ಹಾವೇರಿ | ಬಿ. ಆರ್ ಭಾಸ್ಕರ್ ಪ್ರಸಾದ್ ಅವರ ಹೋರಾಟಕ್ಕೆ ಬೆಂಬಲ ನೀಡುತ್ತೇವೆ: ಮಾದಿಗ ಮುಖಂಡರು

Date:

“ನಾವೆಲ್ಲರೂ ಸಮಾನತೆ ಸಾರೋಣ. ಸಮಾಜದ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಾಗಬೇಕು. ಒಲಮೀಸಲಾತಿ ಜಾರಿಗಾಗಿ ಹೋರಾಟ ಮಾಡುತ್ತಿರುವ ಭಾಸ್ಕರ್ ಪ್ರಸಾದ್ ಅವರಿಗೆ ನಾವು ಬೆಂಬಲ ಕೊಡಲು ಮೈಸೂರಿಗೆ ಹೋಗುತ್ತೇವೆ” ಎಂದು ಪತ್ರಿಕಾ ಗೋಷ್ಠಿಯಲ್ಲಿ ಮಾದಿಗ ಮುಖಂಡರು ಹೇಳಿದರು.

ಹಾವೇರಿ ಜಿಲ್ಲೆಯ ಹಿರೇಕೆರೂರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯದ ಮುಖಂಡರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಮಾದಿಗ ಸಮಾಜದ ಮುಖಂಡರು ಮಹದೇವಪ್ಪ ಮಳಮ್ಮನವರ ಮಾತನಾಡಿ, “ಮಾದಿಗ ಸಮಾಜ ತಲತಲಾಂತರಗಳಿಂದ ಮೇಲ್ವರ್ಗದ ಸೇವೆ ಮಾಡಿಕೊಂಡು, ಕಷ್ಟ ಅನುಭವಿಸಿ, ಶೋಷಣೆ ಅನುಭವಿಸುತ್ತಾ ಬಂದಿದ್ದೇವೆ. ಜಸ್ಟೀಸ್ ನಾಗಮೋಹನದಾಸ್ ಹಾಗೂ ಸದಾಶಿವ ಆಯೋಗದ ವರದಿಯನ್ನು ಯತಾವತ್ತಾಗಿ ಜಾರಿಗೊಳಿಸಿ ಮಾದಿಗ ಸಮಾಜಕ್ಕೆ ಅನುಕೂಲ ಮಾಡಿಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದರೆ. ಆದರೆ ಅವರ ಸಚಿವ ಸಂಪುಟದ ಸಚಿವ ಹೆಚ್ ಸಿ ಮಹದೇವಪ್ಪ ಅವರ ಹುನ್ನಾರ ಎಲ್ಲ ಜನರಿಗೆ ಗೊತ್ತಿದೆ. ಮಾದಿಗ ಸಮಾಜವದ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಇದ್ದಕ್ಕಾಗಿ ಮಾದಿಗ ಸಮಾಜದ ಮುಖಂಡರು ಬಿ ಆರ್ ಭಾಸ್ಕರ್ ಪ್ರಸಾದ್ ಅವರು ಹರಿಹದಿಂದ ಮೈಸೂರು ವರೆಗೆ ಪಾದಯಾತ್ರೆ ಮಾಡಿ ಸಮಾಜದ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಹೇಗೆ ವಂಚಿತರಾಗಿದ್ದೇವೆ” ಎಂಬುದು ಗೊತ್ತಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಹೆಚ್ ಸಿ ಮಹದೇವಪ್ಪ ಅವರ ಗುಲಾಮನಾಗಿ ಜ್ಞಾನ ಪ್ರಕಾಶ್ ಸ್ವಾಮೀಜಿಯ ಮಾತನ್ನು ಕಟ್ಟಿಕೊಂಡು ನಮ್ಮ ಮಾದಿಗ ಸಮಾಜಕ್ಕೆ ಅನ್ಯಾಯ ಮಾಡುತ್ತಿರುವುದು ಅವರ ಬಾಯಿಯಿಂದಲೇ ಬಂದಿರುವುದು ಗೊತ್ತಾಗಿದೆ. ಹಾಗಾಗಿ ಬಿ. ಆರ್. ಭಾಸ್ಕರ್ ಪ್ರಸಾದ್ ಅವರು ಮೈಸೂರಿನಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡುತ್ತಿದ್ದಾರೆ. ಆ ಪ್ರತಿಭಟನೆಗೆ ನಾವು ಕೂಡ ಹೋಗಿ ಬೆಂಬಲ ಸೂಚಿಸುತ್ತೇವೆ” ಎಂದು ಹೇಳಿದರು.

“ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ಮಾದಿಗ ಸಮಾಜದ ಜನರು ಭಾಸ್ಕರ್ ಪ್ರಸಾದ ಅವರ ಪ್ರತಿಭಟನೆಗೆ ಬೆಂಬಲ ಕೋರುತ್ತೇವೆ” ಎಂದು ಹೇಳಿದರು.

“224 ಶಾಸಕರಿಗೆ ಸ್ವಾಭಿಮಾನ ಇದ್ದರೆ, ಮಾದಿಗ ಸಮಾಜ ನಮಗೆ ಓಟು ಕೊಟ್ಟು ಗೆಲ್ಲಿಸಿದೆ. ಮಾದಿಗ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡಬೇಕು. ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರಬೇಕು” ಎಂದರು.

“ಮುಂದೆ ಮತ್ತೆ ಚುನಾವಣೆ ಬರುತ್ತದೆ. ಸಚಿವ ಹೆಚ್ ಸಿ ಮಹದೇವಪ್ಪ ಅವರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ನಮ್ಮ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ನಾವೆಲ್ಲರೂ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ರಾಜು ತಾಳಿಕೋಟೆ ಅಗಲಿಕೆ ರಂಗಭೂಮಿಗೆ ತುಂಬಲಾರದ ನಷ್ಟ: ಹಿರಿಯ ಸಾಹಿತಿ ಸತೀಶ ಕುಲಕರ್ಣಿ

“ನಾಳೆಯಿಂದಲೇ ನಾವೆಲ್ಲರೂ ಬಿ ಆರ್ ಭಾಸ್ಕರ್ ಪ್ರಸಾದ ಅವರಿಗೆ ಬೆಂಬಲ ನೀಡಲು ಹೋಗುತ್ತಿದ್ದೇವೆ” ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಮಾದಿಗ ಸಮಾಜದ ಮುಖಂಡರು ಮಾಲತೇಶ್ ಹೊಲಬಿಕೊಂಡ, ಚಂದ್ರಪ್ಪ ಬಾಲಣ್ಣವರ, ಬಸವರಾಜ ಕಲ್ಲಹಳ್ಳಿ, ಶೇಕಪ್ಪ ನಡುಗೇರಿ, ಕುಮಾರ್  ಪ್ರಭು ನಡುವಿನಮನಿ  ಕುಮಾರ ದ್ಯಾವಣ್ಣವರ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...