ಹಾವೇರಿ | ನಾವೆಲ್ಲರೂ ಸಂವಿಧಾನ ಉಳಿಸಲು ಮುಂದಾಗಬೇಕು: ನಟ ಚೇತನ್

Date:

“ಎಲ್ಲಾ ಭಾಷೆ,ಧರ್ಮ ಹಾಗೂ ಸಂಸ್ಕೃತಿಯ ಪ್ರತೀಕವಾಗಿ ನಾವು ಬದುಕಬೇಕಿದೆ. ಇದು ಸಾಧ್ಯವಾಗಬೇಕಾದರೆ ನಾವೆಲ್ಲರೂ ಸಂವಿಧಾನ ಉಳಿಸಲು ಮುಂದಾಗಬೇಕು” ಎಂದು ನಟ ಚೇತನ್ ಹೇಳಿದರು.

ಹಾವೇರಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ) ಹಾಗೂ ಜಿಲ್ಲೆಯ ಪ್ರಗತಿಪರರ ಸಂಯೋಗದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

“ಭಾರತ ವೈವಿಧ್ಯಮಯ ಸಂಸ್ಕೃತಿಯ ನಾಡು. ಈ ದೇಶದಲ್ಲಿ ಎಲ್ಲಾ ಜನಾಂಗದವರು ನೆಲಿಸಿರುವ ವಿಶೇಷವಾಗಿದೆ. ಡಾ.ಬಿ.ಆರ್ ಅಂಬೇಡ್ಕರ್ ಆಶಯದಂತೆ ಸಮಾನತೆ, ಭಾತೃತ್ವದಿಂದ ಬದುಕಲು ಸಂವಿಧಾನ ಅವಕಾಶ ನೀಡಿದೆ. ಇದಕ್ಕೆ ನಾವು ಯಾವುದೇ ಹೋರಾಟಕ್ಕೂ ಸಿದ್ದರಾಗಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ಮತ್ತು ಹಿಂದುಳಿದ ವರ್ಗ,ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ(ರಿ)ಯ ರಾಜ್ಯಾಧ್ಯಕ್ಷರಾದ ಉಡಚಪ್ಪ ಮಾಳಗಿ ಮಾತನಾಡಿ, “ನಮ್ಮೆಲ್ಲರ ಬದುಕಿಗೆ ನಮ್ಮ ಸಂವಿಧಾನವೇ ನಮಗೆ ಭದ್ರ ಬೂನಾದಿಯಾಗಿದೆ. ಡಾ.ಬಿ. ಆರ್ ಅಂಬೇಡ್ಕರ್ ಅವರು ಭಾರತೀಯರೆಲ್ಲರ ಹಿತದೃಷ್ಟಿಯನ್ನು ಇಟ್ಟುಕೊಂಡು ಸಂವಿಧಾನ ರಚನೆಗೆ ಮುಂದಾಗಿದ್ದರು. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರೂ ತಿಳಿಸುವ ಹಾಗೂ ಸಂವಿಧಾನ ಆಶಯಗಳನ್ನು ಸುಭದ್ರಪಡಿಸುವ ಕೆಲಸವನ್ನು ನಾವೆಲ್ಲರೂ ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಾಮಾಜಿಕ ಚಿಂತಕ ಚೇತನಕುಮಾರ ಅವರು ಇಲ್ಲಿಗೆ ಬಂದು ಸಂವಿಧಾನದ ಮಹತ್ವದ ಕುರಿತು ತಿಳಿಸುವ ಕಾರ್ಯ ಮಾಡಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸೋಣ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಪೋಕ್ಸೋ ಕೇಸ್ ದಾಖಲಾಗಿದ್ದ ಸ್ವಾಮಿಜಿ ಮಠ ದ್ವಂಸ

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಮಂಜಪ್ಪ ಮರೋಳ, ಮುಖಂಡರು ಡಾ. ಸಂಜಯ ಡಾಂಗೆ. ಹೊನ್ನಪ್ಪ ತಗಡಿಮನಿ, ಅಶೋಕ ಮರಿಯಣ್ಣನವರ, ವಾಯ್,ಎನ್ ಮಾಸೂರ, ವಿಭೂತಿ ಶೆಟ್ಟಿ, ಮಾರುತಿ ಕಿಳ್ಳಿಕ್ಯಾತರ, ಜಗದೀಶ ಹರಿಜನ, ಮಲ್ಲೇಶಪ್ಪ ಮದ್ಲೇರ, ಹನುಮಂತಪ್ಪ ಹೌಸಿ, ರೇಣುಕಾ ಬಡಕಣ್ಣನವರ, ನೀಲಮ್ಮ ಬಡಪನಹಳ್ಳಿ, ಜಗದೀಶ ಹರಿಜನ, ಹನುಮಂತಪ್ಪ ಸಿ,ಡಿ, ಮಹೇಶಪ್ಪ ಶಾಕರ, ಬಸವಣ್ಣಪ್ಪ ಹಳ್ಳಳ್ಳಿ, ಹನುಮಂತಪ್ಪ ಬ್ಯಾಡಗಿ, ದೇವರಾಜ ಮಡಿವಾಳರ, ಚಂದ್ರಪ್ಪ ಕಚವಿ,ಶಿವರಾಜ ಸಂಗಪ್ಪನವರ, ಅಜೀತ ಚೌಡಮ್ಮನವರ, ಮಹೇಶ ಖಾರದ, ಮಾಲತೇಶ ಮೈಲಾರ, ಮೈಲಪ್ಪ ಡೊಳ್ಳಿನ, ಲಲಿತಾ ಬಡಕಣ್ಣನವರ, ಗೀತಾ ಹಳೆಶಿಡೇನೂರ, ನಾಗಮ್ಮ ಮದ್ದೂರ, ಯಲ್ಲಮ್ಮ ಕೊಪ್ಪದ, ಗೀತಾ ಬಳಗುಂದಿ, ಯಶೋಧಾ ಸಣ್ಣಮನಿ, ಲಕ್ಷ್ಮಿ ಸಣ್ಣಮನಿ, ಗೀತಾ ಕಡೆಮನಿ, ಸುಮಂಗಲಾ ಕೃಷ್ಣಾಪುರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...