಡೆಯುತ್ತಿದ್ದು ಸಂಬಂದಿಸಿದ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ ಇದರ ಬಗ್ಗೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು. ಶಾಲಾ/ಕಾಲೇಜು ಮಕ್ಕಳಿಗೆ ಸರಿಯಾದ ಸಮಯಕ್ಕೆ ಬಸ್ಸುಗಳ ವ್ಯವಸ್ಥೆ ಇಲ್ಲ. ಸರ್ಕಾರದ ಆದೇಶ ಇದ್ದರೂ ಅಂಗಡಿಗಳು ಇರುವ ಮಾಲಕರು ನಾಮಫಲಕಗಳಲ್ಲಿ ಕನ್ನಡವನ್ನು 60% ಬಳಸಬೇಕು, ಆದರೆ ಬಳಸುತ್ತಿಲ್ಲ.

ಈ ಸುದ್ದಿ ಓದಿದ್ದೀರಾ? ಗದಗ | ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ನೇಮಕ

“ಈ ಎಲ್ಲ ವಿಷಯಗಳಿಗೆ ಸಂಬಂಧಿಸಿದಂತೆ ಗಮನ ಹರಿಸಿ ಕ್ರಮ ಕೈಗೊಳ್ಳುತ್ತೀರಿ ಎಂಬ ಭರವಸೆ ಇದೆ. ಒಂದು ವೇಳೆ ಕ್ರಮ ಕೈಗೊಲ್ಲದಿದ್ದರೆ ಕರವೇ ವತಿಯಿಂದ ಉಗ್ರವಾದ ಪ್ರತಿಭಟನೆ ಮಾಡಲಾಗುವುದು” ಎಂದು ಗಿರೀಶ ಬಾರ್ಕಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರವೇ ರಾಜ್ಯ ಕಾರ್ಯದರ್ಶಿ ಕರಬಸಯ್ಯ ಬಸರಿಹಳ್ಳಿಮಠ, ರಾಜ್ಯ ಸಂಘಟನಾ ಕಾರ್ಯದರ್ಶಿ ಸತೀಶ್ ಗೌಡ ಮುದಿಗೌಡ್ರ, ಹಾವೇರಿ ತಾಲೂಕ ಅಧ್ಯಕ್ಷ ಹಾಲೇಶ್ ಹಾಲಣ್ಣನವರ್, ಹಸನಸಾಬ ಹತ್ತಿಮತ್ತೂರ, ಕೊಟ್ರೇಶ್ ಗುತ್ತುರ, ಚನ್ನಪ್ಪ ಹೊನ್ನಮ್ಮನವರ, ಬಸವರಾಜ ಅರಳಿ, ಶಿವಾನಂದ ಪೂಜಾರ, ಸತ್ಯವತಿ ಕಡೇರ, ರೇಣುಕಾ ಬಡಕಣ್ಣವರ, ಈರಮ್ಮ ಕಾಡಸಾಲಿ, ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...