ಹಾವೇರಿ | ಕುಟುಂಬದ ಆರ್ಥಿಕ ಸುಧಾರಣೆಯಲ್ಲಿ ಮಹಿಳೆಯರ ಪಾತ್ರ ದೊಡ್ಡದು: ಅನಿತಾ ಡಿಸೋಜಾ

Date:

ಕುಟುಂಬ ಆರ್ಥಿಕವಾಗಿ ಸುಧಾರಣೆ ಆಗಬೇಕಾದರೆ ಮಹಿಳೆಯರ ಪಾತ್ರ ಬಹುಮುಖ್ಯವಾಗಿದೆ. ವ್ಯವಹಾರಗಳನ್ನು ನಿಭಾಯಿಸುವ ಜವಾಬ್ದಾರಿ ಅವರ ಮೇಲಿರುತ್ತದೆ. ಆದ್ದರಿಂದ ಜೀವನ ನಿರ್ವಹಣೆಗೆ ಸ್ವಉದ್ಯೋಗ ಅವಶ್ಯವಾಗಿ ಬೇಕಾಗುತ್ತದೆ. ಕಚ್ಚಾ ವಸ್ತುಗಳನ್ನು ಬಳಕೆ ಮಾಡಿಕೊಂಡು ಸಿದ್ದ ಅಲಂಕಾರಿಕ ವಸ್ತುಗಳನ್ನು ತಯಾರಿಸಿ ಮಾರುಕಟ್ಟೆಗೆ ತರಬೇಕು. ಅವುಗಳ ವೈವಿದ್ಯತೆಗಳನ್ನು ನೋಡಿ ಜನರು ತೆಗೆದುಕೊಳ್ಳುತ್ತಾರೆ ಎಂದು ರೋಶನಿ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಅನಿತಾ ಡಿಸೋಜಾ ಹೇಳಿದ್ದಾರೆ.

ಹಾವೇರಿ‌ ಜಿಲ್ಲೆಯ ಹಾನಗಲ್‌ನಲ್ಲಿ ರೋಷನಿ ಸಮಾಜ ಸೇವಾ ಸಂಸ್ಥೆ ಆಯೋಜಿಸಿದ್ದ ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಆದರ್ಶ ತಾಲೂಕು ಮಹಿಳಾ ಒಕ್ಕೂಟದ ಕಾರ್ಯದರ್ಶಿ ಚಂಪಾ ಕರ್ಜಗಿ ಮಾತನಾಡಿ, “ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಹೆಚ್ಚು ಸಮಯ ಮೊಬೈಲ್ ಬಳಕೆ ಮಾಡುವ ಮೂಲಕ ದಾರಾವಾಹಿಗಳನ್ನು ನೋಡುತ್ತ ದಿನ ಕಳೆಯುವುದುದೇ ಹೆಚ್ಚಾಗಿದೆ. ಇದ್ದರಿಂದ ಕಾಲಹರಣ ಆಗುತ್ತದೆಯೇ ಹೊರತು, ನಮ್ಮ ವೈಯಕ್ತಿಕ ಜೀವನಕ್ಕೆ ಯಾವುದೇ ಲಾಭ ಇರುವುದಿಲ್ಲ. ಆದ್ದರಿಂದ ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಉದ್ಯೋಗ ಮಾಡಲು ಮುಂದಾಗಬೇಕಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿದ್ದ ಸುಸ್ಥಿರ ಅಭಿವೃದ್ಧಿ ಸಂಸ್ಥೆಯ ಸಂಸ್ಥಾಪಕಿ ಫೀಯೋನಾ ಅಲ್ನೋಡಾ ಮಾತನಾಡಿ, “ಮನುಷ್ಯರಾದ ನಾವು ಯಾವುದೇ ಕೆಲಸ ಮಾಡಬೇಕೆಂದರೂ ಮೊದಲು ನಾವು ಆರೋಗ್ಯವಾಗಿರಬೇಕು. ಆಗ ಮಾತ್ರ ವ್ಯವಸ್ಥಿತವಾಗಿ ಅಚ್ಚುಕಟ್ಟಾಗಿ ಕೆಲಸ ಮಾಡಲು ಸಾದ್ಯವಾತ್ತದೆ. ಇಲ್ಲವಾದರೆ, ಆರೋಗ್ಯದಲ್ಲಿ ಏರುಪೇರು ಆದಂತೆ ಕೆಲಸದಲ್ಲೂ ಏರುಪೇರು ಆಗುತ್ತದೆ. ಆದ್ದರಿಂದ ಮಹಿಳೆಯರು ವೈಯಕ್ತಿಕ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು” ಎಂದರು.

ಕಾರ್ಯಕ್ರಮದಲ್ಲಿ ಸಿಸ್ಟ‌ ಅಮಿತಾ, ಮಸ್ಕರನೇಸ, ಮಹಿಳಾ ಸಬಲೀಕರಣದ ಸಂಯೋಜಕ ಡಿಗ್ಗಪ್ಪ ಲಮಾಣಿ, ಶೀಲಾ ಮ್ಯಾಗಳಮನಿ, ಗೌರಮ್ಮ ಸಿ ಮತ್ತು ಯುವತಿಯರು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...