ಹಾವೇರಿ | ಓದುಗರ ಮೇಲೆ ಪರಿಣಾಮ ಬಿರುವಂತೆ ಬರಹ ಇರಬೇಕು: ಶರಣಪ್ಪ ಎಚ್ ಸಂಗನಾಳ

Date:

“ಬರವಣಿಗೆಯು ಒಂದು ಕಲೆಯಾಗಿದ್ದು, ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಅಭಿವ್ಯಕ್ತಪಡಿಸುವ ವಿಧಾನ ಬರಹವಾಗಿದೆ. ಸರಳ ಭಾಷೆಯಲ್ಲಿ ನಿರೂಪಿಸುತ್ತ ಓದುಗರ ಮೇಲೆ ಪರಿಣಾಮ ಬಿರುವಂತೆ ಬರಹ ಇರಬೇಕು” ಎಂದು ಈದಿನ.ಕಾಮ್ ಜಿಲ್ಲಾ ವರದಿಗಾರರು ಶರಣಪ್ಪ ಎಚ್ ಸಂಗನಾಳ ಹೇಳಿದರು.

ಹಾವೇರಿ ಜಿಲ್ಲೆಯ ಹಾನಗಲ್ಲ ಪಟ್ಟಣದಲ್ಲಿ ರೋಷನಿ ಸಂಸ್ಥೆ, ಈದಿನ.ಕಾಮ್ ಹಾಗೂ ನ್ಯಾಷನಲ್ ಟ್ರಸ್ಟ್ ಸಹಯೋಗದಲ್ಲಿ ಬಡ್ತೆ ಕದಂ ಅಟಿಸಂ, ಸೆರೆಬ್ರೇಲ್ ಪಾಲಸಿ, ಮಲ್ಟಿಪಲ್ ಡಿಜೆಬಿಲಿಟಿ, ಜಾಗೃತ ಕಾರ್ಯಕ್ರಮ ಹಾಗೂ ಸುದ್ದಿ ಬರವಣಿಗೆ ಕುರಿತು ಕಾರ್ಯಗಾರದಲ್ಲಿ ಮಾತನಾಡಿದರು.

“ಬರವಣಿಗೆ ಪೂರ್ವದಲ್ಲಿ ಸಾಕಷ್ಟು ಓದು ಇರಬೇಕು. ಆ ಓದು ಪ್ರಬುದ್ಧತೆಯಿಂದ ಬರವಣಿಗೆ ಕೂಡಿರುತ್ತದೆ. ಬರವಣಿಗೆಯಲ್ಲಿ ಸರಿಯಾದ ವ್ಯಾಕರಣ, ಪದಗಳ ಬಳಕೆ ಮತ್ತು ಶೈಲಿ ಬರವಣಿಗೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದಲ್ಲಿ ನಡೆಯುವಂತಹ ಅನ್ಯಾಯ, ದೌರ್ಜನ್ಯಗಳ ವಿರುದ್ಧ ದ್ವನಿ ಎತ್ತುವ ಪ್ರತಿಯೊಬ್ಬ ಪ್ರಜ್ಞಾವಂತ ನಾಗರಿಕರು ಸಿಟಿಜನ್ ಜರ್ನಲಿಸ್ಟ್. ಅವರ ಮೂಲಕವೂ ಸಮಾಜದ ಬದಲಾವಣೆ ಮಾಡಲು ಸಾಧ್ಯವಿದೆ” ಎಂದು ಹೇಳಿದರು.

ಜೋನಲ್ ಕೋಆರ್ಡಿನೇಟರ್ ಸಂತೋಷ್ ಎಚ್ ಎಮ್ ಮಾತನಾಡಿ, “ಪತ್ರಕರ್ತರು ವಾಸ್ತವದಲ್ಲಿ ಸರ್ಕಾರಗಳ ಸಾಕು ನಾಯಿಗಳಂತೆ ಕೆಲಸ ಮಾಡುತ್ತಿದ್ದಾವೆ. ಇದರಿಂದ‌ ಮಾಧ್ಯಮಗಳ ಸ್ವಾತಂತ್ರ್ಯವನ್ನು ಉಳಿಸಿಕೊಂಡಿಲ್ಲ. ಮತ್ತು ಜನರ ಸಮಸ್ಯೆಗಳ ಬಗ್ಗೆ ಸುದ್ಧಿಗಳು ಬರೆಯುವುದು ಕಡಿಮೆ ಆಗಿದೆ. ಒಂದು ವರದಿಯಂತೆ ಸುದ್ಧಿಗಳಿಗಾಗಿ ಟಿವಿ ನೋಡುಗರ ಸಂಖ್ಯೆ ಕಡಿಮೆ ಆಗಿದೆ. ಆದ್ದರಿಂದ ಡಿಜಿಟಲ್ ಮಾಧ್ಯಮದ ಅವಶ್ಯವಿದೆ” ಎಂದರು.

IMG 20250711 WA0005

ಕಾರ್ಯಾಗಾದಲ್ಲಿ ರೋಷನಿ ಸಂಸ್ಥೆಯ ನಿರ್ದೇಶಕರು ಅನಿತಾ ಡಿಸೋಜಾ ಮಾತನಾಡಿ, “ನಮ್ಮ ಸಮಸ್ಯೆಗಳನ್ನು ನಾವೇ ಸುದ್ದಿ ಬರೆಯುವ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅನ್ನಭಾಗ್ಯಕ್ಕೆ 12 ವರ್ಷದ ಸಂಭ್ರಮ; ಜಾರಿ ಮಾಡುವ ಹಮಾಲಿ ಕಾರ್ಮಿಕರಿಗೆ ಅನ್ಯಾಯ

ಕಾರ್ಯಾಗಾರದಲ್ಲಿ ರೋಷನಿ ಸಂಸ್ಥೆಯ ಸಿಬ್ಬಂದಿಗಳು, ಸಾಮಾಜಿಕ ಹೋರಾಟಗಾರರು ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...