ಹಾವೇರಿ | ಮಹಿಳೆಯರು ಕೌಶಲ್ಯ, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕು: ಹಣಮಂತ ಮರಗಡಿ

Date:

“ಮಹಿಳೆಯರು ಸರಕಾರದಿಂದ ಮತ್ತು ಸರ್ಕಾರೇತರ ಸಂಘ ಸಂಸ್ಥೆಗಳಿಂದ ತರಬೇತಿ ಪಡೆದು ಕೌಶಲ್ಯಗಳನ್ನು ಬೆಳೆಸಿಕೊಲ್ಲಬೇಕು. ಆಗ ಹೆಚ್ಚು ಉದ್ಯೋಗ ಅವಕಾಶಗಳನ್ನ ಪಡೆಯಬಹುದು. ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಉದ್ಯೋಗ ಮಾಡುವಲ್ಲಿ ಸದುಪಯೋಗ ಮಾಡಿಕೊಳ್ಳಬೇಕು” ಎಂದು ಸಂಪನ್ಮೂಲ ವ್ಯಕ್ತಿ ಹನುಮಂತ ಮರಗಡಿ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ತಾಲ್ಲೂಕಿನ ದಶರಥಕೊಪ್ಪ ಗ್ರಾಮದಲ್ಲಿ ಲೊಯೋಲ ವಿಕಾಸ ಕೇಂದ್ರ ಸಮಾಜ ಸೇವಾ ಸಂಸ್ಥೆ ವತಿಯಿಂದ ಸಮಗ್ರ ಸುಸ್ಥಿರ ಯೋಜನೆ ಅಡಿಯಲ್ಲಿ ಫಲಾನುಭವಿ ಮಹಿಳೆಯರಿಗೆ ಮತ್ತು ಸಮುದಾಯದ ಮಹಿಳೆಯರಿಗೆ ಏರ್ಪಡಿಸಿದ್ದ ನಾಯಕತ್ವ ಕೌಶಲ್ಯ ಅಭಿವೃದ್ಧಿ ಮತ್ತು ಸಂಘಟನೆಯ ಮಹತ್ವ  ಕುರಿತು ಮಾತನಾಡಿದರು.

“ಕೌಶಲ್ಯ ಹಾಗೂ ನಾಯಕತ್ವ ಅಳವಡಿಕೊಂಡರೆ ಮಹಿಳೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯ. ನಾಯಕತ್ವ ಎಂದರೆ ಧೈರ್ಯದಿಂದ ಮುಂದೆ ನಡೆದು ಇತರರಿಗೆ ದಾರಿ ತೋರಿಸುವ ಶಕ್ತಿಯುಳ್ಳ ಮಹಿಳೆ. ದೃಡ ನಿಲುವು, ಉತ್ತಮ ಸಂವಹನ, ಆತ್ಮವಿಶ್ವಾಸ, ಆದರ್ಶ ನೈತಿಕತೆ, ಸಮಸ್ಯ ಪರಿಹಾರ, ಪ್ರೇರಣೆ ನೀಡುವ ಗುಣಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಒಬ್ಬ ಒಳ್ಳೆಯ ನಾಯಕತ್ವ ಹೊಂದಿದ ಮಹಿಳೆ ಆಗಲು ಸಾಧ್ಯ” ಎಂದು ಹನುಮಂತ ಮರಗಡಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅಥಿತಿಗಳು ಕೆನರಾ ಬ್ಯಾಂಕ ಜಿಲ್ಲಾ ಸಂಯೋಜಕರು ಅಬ್ದುಲ್ ಪಾರೂಕ್ ಮಾತನಾಡಿ, “ಮಹಿಳೆಯರು ಸಂಘಗಳಲ್ಲಿ ಬ್ಯಾಂಕನಿಂದ ಸಾಲ ಸೌಲಭ್ಯ ಪಡೆದು, ಗುಂಪು ಸ್ವಯಂ ಉದ್ಯೋಗ ಚಟುವಟಿಕೆ ಮೂಲಕ ಮತ್ತು ವೈಯಕ್ತಿಕ ಸ್ವಯಂ ಉದ್ಯೋಗದ ಪಡೆಯಬೇಕು. ಈ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಿ ತಾವೂ ಅಭಿವೃದ್ಧಿ ಹೊಂದುವದರ ಜೊತೆ ಇತರರಿಗೆ ಮಾದರಿಯಾಗಿ ಬದುಕಬೇಕು. ಇದರ ಜೊತೆಗೆ ಸ್ಥಳೀಯ ಜನರಿಗೆ ಉದ್ಯೋಗ ಕೊಡುವದರ ಜೊತೆಗೆ ಹಳ್ಳಿಗಳಿಂದ ದೂರದ ಪಟ್ಟಣಗಳಿಗೆ ವಲಸೆ ಹೋಗುವದನ್ನು ತಡೆಗಟ್ಟಿ ಆದರ್ಶ ಬದುಕು ಕಟ್ಟಿಕೊಳ್ಳಬೇku” ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಲೊಯೋಲ ವಿಕಾಸ ಕೇಂದ್ರ ಸಿಬ್ಭಂದಿ ಪಿರಪ್ಪ ಶಿರ್ಶಿ ನಿರೂಪಿಸಿದರು, ಸ್ವಾಗತ ಮಂಜುಳಾ ನಾಗೋಜಿ,  ಪರವೀನಬಾನು ಚಿನ್ನಳ್ಳಿ ವಂದಿಸಿದರು. ಲಕ್ಷ್ಮೀ ಮಾಳಾಪೂರ ಈರಪ್ಪ ಬಸಾಪೂರ ವೇದಿಕೆಯಲ್ಲಿ ಉಪಸ್ಥಿತರಿದ್ದರು ಒಟ್ಟಾಗಿ ೩೧ ಮಹಿಳೆಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...