ಹಾವೇರಿ | ಭಗತ್ ಸಿಂಗ್ ಅವರ ವಿಚಾರಗಳನ್ನು ಯುವಜನತೆ ಅರಿಯಬೇಕು: ಬಸವರಾಜ ಎಸ್

Date:

ಸ್ವಾತಂತ್ರ್ಯ ಹೋರಾಟದ ಕ್ರಾಂತಿಯ ಕಿಡಿಯಾಗಿದ್ದ ಶಹೀದ್ ಭಗತ್ ಸಿಂಗ್ ಅವರ ವಿಚಾರಗಳನ್ನು ವಿದ್ಯಾರ್ಥಿ-ಯುವಜನರು ಅರಿತುಕೊಂಡು, ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಎಸ್ಎಫ್ಐ ಹಾವೇರಿ ಜಿಲ್ಲಾಧ್ಯಕ್ಷ ಬಸವರಾಜ ಎಸ್ ಹೇಳಿದರು.

ಹಾವೇರಿ ನಗರದ ಎಸ್ಎಫ್ಐ ಕಚೇರಿ ಎದುರು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಆಯೋಜಿಸಿದ ಶಹೀದ್ ಭಗತ್ ಸಿಂಗ್ ಅವರ 118ನೇ ಜನ್ಮ ದಿನಚಾರಣೆಯನ್ನು ಭಗತ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಗೌರವ ಸಲ್ಲಿಸಿ ಮಾತನಾಡಿದರು.

ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲಿ ಭಗತ್‌ಸಿಂಗ್ ಕಂಡ ಕನಸಿನ ಭಾರತ ಇನ್ನೂ ನಿರ್ಮಾಣವಾಗಿಲ್ಲ. ಶೋಷಿತರ ಪರವಾದ ಭಗತ್‌ಸಿಂಗ್ ನಿಲುವು ಸ್ವಾತಂತ್ರ್ಯ ಚಳುವಳಿಯ ಸಂದರ್ಭದಲ್ಲೆ ಮೂಡಿತ್ತೆಂದರೆ ಅವರ ವಯಸ್ಸಿಗೆ ಅವರ ಅಧ್ಯಯನವನ್ನು ಇಂದಿನ ಯುವಪೀಳಿಗೆ ಅನುಸರಿಸಬೇಕಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1919 ರಂದು ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡ ಭಗತ್‌ಸಿಂಗ್‌ರನ್ನು ಕ್ರಾಂತಿಯತ್ತ ತಿರುಗಿಸಿತು. ಭಗತ್‌ಸಿಂಗ್ ಕುಟುಂಬ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬವಾಗಿತ್ತು. ಸ್ವಾತಂತ್ರ್ಯ ಹೋರಾಟದ ಕಿಚ್ಚು ಮನೆಯಿಂದಲೆ ಶುರುವಾಗಿದ್ದರೂ ಕೂಡಾ ಅವರ ಸೈದ್ದಾಂತಿಕ ತಿಳುವಳಿಕೆ ಮಟ್ಟ ಚಳುವಳಿಯ ಸಂದರ್ಭದಲ್ಲಿ ಮತ್ತಷ್ಟು ಹೆಚ್ಚಿತು. ಭಗತ್‌ಸಿಂಗ್ ಗಲ್ಲು ಶಿಕ್ಷೆಗೆ ಒಳಗಾಗಿ ಬಂಧನದಲ್ಲಿದ್ದರೂ ಕೂಡ ತಮ್ಮ ಓದುವ ಹವ್ಯಾಸವನ್ನು ಬಿಟ್ಟಿರಲಿಲ್ಲ. ಅವರು ಓದುವ ಪರಿ ಹೇಗಿತ್ತೆಂದರೆ ಗಲ್ಲುಶಿಕ್ಷೆಯ ಸಮಯ ಹತ್ತಿರವಾಗಿದೆ, ಜೈಲಿನಿಂದ ಹೊರಗೆ ಬಾ ಅಂತ ಜೈಲರ್ ಷರಣ್‌ಸಿಂಗ್ ಕರೆದಾಗ, ‘ಒಬ್ಬ ಕ್ರಾಂತಿಕಾರಿ ಮತ್ತೊಬ್ಬ ಕ್ರಾಂತಿಕಾರಿಯೊಡನೆ ಸಂಭಾಷಣೆ ನಡೆಸುತ್ತಿದ್ದಾನೆ. ಸ್ವಲ್ಪ ಕಾಯಿರಿ’ ಎಂದು ಹೇಳಿದ್ದರು ಎಂದು ಬಸವರಾಜ ವಿವರಿಸಿದರು.

ಭಗತ್‌ಸಿಂಗ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರ ಅಷ್ಟೇ ಅಲ್ಲದೆ, ಭವಿಷ್ಯದಲ್ಲಿ ಭಾರತ ಹೇಗಿರಬೇಕೆಂದು ಕನಸು ಕಂಡವರು, ಜಾತಿ ತಾರತಮ್ಯ ನೀತಿಗಳು ಹೋಗಬೇಕು, ಧರ್ಮದ ಒಡೆದಾಳುವವರು, ಸಾಮ್ರಾಜ್ಯಶಾಹಿಗಳನ್ನು ದೇಶವನ್ನು ಬಿಟ್ಟು ಓಡಿಸಬೇಕು ಎಂದು ಹೇಳುತ್ತಿದ್ದ ಅವರು, ಅಸ್ಪೃಶ್ಯತೆಯ ಬಗ್ಗೆ ಭಗತ್‌ಸಿಂಗ್ ತನ್ನ 16ನೇ ವಯಸ್ಸಿನಲ್ಲಿಯೇ ಲೇಖನವನ್ನು ಬರೆದಿದ್ದರು. ಭಗತ್‌ಸಿಂಗ್ ಬಯಸಿದ್ದ ಭಾರತ ನಿರ್ಮಾಣ ನಮ್ಮೆಲ್ಲರ ಹೊಣೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಶಿರೂರು ದುರಂತ | ಶೋಧ ಕಾರ್ಯಾಚರಣೆಯ ವೇಳೆ ಎರಡು ಮಾನವ ಮೂಳೆ ಪತ್ತೆ

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಶೃತಿ ಆರ್ ಎಮ್, ಮುತ್ತರಾಜ್ ದೊಡ್ಡಮನಿ, ದೇವರಾಜ ಅಕ್ಕಸಾಲಿ, ಜಿಲ್ಲಾ ಸಹ ಕಾರ್ಯದರ್ಶಿ ಅಣ್ಣಪ್ಪ ಕೊರವರ್, ಪೂರ್ಣಿಮಾ ಡವಗಿ, ಲಲಿತಾ ಹಾವೇರಿ, ತಾಲೂಕು ಅಧ್ಯಕ್ಷ ಸುಲೇಮಾನ್ ಮತ್ತಿಹಳ್ಳಿ, ಮುಖಂಡರಾದ ರಕ್ಷಿತ ಡವಗಿ, ಫತೀಮಾ ಶೇಖ್, ಕೀರ್ತನಾ ಹಿರಿಯಕ್ಕನವರ, ತಾಲೂಕು ಅಧ್ಯಕ್ಷ, ಕೃಷ್ಣ ನಾಯಕ, ದಾನೇಶ್ವರಿ ಗಡ್ಡದ, ನಿಕೀತಾ, ಧನುಷ್ ದೊಡ್ಡಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...