ಹಾವೇರಿ | ಹಂಚಿಕೊಂಡು ಬದುಕುವ ದಾಸೋಹ ಸಂಸ್ಕೃತಿ ಬೇಕು: ಶಂಭು ಬಳಿಗಾರ

Date:

“ನಮ್ಮ ನಮ್ಮ ಸೈದ್ಧಾಂತಿಕ ಬದ್ಧತೆಗಳನ್ನು ಒಮ್ಮೊಮ್ಮೆ ಮೀರಿ ಮನುಷ್ಯ ಪ್ರೀತಿಗಾಗಿ ಹಳೆಯದನ್ನು ಮುರಿದು, ಹೊಸದನ್ನು ಕಟ್ಟಬೇಕು. ಇಂದಿನ ಹರಿದು ತಿನ್ನುವ ದಿನಮಾನಗಳಲ್ಲಿ ಶರಣರ ದಾಸೋಹ ನೀತಿಯಂತೆ ಹಂಚಿಕೊಂಡು ಬದುಕುವ ಕಲೆ ಅಗತ್ಯವಿದೆ” ಎಂದು ಹಿರಿಯ ಜಾನಪದ ವಿದ್ವಾಂಸ ಡಾ. ಶಂಭು ಬಳಿಗಾರ ನುಡಿದರು.

ಹಾವೇರಿ ಪಟ್ಟಣದ ಹಂಚಿನಮನಿ ಆರ್ಟಗ್ಯಾಲರಿಯಲ್ಲಿ ಸಾಹಿತಿ ಕಲಾವಿದರ ಬಳಗ ಆಯೋಜಿಸಿದ್ದ, ಈ ಬಾರಿಯ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಿರಿಗನ್ನಡ ಪ್ರಶಸ್ತಿ ಪುರಸ್ಕೃತ ಗೆಳೆಯರ ಬಳಗದ, ಸಂಸ್ಥೆಯ ಅಭಿನಂದನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ  ಮಾತನಾಡಿದರು.

“ಆರು ದಶಕಕ್ಕೂ ಹೆಚ್ಚು ಕಾಲ ನಾಡು ನುಡಿಗಾಗಿ ಯಾವ ಸದ್ದು ಗದ್ದಲಗಳಿಲ್ಲದೆ ಮೌನವಾಗಿ ಕೊಡುಗೆ ನೀಡಿದ, ಗೆಳೆಯರ ಬಳಗ. ಅದರ ಸಾಧನೆಯ ಅರ್ಹತೆಯ ಮೇಲೆ ಈ ಪ್ರಶಸ್ತಿ ಬಂದಿದೆ. ಇದನ್ನು ಕಟ್ಟಿದ ಹಿರಿಯರನ್ನು ಸದಾಕಾಲ ಸ್ಮರಿಸುವಂತಾಗಬೇಕು ” ಎಂದು ಡಾ. ಶಂಭು ಬಳಿಗಾರ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗೆಳೆಯರ ಬಳಗದ ಅಧ್ಯಕ್ಷರಾದ ಡಾ. ಸುದೀಪ ಪಂಡಿತರನ್ನು ಹಾಗೂ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಶ್ರೀಮತಿ ರೇಖಾ ಹಂಚಿನಮನಿ ಮತ್ತಿತರರು ಸನ್ಮಾನಿಸದರು.

ನಂತರ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಮಾತನಾಡಿ, “ವೃತ್ತಿ ಒತ್ತಡಗಳ ನಡುವೆ ಚಿತ್ರಕಲೆ, ಸಾಹಿತ್ಯ ಕಲೆಯಂತಹ ಯಾವುದಾದರೂ ಹವ್ಯಾಸ ಇರಬೇಕು. ಆಗ ಮಾತ್ರ ಚೈತನ್ಯಶೀಲರಾಗಿ ಜೀವನ ಸಾಗಿಸಬಹುದು. ನನಗೂ ಚಿತ್ರ ಕಲೆಯಲ್ಲಿ ಹೆಚ್ಚಿನ ಆಸಕ್ತಿ ಇತ್ತು. ಆದರೆ ಸ್ಪರ್ಧಾತ್ಮಕ ಪರೀಕ್ಷೆಗಳ ಓಟದಲ್ಲಿ ಬದಿಗೆ ಸರಿಸ ಬೇಕಾಯಿತು. ಇಂದಿನ ಸಮಾರಂಭ ನನಗೆ ಉತ್ತೇಜನ ನೀಡಿದೆ” ಎಂದರು. 

ಸನ್ಮಾನವನ್ನು ಸ್ವೀಕರಿಸಿದ ಡಾ. ಸುದೀಪ ಪಂಡಿತ ಮಾತನಾಡಿ, “ಈ ಪ್ರಶಸ್ತಿ ಹಾವೇರಿ ಜಿಲ್ಲೆಗೆ ಸಲ್ಲುವ ಗೌರವವಾಗಿದೆ. ಈ ಕಾರಣದಿಂದ ಗೆಳೆಯರ ಬಳಗದ ಘನತೆ ಹೆಚ್ಚಿದ್ದು, ‘ನಾವೆಲ್ಲ ಹೆಚ್ಚು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು’ ಎಂಬ ಸಂದೇಶ ಕೊಟ್ಟಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈದಿನ ಯೂಟ್ಯೂಬ್‌ ಬ್ಲಾಕ್ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ಆದೇಶ

ವೇದಿಕೆಯಲ್ಲಿ ಜ್ಞಾನಗಂಗಾ ಶಿಕ್ಷಣ ಸಮಿತಿಯ ಛೇರಮನ್ನರಾದ ಡಾ. ಶ್ರವಣ ಪಂಡಿತ, ಬಳಗದ ಕಾರ್ಯದರ್ಶಿ ಡಾ. ಗೌತಮ ಲೋಡಾಯಾ, ಶಿಕ್ಷಣ ಸಮಿತಿಯ ಕಾರ್ಯದರ್ಶಿ ಡಾ. ಗುಹೇಶ್ವರ ಪಾಟೀಲ ಹಾಗೂ ಕೋಶಾಧ್ಯಕ್ಷರಾದ ಸಂಜೀವಕುಮಾರ ಬಂಕಾಪೂರ ಉಪಸ್ಥಿತರಿದ್ದರು. ಆರಂಭದಲ್ಲಿ ಆರ್.ಸಿ. ನಂದಿಹಳ್ಳಿ ಪ್ರಾರ್ಥಿಸಿದರೆ, ಕಲಾವಿದ ಕರಿಯಪ್ಪ ಹಂಚಿನಮನಿ ಸ್ವಾಗತಿಸಿದರು. ಕೊನೆಯಲ್ಲಿ ಪೃಥಿರಾಜ ಬೆಟಗೇರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...