ಹಾವೇರಿ | ಕೆಳಸೇತುವೆ ನಿರ್ಮಿಸಲು ಆಗ್ರಹ: ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರಿಂದ ಪ್ರತಿಭಟನೆ

Date:

ಗದಗ- ಹೊನ್ನಾಳಿ ರಸ್ತೆಗೆ ಕೆಳಸೇತುವೆ ನಿರ್ಮಿಸಿ, ರಾಣೆಬೆನ್ನೂರು -ಕೂನಬೇವು ರಸ್ತೆಯಲ್ಲಿ ಈಗಿರುವಂತೆಯೆ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕೂನಬೇವು, ಕಜ್ಜರಿ ಹಾಗೂ ಬುಡಪನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಈ ಹಿಂದೆ ಗ್ರಾಮಸ್ಥರು ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ( ಕೆಶಿಪ್)ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಅವರು, ಪರಿಶೀಲನೆ ನಡೆಸುತ್ತೇವೆ ಎಂದು ಸಬೂಬು ಹೇಳುತ್ತಾ, ರಸ್ತೆ ಕಾಮಗಾರಿ ನಡೆಸುತ್ತಲೇ ಬಂದರು. ಈ ಸಂಬಂಧ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿದ್ದ ಶಾಸಕರಾದ ಬಸವರಾಜ ಶಿವಣ್ಣನವರ ಅವರು ಸ್ಥಳಕ್ಕೆ ಭೇಟಿ ನೀಡಿ, ಕೆಳಸೇತುವೆ ನಿರ್ಮಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದರು.

ಆದಾಗ್ಯೂ, ಕೆಶಿಫ್ ಈ ವಿಷಯದಲ್ಲಿ ತೋರುತ್ತಿರುವ ನಿರ್ಲಕ್ಷ್ಯವನ್ನು ಖಂಡಿಸಿದ ಗ್ರಾಮಸ್ಥರು, ನಮಗೆ ಈಗಿರುವ ರಸ್ತೆ ಮಟ್ಟದಲ್ಲೇ ಸುಗಮ ಸಂಚಾರ ಸಾಧ್ಯವಾಗುವ ರೀತಿಯಲ್ಲಿ ಗದಗ-ಹೊನ್ನಾಳಿ ಹೆದ್ದಾರಿಗೆ ಕೆಳಸೇತುವೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿ ಸಲ್ಲಿಸಿ ಒಂದು ವರ್ಷ ಆದರೂ ಕಾಮಗಾರಿ ನಡೆಯುತ್ತಲೇ ಇದೆ. ಮೊದಲು ನಮಗೆ ಕೆಳಸೇತುವೆ ನಿರ್ಮಿಸಿ, ಆನಂತರ ಕಾಮಗಾರಿ ಮುಂದುವರೆಸಿ ಎಂದು ಒತ್ತಾಯಿಸಿ, ಕಾಮಗಾರಿಯನ್ನು ತಡೆದು ನಿಲ್ಲಿಸಿದರು.

ಸ್ಥಳಕ್ಕೆ ಬಾರದ ಅಧಿಕಾರಿಗಳು

ನೂರಾರು ಗ್ರಾಮಸ್ಥರು, ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯಾವ ಅಧಿಕಾರಿಯೂ ಸ್ಥಳಕ್ಕೆ ಬಂದಿರಲಿಲ್ಲ. ರೈತಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ, ಎಪಿಎಮ್‌ಸಿ ಮಾಜಿ ಅಧ್ಯಕ್ಷ ಬಸವರಾಜ ಸವಣೂರ ಹಾಗೂ ಜಿ. ಪಂ ಸದಸ್ಯ ಏಕನಾಥ ಭಾನುವಳ್ಳಿ ಅವರು ಕೆಶಿಪ್ ಅಧಿಕಾರಿಗಳೊಂದಿಗೆ ಫೋನಿನಲ್ಲಿಯೇ ಮಾತನಾಡಿದರು.

ನಂತರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಆರ್ ಎಚ್ ಭಗವಾನ್ ಮತ್ತು ಪೊಲೀಸ್ ಅಧಿಕಾರಿಗಳು, ರೇಲ್ವೆ ಮೇಲ್ಸೇತುವೆ ಸುತ್ತುವರೆದು ಸಂಚರಿಸುವುದರಿಂದ ಗ್ರಾಮಸ್ಥರು ಅನುಭವಿಸಬೇಕಾದ ತೊಂದರೆ, ಅಪಾಯ ಮತ್ತು ಅನಾನುಕೂಲಗಳನ್ನು ಕುರಿತು ಗ್ರಾಮಸ್ಥರ ಅಭಿಪ್ರಾಯಗಳನ್ನು ಆಲಿಸಿದರು.

ನಂತರ ಕೆಶಿಪ್ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು ಇದೇ ದಿ. 15ರಂದು ಕೆಶಿಪ್, ಜನಪ್ರತಿನಿಧಿಗಳು ಹಾಗೂ ರೈತಸಂಘದ ಪ್ರತಿನಿಧಿಗಳನ್ನು ಸೇರಿಸಿ ಸಭೆಯೊಂದನ್ನು ಆಯೋಜಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳೋಣ ಎಂದು ಭರವಸೆ ನೀಡಿದರಲ್ಲದೆ, ಆ ವರೆಗೆ ಕಾಮಗಾರಿ ನಡೆಸಕೂಡದೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಣೆಬೆನ್ನೂರು ಗ್ರಾಮೀಣ ಠಾಣೆಯ ಪಿಎಸ್ಐ ಅವರು ಕೂಡ ಈ ಸಂದರ್ಭದಲ್ಲಿ ಹಾಜರಿದ್ದರು.

ಇದನ್ನು ಓದಿದ್ದೀರಾ? ರತನ್ ಟಾಟಾ | ಬಂಡವಾಳಶಾಹಿಗಳ ರತ್ನ – ಸಮಾಜವಾದಿ ಆಶಯಗಳ ದುಃಸ್ವಪ್ನ?

ಪ್ರತಿಭಟನೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜ ಸವಣೂರ, ಜಿಪಂ ಸದಸ್ಯ ಏಕನಾಥ್ ಭಾನುವಳ್ಳಿ, ರೈತಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ, ರಾಜ್ಯ ಸಂಚಾಲಕ ರವೀಂದ್ರಗೌಡ ಪಾಟೀಲ, ಎಎಪಿ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ, ಗ್ರಾಂ.ಪಂ ಮಾಜಿ ಅಧ್ಯಕ್ಷ ಮಾಲತೇಶ ಮಾಸಣಗಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಮೈಲಾರೆಪ್ಪ ಮಾಳಗುಡ್ಡಪ್ಪನವರ, ರೈತಸಂಘದ ತಾಲುಕಾ ಕಾರ್ಯದರ್ಶಿ ಚಂ ಸು. ಪಾಟೀಲ, ಗ್ರಾಮ ಘಟಕದ ಅಧ್ಯಕ್ಷ ಮಹಾದೇವಪ್ಪ ಬಣಕಾರ, ಚನ್ನವೀರಗೌಡ ಪಾಟೀಲ, ರುದ್ರಗೌಡ ಪಾಟೀಲ, ಷಣ್ಮುಖಪ್ಪ ಅಣಜಿ, ವಿರುಪಾಕ್ಷಪ್ಪ ಬಣಕಾರ, ಲಕ್ಕಣ್ಣ ಅಣಜಿ, ಚನಬಸಗೌಡ ಪಾಟೀಲ, ಪರಮೇಶ್ವರಪ್ಪ ಬಣಕಾರ ಸೇರಿದಂತೆ ನೂರಾರು ರೈತರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...